MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Brahmagantu ಬಿಟ್ಟು 'ನಾ ನಿನ್ನ ಬಿಡಲಾರೆ'ಗೆ ಎಂಟ್ರಿ ಕೊಟ್ಟ ದೀಪಾ-ಚಿರು: ಊಹಿಸಲಾಗದ ಪವಾಡ ನಡೆದೇ ಹೋಯ್ತು!

Brahmagantu ಬಿಟ್ಟು 'ನಾ ನಿನ್ನ ಬಿಡಲಾರೆ'ಗೆ ಎಂಟ್ರಿ ಕೊಟ್ಟ ದೀಪಾ-ಚಿರು: ಊಹಿಸಲಾಗದ ಪವಾಡ ನಡೆದೇ ಹೋಯ್ತು!

'ಬ್ರಹ್ಮಗಂಟು' ಮತ್ತು 'ನಾ ನಿನ್ನ ಬಿಡಲಾರೆ' ಧಾರಾವಾಹಿಗಳ ಮಹಾಸಂಗಮದಲ್ಲಿ, ದೀಪಾ ಮತ್ತು ಚಿರು ಅವರ ಪ್ರವೇಶದಿಂದ ದುರ್ಗಾ ಮತ್ತು ಶರತ್ ಮದುವೆಗೆ ಇದ್ದ ಅಡ್ಡಿ ನಿವಾರಣೆಯಾಗುತ್ತದೆ. ದುರ್ಗಾಳ ಮಹತ್ವವನ್ನು ಮಗಳು ಹಿತಾಗೆ ಮನವರಿಕೆ ಮಾಡಲು ದೀಪಾ ಮಾಡಿದ ಯೋಜನೆ ಎನಾಗತ್ತೆ? ಕುತೂಹಲದ ತಿರುವು…

1 Min read
Suchethana D
Published : Nov 04 2025, 09:21 PM IST
Share this Photo Gallery
  • FB
  • TW
  • Linkdin
  • Whatsapp
17
ಬ್ರಹ್ಮಗಂಟು, ನಾ ನಿನ್ನ ಬಿಡಲಾರೆ ಮಹಾ ಸಂಗಮ
Image Credit : Instagram

ಬ್ರಹ್ಮಗಂಟು, ನಾ ನಿನ್ನ ಬಿಡಲಾರೆ ಮಹಾ ಸಂಗಮ

ಒಂದೆಡೆ ಬ್ರಹ್ಮಗಂಟು, ಇನ್ನೊಂದೆಡೆ ನಾ ನಿನ್ನ ಬಿಡಲಾರೆ. ಎರಡೂ ಸೀರಿಯಲ್​ಗಳು ಭಿನ್ನ ಭಿನ್ನ ಕಥಾ ಹಂದರ ಹೊಂದಿದ್ದರೂ ಇಲ್ಲಿ ದೀಪಾ ಮತ್ತು ಅಲ್ಲಿ ದುರ್ಗಾ ಪಾಡು ಒಂದರ್ಥದಲ್ಲಿ ಒಂದೇ. ಮದುವೆಯಾದರೂ ಗಂಡನ ಜೊತೆ ಸಂಬಂಧ ಬೆಳೆಸಿಕೊಳ್ಳದ ನಾಯಕಿಯರು ಇವರು.

27
ದೀಪಾ-ದುರ್ಗಾ
Image Credit : Facebook

ದೀಪಾ-ದುರ್ಗಾ

ಇತ್ತ ದೀಪಾ ಚಿರುವನ್ನು ಒಲಿಸಿಕೊಳ್ಳಲು ನೋಡುತ್ತಿದ್ದರೆ, ಅತ್ತ ದುರ್ಗಾಳಿಗೆ ಅಂಬಿಕಾ ಮಗಳು ಹಿತಾನೇ ಪ್ರಪಂಚ. ಆದರೆ ಹಿತಾಗೆ ದುರ್ಗಾ ಬೇಕಾದರೂ ಆಕೆಯನ್ನು ಅಮ್ಮ ಎಂದು ಒಪ್ಪಿಕೊಳ್ಳಲು ಆಕೆ ತಯಾರಿಲ್ಲ. ಅವಳು ಫ್ರೆಂಡ್ ಅಷ್ಟೇ ಹಿತಾಗೆ.

Related Articles

Related image1
'ಓಳು ಬಿಡೋ ಸುಂದರಿ' ಹಾಡಿಗೆ ಚಿಂದಿ ಉಡಾಯಿಸಿದ Brahmagantu- Naa Ninna bidalaare ನಟಿಯರು!
Related image2
Bigg Boss ಆಫರ್​ ರಿಜೆಕ್ಟ್​ ಮಾಡಿದ್ದೇಕೆ ನಟಿ Jyothi Rai? ಶಾಕಿಂಗ್​ ಹೇಳಿಕೆ ಕೊಟ್ಟ ಹಾಟ್​ ಬ್ಯೂಟಿ
37
ಮದುವೆಗೆ ಒಪ್ಪದ ಹಿತಾ
Image Credit : Instagram

ಮದುವೆಗೆ ಒಪ್ಪದ ಹಿತಾ

ಇದೀಗ ಶರತ್​ ಮತ್ತು ದುರ್ಗಾ ಮರು ಮದುವೆಯ ಬಗ್ಗೆ ಮಾತುಕತೆ ನಡೆಯುತ್ತಿದ್ದರೂ ಹಿತಾ ಅದನ್ನು ಒಪ್ಪುತ್ತಿಲ್ಲ. ಇದೇ ವೇಳೆ Naa Ninna Bidalaare ಸೀರಿಯಲ್​ಗೆ ಬ್ರಹ್ಮಗಂಟು ದೀಪಾ ಮತ್ತು ಚಿರು ಎಂಟ್ರಿಯಾಗಿದೆ.

47
ರಕ್ಷಿಸಿದ ಶರತ್​
Image Credit : Instagram

ರಕ್ಷಿಸಿದ ಶರತ್​

ಸುಕನ್ಯಾಳ ಕುತಂತ್ರದಿಂದ ಚಿರು ಮತ್ತು ದೀಪಾಳ ಜೀವಕ್ಕೆ ಅಪಾಯವಿದ್ದಾಗ, ಶರತ್​ ಬಂದು ರಕ್ಷಿಸಿದ್ದಾನೆ. ಈ ಮೂಲಕ ಎರಡೂ ಸೀರಿಯಲ್​ನ ಮಹಾಸಂಗಮ ನಡೆಯುತ್ತಿದೆ.

57
ದುರ್ಗಾ ಮನೆಬಿಡುತ್ತಾಳೆ
Image Credit : Instagram

ದುರ್ಗಾ ಮನೆಬಿಡುತ್ತಾಳೆ

ಇದೀಗ ಹಿತಾಳ ಬಾಳಿನಲ್ಲಿ ದುರ್ಗಾ ಎಷ್ಟು ಮಹತ್ವದ ಪಾತ್ರ ವಹಿಸುತ್ತಾಳೆ ಎಂದು ತಿಳಿಸಲು ದೀಪಾ ಮಾಡಿದ ಪ್ಲ್ಯಾನ್​​ ಸಕ್ಸಸ್​ ಆಗಿದೆ. ದುರ್ಗಾ ಮನೆ ಬಿಟ್ಟು ಹೋಗುತ್ತಿದ್ದಾಳೆ. ಅವಳು ಈ ಮನೆಯಲ್ಲಿ ಇರಬೇಕು ಎಂದರೆ ನಿನ್ನ ಅಪ್ಪನನ್ನು ಮದುವೆಯಾಗಬೇಕು. ಆದರೆ ನಿನಗೆ ಅದು ಇಷ್ಟವಿಲ್ಲವಲ್ಲ. ಅದಕ್ಕಾಗಿಯೇ ಮನೆ ಬಿಟ್ಟು ಹೋಗುತ್ತಾಳೆ ಎಂದಿದ್ದಾಳೆ ದೀಪಾ.

67
ಹಿತಾಗೆ ಶಾಕ್​
Image Credit : Instagram

ಹಿತಾಗೆ ಶಾಕ್​

ಇದನ್ನು ಕೇಳಿ ಹಿತಾಗೆ ಶಾಕ್​ ಆಗಿದೆ. ತಮ್ಮ ಅಮ್ಮ ಅಂಬಿಕಾ ಮಾಡುವ ಎಲ್ಲಾ ಕಾರ್ಯಗಳನ್ನೂ ದುರ್ಗಾ ಮಾಡುತ್ತಿರುವುದನ್ನು ನೆನಪಿಸಿಕೊಂಡ ಆಕೆ ದುರ್ಗಾ ಬೇಕು ಎಂದು ಓಡಿ ಹೋಗಿ ಆಕೆಯನ್ನು ತಬ್ಬಿಕೊಂಡಿದ್ದಾಳೆ. ಶರತ್​ ಮತ್ತು ದುರ್ಗಾಳ ಮದುವೆಗೆ ಒಪ್ಪಿಗೆ ಕೊಟ್ಟಿದ್ದಾಳೆ.

77
ವೀಕ್ಷಕರಿಗೆ ಆನಂದ
Image Credit : Instagram

ವೀಕ್ಷಕರಿಗೆ ಆನಂದ

ಈ ರೀತಿಯಲ್ಲಿ ದೀಪಾ ಮತ್ತು ಚಿರು ಸೇರಿ ಪವಾಡವನ್ನೇ ಮಾಡಿದ್ದಾರೆ. ಎರಡೂ ಸೀರಿಯಲ್​ಗಳ ಮಹಾಸಂಗಮ ವೀಕ್ಷಕರಿಗೆ ಆನಂದವನ್ನು ನೀಡುತ್ತಿದೆ.

ಪ್ರೊಮೋ ನೋಡಲು ಇದರ ಮೇಲೆ ಕ್ಲಿಕ್​  ಮಾಡಿ

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಬ್ರಹ್ಮಗಂಟು ಧಾರಾವಾಹಿ
ನಾ ನಿನ್ನ ಬಿಡಲಾರೆ ಧಾರಾವಾಹಿ
ಜೀ ಕನ್ನಡ
ಸಂಬಂಧಗಳು
ಕನ್ನಡ ಧಾರಾವಾಹಿ
ಟಿವಿ ಶೋ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved