MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಕಾಂಪೌಡ್‌ನ ಗ್ರಿಲ್‌ ಮೇಲೆ ಬಿದ್ದು ಹಳ್ಳಿ ಹೈದ ರಾಜೇಶ್ ಸಾವು; ಸತ್ಯ ಬಿಚ್ಚಿಟ್ಟ ಐಶು!

ಕಾಂಪೌಡ್‌ನ ಗ್ರಿಲ್‌ ಮೇಲೆ ಬಿದ್ದು ಹಳ್ಳಿ ಹೈದ ರಾಜೇಶ್ ಸಾವು; ಸತ್ಯ ಬಿಚ್ಚಿಟ್ಟ ಐಶು!

 ರಾಜೇಶ್ ಸಾವಿಗೆ ಪದೇ ಪದೇ ಐಶ್ವರ್ಯರನ್ನು ಆರೋಪ ಮಾಡುತ್ತಿರುವ ನೆಟ್ಟಿಗರು. ನಿಜಕ್ಕೂ ಆಗಿದ್ದು ಏನೆಂದು ರಿವೀಲ್ ಮಾಡಿದ ನಟಿ...

1 Min read
Vaishnavi Chandrashekar
Published : Apr 19 2024, 11:45 AM IST
Share this Photo Gallery
  • FB
  • TW
  • Linkdin
  • Whatsapp
19

ಕನ್ನಡ ಕಿರುತೆರೆ ಜನಪ್ರಿಯ ರಿಯಾಲಿಟಿ ಶೋ ಹಳ್ಳಿ ಹೈದಾ ಪ್ಯಾಟೆಗೆ ಬಂದ ಕಾರ್ಯಕ್ರಮಕ್ಕೆ ಕಾಡಿನ ಹುಡುಗ ರಾಜೇಶ್ ಸ್ಪರ್ಧಿಸಿದ್ದ. ಆತನಿಗೆ ಜೋಡಿಯಾಗಿದ್ದದ್ದು ನಟಿ ಐಶ್ವರ್ಯ. 

29

ಆರಂಭದಿಂದಲೂ ರಾಜೇಶ್‌ ಮಾನಸಿಕವಾಗಿ ಸರಿ ಇಲ್ಲ ಎಂದು ಆಗಾಗ ಮಾತುಗಳು ಕೇಳಿ ಬರುತ್ತಿತ್ತು. ಹೀಗಾಗಿ ಕಾರ್ಯಕ್ರಮದಲ್ಲೂ ಜಗಳ ಆಗುತ್ತಿತ್ತು. ಆದರೆ ಈ ಜೋಡಿ ವಿನ್ನರ್ ಟ್ರೋಫಿ ಪಡೆದರು. 

39

ಖುಷಿಯಾಗಿ ಯಶಸ್ಸಿನಲ್ಲಿ ತೇಲುತ್ತಿದ್ದ ರಾಜೇಶ್‌ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಐಶ್ವರ್ಯ ಎಂದು ಈಗಲೂ ಅನೇಕರು ಮಾತನಾಡಿಕೊಳ್ಳುತ್ತಾರೆ. ಹೀಗಾಗಿ ಐಶು ಅಸಲಿ ಸತ್ಯ ಬಿಚ್ಚಿಟ್ಟರು. 

49

'ರಾಜೇಶ್ ತೀರಿಕೊಂಡ ಸಂದರ್ಭದಲ್ಲಿ ಮಾಧ್ಯಮದಿಂದ ನನಗೆ ಕರೆ ಬರುತ್ತೆ ರಾಜೇಶಾ ಬಿದ್ದು ಹೋಗಿದ್ದಾನೆ ಎಂದು. ನೋಡೋಕೆ ಸಣ್ಣ ಇದ್ರೂ ತುಂಬಾ ಗಟ್ಟಿಯಿದ್ದ. 

59

ಸಾಕಷ್ಟು ಜನ ಕರೆ ಮಾಡಿ ತೀರಿಕೊಂಡಿದ್ದಾನೆ ಎಂದು ಹೇಳುತ್ತಾರೆ ನಿಜ ಅಥವಾ ಸುಳ್ಳು ಎಂದು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ತೆಗೆದುಕೊಂಡೆ. 

69

ಹಾಸ್ಪಿಟಲ್‌ನಲ್ಲಿ ರಾಜೇಶ್‌ ವಿಡಿಯೋ ನೋಡಿ ಶಾಕ್ ಆಯ್ತು, ನಮ್ಮ ಸಿನಿಮಾ ನಿರ್ದೇಶಕರ ರಾಜೇಶ್ ಊರಿಗೆ ಹೋಗಿದ್ದೆ. ಟ್ರೋಫಿ ಗೆದ್ದ ಕ್ಷಣ ಬಂದಿದ್ದ ಜನಕ್ಕಿಂತ ಡಬಲ್ ಜನ ಬಂದಿದ್ದರು' ಎಂದು ಕನ್ನಡ ಯುಟ್ಯೂಬ್ ಚಾನೆಲ್‌ವೊಂದರಲ್ಲಿ ಮಾತನಾಡಿದ್ದಾರೆ. 

79

 'ಸಾಕಷ್ಟು ಜನರು ನನಗೆ ಕೇಳುತ್ತಾರೆ ರಾಜೇಶ್ ಸೂಸೈಡ್ ಮಾಡಿಕೊಂಡಿದ್ದಕ್ಕೆ ನಾನು ಕಾರಣ ಅಲ್ಲ. ಬಳ್ಳೆಹಾಡಿ ಕಾಡಿನಿಂದ ಮೈಸೂರಿನಲ್ಲಿರುವ ಮನೆಗೆ ಶಿಫ್ಟ್‌ ಆಗಿದ್ದರು ಆಗಾಗ ನಾನು ಸಾಯುವೆ ಎಂದು ಪೋಷಕರಿಗೆ ಹೆದರಿಸುತ್ತಿದ್ದನಂತೆ. 

89

ಅವತ್ತು ಕೂಡ ಹೆದರಿಸಲು ಹೋಗಿದ್ದಾನೆ ಅಲ್ಲಿಂದ ಬಿದ್ದಿದ್ದರೂ ಕೈ ಕಾಲು ಮುರಿಯುತ್ತಿರಲಿಲ್ಲ ಆದರೆ ಹಿಂದಿನ ದಿನ ಮನೆ ಮಾಲೀಕರು ಕಾಂಪೌಂಡ್‌ಗೆ ಶಾರ್ಪಾಗಿರುವ ಗ್ರಿಲ್ ಹಾಕಿಸಿದ್ದಾರೆ ಅದರ ಮೇಲೆ ಬಿದ್ದ ತಕ್ಷಣ ಆ ಕಂಬಿ ಅವನ ಹೊಟ್ಟೆಗೆ ಚುಚ್ಚಿ ಅಗಲಿರುವುದು. 

99

ರಾಜೇಶ್ ಸಾವಿಗೆ ಯಾರೂ ಕಾರಣವಲ್ಲ. ನನಗೆ ತುಂಬಾ ಜನ ಪ್ರೀತಿ ಕೊಡುತ್ತಾರೆ ಅದಕ್ಕೆ ಚಿರಋಣಿಯಾಗಿರುತ್ತೀನಿ ಆದರೆ ಅನೇಕರು ರಾಜೇಶ್ ಸಾವಿಗೆ ನನ್ನ ಹೆಸರು ಎಳೆಯುತ್ತಾರೆ' ಎಂದು ಐಶ್ವರ್ಯ ಹೇಳಿದ್ದಾರೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved