ಹೊಸ ಮನೆಗೆ ಭೂಮಿ ಪೂಜೆ ಮಾಡಿದ ಅನುಶ್ರೀ
ಹೊಸ ಮನೆ ಕಟ್ಟಿಸಲು ಭೂಮಿ ಪೂಜೆ ಮಾಡಿದ ಜನಪ್ರಿಯ ನಿರೂಪಕಿ ಅನುಶ್ರೀ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್...

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ (Anushree) ಹೊಸ ಮನೆ ಕಟ್ಟಿಸಲು ತಮ್ಮ ಜಮೀನಿನಲ್ಲಿ ಭೂಮಿ ಪೂಜೆ ಮಾಡಿದ್ದಾರೆ.
ಹನುಮಂತ ನಗರದ (Hanumanth Nagar) ಶ್ರೀ ಕುಮಾರಸ್ವಾಮಿ ದೇಗುಲದ ಅರ್ಚಕರಾದ ಮಂಜುನಾಥ್ ಭಟ್ ಅವರು ಭೂಮಿ ಪೂಜೆ ಮಾಡಿದ್ದಾರೆ.
ಜಯನಗರ ಹೌಸಿಂಗ್ ಸೊಸೈಟಿ ಲೇಔಟ್ನ ಸುಬ್ರಹ್ಮಣ್ಯ ಪುರಂನಲ್ಲಿ ಜಾಗ ಖರೀದಿ ಮಾಡಿದ್ದಾರೆ. ಹೊಸ ಮನೆ ಹೊಸ ಶುಭಾರಂಭಕ್ಕೆ ಸಜ್ಜಾಗಿದ್ದಾರೆ.
ಅನುಶ್ರೀ ತಾಯಿ ಮತ್ತು ಸಹೋದರನ ಜೊತೆ ಭೂಮಿ ಪೂಜೆ ಸಲ್ಲಿಸಿದ್ದಾರೆ. ಅನುಶ್ರೀಗೆ ಆಪ್ತರಾಗಿರು ವಸ್ತ್ರ ವಿನ್ಯಾಸಕಿ ಅಂಜಲಿ ಕುಟುಂಬ ಭಾಗಿಯಾಗಿದ್ದರು.
ಪಿಂಕ್ ಬಣ್ಣದ ಸೆಲ್ವಾರ್ನಲ್ಲಿ ಅನುಶ್ರೀ ಕಾಣಿಸಿಕೊಂಡಿದ್ದಾರೆ. ಆಪ್ತರು ಮಾತ್ರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಹಲವು ವರ್ಷಗಳಿಂದ ಇಂಡಸ್ಟ್ರಿಯಲ್ಲಿ ಶ್ರಮಿಸಿರುವ ಅನುಶ್ರೀ ಅವರಿಗೆ ಬಿಗ್ ಸಕ್ಸಸ್ ಸಿಗಲಿ ಎಂದು ಅಭಿಮಾನಿಗಳು ಆಶಿಸುತ್ತಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.