MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಅಂದು ಸುಧಾರಾಣಿ ಜೊತೆ ಬಾಲನಟನಾಗಿದ್ದವನೀಗ ಅಮೃತಧಾರೆ ವಿಲನ್!

ಅಂದು ಸುಧಾರಾಣಿ ಜೊತೆ ಬಾಲನಟನಾಗಿದ್ದವನೀಗ ಅಮೃತಧಾರೆ ವಿಲನ್!

ಅಮೃತಧಾರೆ ಸೀರಿಯಲ್‌ನಲ್ಲಿ ಶಕುಂತಲಾ ಮಗ ಜೈದೇವ್ ಆಗಿ, ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ರಾಣವ್ ಗೌಡ ಕುರಿತು ಇಂಟ್ರೆಸ್ಟಿಂಗ್ ವಿಷ್ಯ ಇಲ್ಲಿ ಹೇಳ್ತೀವಿ ಕೇಳಿ.  

2 Min read
Pavna Das
Published : Jun 13 2024, 01:08 PM IST| Updated : Jun 14 2024, 01:39 PM IST
Share this Photo Gallery
  • FB
  • TW
  • Linkdin
  • Whatsapp
18

ಝೀ ಕನ್ನಡದಲ್ಲಿ (Zee Kannada)  ಪ್ರಸಾರವಾಗುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ದಿವಾನ್ ಮಲ ತಾಯಿ ಶಕುಂತಲಾ ಎಷ್ಟೊಂಡು ಕೆಟ್ಟವಳು ಅನ್ನೋದು ನಿಮಗೆ ಗೊತ್ತಿದೆ. ಆಕೆಯ ಮಗ ಜೈದೇವ್ ಕೂಡ ವಿಲನ್. ಈ ಜೈದೇವ್ ಪಾತ್ರಕ್ಕೆ ಜೀವ ತುಂಬಿರೋರು ರಾಣವ್ ಗೌಡ. 
 

28

ರಾಣವ್ ಗೌಡ (Raanav Gowda) ಅವರನ್ನು ಕಿರುತೆರೆಯ ಫೇವರಿಟ್ ವಿಲನ್. ಮಲ್ಲಿಯ ಗಂಡನಾಗಿ, ಒಂದು ಕಡೆ ಒಳ್ಳೆಯವನಂತೆ, ಮತ್ತೊಂದು ಕಡೆ ಕುತಂತ್ರದಿಂದ ಹೆಂಡತಿಯನ್ನು, ಅತ್ತಿಗೆ ಭೂಮಿಕಾಳನ್ನು ಸಾಯಿಸಲು ಹಾತೊರಿಯುವ ರೌಡಿಯಾಗಿ ಅದ್ಭುತವಾಗಿ ಅಭಿನಯಿಸುತ್ತಿದ್ದಾರೆ. ಇವರ ಬಗ್ಗೆ ಒಂದಿಷ್ಟು ಇಂಟ್ರೆಸ್ಟಿಂಗ್ ಮಾಹಿತಿ ತಿಳಿಯೋಣ. 
 

38

ಹಲವು ವರ್ಷಗಳ ಹಿಂದೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ, ತುಳಸಿ ಧಾರಾವಾಹಿಯಲ್ಲಿ, ಸುಧಾರಾಣಿಯವರ (Sudharani) ಜೊತೆ ಬಾಲನಟನಾಗಿ ನಟಿಸುವ ಮೂಲಕ ರಾಣವ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಆವಾಗ ರಾಣವ್ ಆರನೇ ತರಗತಿಯಲ್ಲಿ ಓದುತ್ತಿದ್ದರು. 
 

48

ಬಾಲ್ಯದಲ್ಲಿಯೇ ನಟನೆಯ ಕಡೆಗೆ ಒಲವು ಬೆಳೆಸಿಕೊಂಡಿದ್ದ ರಾಣವ್ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿವಹಿಸಿದ್ದೇ ಹೆಚ್ಚು. ಅದೇ ಕಾರಣದಿಂದ ಇವರು ಇಂಜಿನಿಯರಿಂಗ್ ಅರ್ಧದಲ್ಲೇ ಬಿಟ್ಟು, ಮತ್ತೆ ನಟನೆಯತ್ತ ಮುಖ ಮಾಡಿದರು. ಸದ್ಯ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. 
 

58

ಉದಯ ಟಿವಿಯಲ್ಲಿ (Udaya Tv) ಪ್ರಸಾರವಾಗುತ್ತಿದ್ದ ಅರಮನೆ ಧಾರಾವಾಹಿಯಲ್ಲಿ ನಾಯಕನ ಗೆಳೆಯನ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ರಾಣವ್ ಮತ್ತೆ ಹಿಂದಿರುಗಿ ನೋಡೇ ಇಲ್ಲ. ಒಂದಾದ ಮೇಲೆ ಒಂದರಂತೆ ಹಲವು ಧಾರಾವಾಹಿಗಳಲ್ಲಿ ಇವರು ನಟಿಸಿದರು. 
 

68

ನಂತರ ಬಿ.ಸುರೇಶ್ ಅವರ 'ಜೀವನದಿ’, ಕಸ್ತೂರಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ರಾಜಕುಮಾರಿ, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಬರುತ್ತಿದ್ದ ವರಲಕ್ಷ್ಮೀ ಸ್ಟೋರ್ಸ್ , ಮತ್ತೆ ವಸಂತ, ಝೀ ಕನ್ನಡದ ಕಮಲಿ ಧಾರಾವಾಹಿಯಲ್ಲೂ ನಟಿಸುವ ಮೂಲಕ ವೀಕ್ಷಕರ ಮನ ಗೆದ್ದಿದ್ದರು. 
 

78

ಸದ್ಯಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಕನ್ಯಾದಾನ ಧಾರಾವಾಹಿಯಲ್ಲಿ ವಿಜಯ್ ಪಾತ್ರದಲ್ಲಿ ಹಾಗೂ ಝೀ ಕನ್ನಡಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆ ಸೀರಿಯಲ್ (Amruthadhare Serial) ನಲ್ಲಿ ಜೈ ದೇವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. 
 

88

ಕಿರುತೆರೆಯಲ್ಲಿ ಮಾತ್ರವಲ್ಲ ಇವರು ಹಿರಿತೆರೆಯಲ್ಲೂ ನಟಿಸಿದ್ದಾರೆ. ಸ್ಯಾಂಡಲ್ ವುಡ್ ನ ಮತ್ತೆ ಬಾ ಉಪೇಂದ್ರ, ಶೀಕಂಠ, ವಿರಾಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಟ್ಟಲ್ಲಿ ನೆಗೆಟಿವ್ ಮತ್ತು ಪಾಸೀಟಿವ್ ಎರಡೂ ಪಾತ್ರಗಳಿಗೂ ರಾಣವ್ ಜೀವ ತುಂಬಿ ನಟಿಸುತ್ತಾರೆ ಅನ್ನೋದು ಸುಳ್ಳಲ್ಲ. 
 

About the Author

PD
Pavna Das
ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved