MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಇಂಡಿಯಾ ವಿಶ್ವಕಪ್ ಸೋತಿದ್ದ ಬೇಜಾರು , ಕಂಠಿ ನೀನು ಕುಸ್ತಿ ಗೆದ್ದು ಮರೆಸಿಬಿಟ್ಟೆ!

ಇಂಡಿಯಾ ವಿಶ್ವಕಪ್ ಸೋತಿದ್ದ ಬೇಜಾರು , ಕಂಠಿ ನೀನು ಕುಸ್ತಿ ಗೆದ್ದು ಮರೆಸಿಬಿಟ್ಟೆ!

ಬೆಂಗಳೂರು (ನ.22): ಭಾರತ ತಂಡ ಕ್ರಿಕೆಟ್‌ ವಿಶ್ವಕಪ್‌ 2023ರ ಫೈನಲ್‌ ಪಂದ್ಯದಲ್ಲಿ ಸೋತಿದ್ದರಿಂದ ತೀವ್ರ ಬೇಸರವಾಗಿತ್ತು. ಆದರೆ, ಪುಟ್ಟಕ್ಕನ ಮಕ್ಕಳು ಧಾರವಾಹಿಯ ಕಂಠಿ ರಾಜ್ಯಮಟ್ಟದ ಕುಸ್ತಿ ಪಂದ್ಯದಲ್ಲಿ ಗೆದ್ದು, ಕ್ರಿಕೆಟ್‌ ಸೋಲಿನ ಬೇಸರವನ್ನು ಮರೆಸಿದ್ದಾನೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. 

2 Min read
Author : Sathish Kumar KH
Published : Nov 22 2023, 08:29 PM IST
Share this Photo Gallery
  • FB
  • TW
  • Linkdin
  • Whatsapp
110

ಕ್ರಿಕೆಟ್‌ ವಿಶ್ವಕಪ್‌ 2023ರ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಸೋತಿದ್ದರಿಂದ ಬೇಸರವಾಗಿತ್ತು. ಪುಟ್ಟಕ್ಕನ ಮಕ್ಕಳು ಧಾರವಾಹಿಯ ಕಂಠಿ ಕುಸ್ತಿ ಪಂದ್ಯದಲ್ಲಿ ಗೆದ್ದು, ಕ್ರಿಕೆಟ್‌ ಸೋಲಿನ ಬೇಸರವನ್ನು ಮರೆಸಿದ್ದಾನೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

210

ಪುಟ್ಟಕ್ಕನ ಮಕ್ಕಳು ಸೀರಿಯಲ್‌ನಲ್ಲಿ ಸದ್ಯ ಕುಸ್ತಿಯದೇ ಮಸ್ತಿ ನಡೆದಿದೆ. ಜೀ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರವರೆಗೆ ಪ್ರಸಾರವಾಗೋ ಟಿಆರ್‌ಪಿಯಲ್ಲಿ ನಂಬರ್ ಒನ್ ಸ್ಥಾನ ಕಾಯ್ದುಕೊಮಡಿರುವ ಪುಟ್ಟಕ್ಕನ ಮಕ್ಕಳು ಸೀರಿಯಲ್‌ನಲ್ಲೀಗ ಕುಸ್ತಿಯ ಬಾಜಿಯದ್ದೇ ಗಮ್ಮತ್ತು. 

310

ಕಂಠಿ ಹಾಗೂ ಮಾರನ ನಡುವೆ ಕುಸ್ತಿ ನಡೆದಿದೆ. ಅದರಲ್ಲಿ ಕಂಠಿ ತನ್ನ ಹೆಂಡತಿ ಸ್ನೇಹಾ ಹಾಗೂ ತಾಯಿ ಬಂಗಾರಮ್ಮನ ಆಸೆಗೆ ವಿರುದ್ಧವಾಗಿ ಕುಸ್ತಿ ಅಖಾಡಕ್ಕೆ ಇಳಿದಿದ್ದಾನೆ. ಈತನ ವಿರುದ್ಧವಾಗಿ ಮಾರ ಕುಸ್ತಿಯಲ್ಲಿ ಭಾಗವಹಿಸಿದ್ದನು. 

410

'ನೀನು ಈ ಕುಸ್ತಿ ಆಟದಲ್ಲಿ ಆಡಲೇಬೇಕು ಹಾಗೆಯೇ ನೀನು ಕೊಟ್ಟಂತಹ ಮಾತನ್ನ ನಡೆಸಿಕೊಡಬೇಕು. ಈ ಕುಸ್ತಿ ಆಟದಲ್ಲಿ ನೀನು ಗೆದ್ದೇ ಗೆಲ್ಲುತ್ತೀಯ' ಎಂದೆಲ್ಲಾ ಪ್ರೋತ್ಸಾಹದ ಮಾತುಗಳನ್ನ ಹೇಳಿ ಪುಟ್ಟಕ್ಕ ಕಂಠಿಯನ್ನು ಹುರಿದುಂಬಿಸುತ್ತಾಳೆ.
 

510

ಪುಟ್ಟಕ್ಕನ ಪ್ರಯತ್ನದಿಂದ ಬಂಗಾರಮ್ಮ ಮಗನ ಬೆಂಬಲಕ್ಕೆ ನಿಂತಿದ್ದಾಳೆ. 'ಬಂಗಾರಮ್ಮನ ಮಗನಿಗೆ ಸೋಲೆಂಬುದೇ ಇಲ್ಲ' ಅಂದಿದ್ದಾಳೆ. ಪತ್ನಿ ಸ್ನೇಹಾಳೂ ಕಂಠಿಯನ್ನು ಉತ್ತೇಜಿಸಿದ್ದಾಳೆ. ಊಹೆಯಂತೇ ಕಂಠಿ ಮಾರನನ್ನು ಮಣ್ಣು ಮುಕ್ಕಿಸಿ ಗೆಲುವಿನ ಗದೆ ಎತ್ತಿ ಹಿಡಿದಿದ್ದಾನೆ.

610

ಕಂಠಿಗೆ ಮನೆಯಲ್ಲಿ ಯಾರ ಸಪೋರ್ಟ್ ಕೂಡ ಇಲ್ಲ. ಹೆಂಡತಿ ಹಾಗೂ ತಾಯಿ ಇಬ್ಬರು ಕೂಡ ಕುಸ್ತಿ ಆಟ ಆಡೋದೇ ಬೇಡ ಎಂದು ಹಠ ಹಿಡಿದಿದ್ದಾರೆ. ಆದರೆ ಪುಟ್ಟಕ್ಕ ಮಾತ್ರ ಕಂಠಿಗೆ ಧೈರ್ಯ ಹೇಳಿದ್ದಾರೆ. ಈ ಧೈರ್ಯದ ಮೇಲೆ ಕುಸ್ತಿ ಅಖಾಡಕ್ಕೆ ಇಳಿದ ಕಂಠಿ ಗೆದ್ದು ಬೆಳ್ಳಿ ಗದೆ ತನ್ನದಾಗಿಸಿಕೊಂಡಿದ್ದಾನೆ.

710

ಇನ್ನು ಭಾರತ ಕ್ರಿಕೆಟ್‌ ತಂಡವು ವಿಶ್ವಕಪ್‌ ಕ್ರಿಕೆಟ್ 2023ರಲ್ಲಿ ಸೋತು ನಮಗೆ ಬೇಜಾರು ಮಾಡಿದರೂ, ಕಂಠಿ ಕುಸ್ತಿಯಲ್ಲಿ ಗೆದ್ದು ನಮ್ಮ ಬೇಸರ ದೂರ ಮಾಡಿದ್ದಾನೆ ಎಂದು ಅಭಿಮಾನಿಗಳು ಹೇಳಿದ್ದಾರೆ.

810

ಇದು ಉಸ್ತಾದ್ ಸೇರಿ ಎಲ್ಲರಿಗೂ ಖುಷಿ (happiness) ಕೊಟ್ಟಿದೆ. ಆದರೆ ಕಂಠಿ ನನ್ನ ಈ ಗೆಲುವಿಗೆ ಕಾರಣ ನಮ್ಮೋರು ಎಂದು ತನ್ನ ಗೆಲುವನ್ನು ಪತ್ನಿ ಸ್ನೇಹಾಗೆ ಅರ್ಪಿಸುತ್ತಾನೆ.
 

910

'ಉಸ್ತಾದ್ ನೀವು ಹೆಣ್ಮಕ್ಕಳಿಂದ ದೂರ ಇರಬೇಕು, ಅವರು ಜೊತೆಗಿದ್ರೆ ಕುಸ್ತಿ ಮೇಲೆ ಆಸಕ್ತಿ ಇರಲ್ಲ ಅಂದಿದ್ರಿ. ಆದರೆ ಇದು ನನ್ನ ವಿಚಾರದಲ್ಲಿ ಸುಳ್ಳು. ಹೆಣ್ಣುಮಕ್ಕಳೇ ನನ್ನ ಬದುಕಿನ (life) ಆಧಾರ ಸ್ತಂಭ' ಎನ್ನುತ್ತಾನೆ.

1010

ತನ್ನ ಉಸಿರೇ ತನ್ನ ಮಗ ಅಂದುಕೊಂಡಿರುವ ಬಂಗಾರಮ್ಮನ ಬಗ್ಗೆ ಕಂಠಿ ಹೆಚ್ಚು ಗೌರವ ನೀಡದಿರುವುದು ವೀಕ್ಷಕರಿಗೆ ಬೇಸರ ತರಿಸಿದೆ. ಹೆಂಡತಿ ಬಂದಮೇಲೆ ತಾಯಿನ ಮರೀಬೇಡ ಕಂಠಿ ಎಂದು ಅವರು ಬುದ್ಧಿವಾದ ಹೇಳಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಪುಟ್ಟಕ್ಕನ ಮಕ್ಕಳು

Latest Videos
Recommended Stories
Recommended image1
ಮದುವೆಯಾದ್ಮೇಲೆ ನಟನೆ ಬಿಟ್ಟಿದ್ದೆ; ಪತಿ ಬೆಂಬಲಕ್ಕೆ ಕೊನೆಗೂ ಮಣಿದೆ: Nandagokula Serial ಪ್ರಿಯಾ Interview
Recommended image2
Muddu Sose Serial: ವಿದ್ಯಾಗೆ ಸಂಕಟ ತಂದಿಟ್ಟ ವಿನೋದಿನಿ; ಈಗ ಸೋತರೆ ಮಾತ್ರ ಭದ್ರನಿಂದ ಶಾಶ್ವತವಾಗಿ ದೂರ!
Recommended image3
ಸೀರಿಯಲ್ ಆಯ್ತು, ಈಗ ಸ್ವಚ್ಚ ಮೈಸೂರು ಅಭಿಯಾನದ ರಾಯಭಾರಿ Bigg Boss ಸ್ಪರ್ಧಿ ಸೂರಜ್ ಸಿಂಗ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved