MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಅತ್ತ ದರಿ ಇತ್ತ ಪುಲಿ: ಅಡಕತ್ತರಿಯಲ್ಲಿ ತಗ್ಲಾಕೊಂಡ ಕರ್ಣ, ಏನ್ ಮಾಡ್ತಾನೆ ಕರುನಾಡಿನ ಕಣ್ಮಣಿ?

ಅತ್ತ ದರಿ ಇತ್ತ ಪುಲಿ: ಅಡಕತ್ತರಿಯಲ್ಲಿ ತಗ್ಲಾಕೊಂಡ ಕರ್ಣ, ಏನ್ ಮಾಡ್ತಾನೆ ಕರುನಾಡಿನ ಕಣ್ಮಣಿ?

ಮನೆಯಿಂದ ಹೊರಬಂದ ಕರ್ಣನ ಪರಿಸ್ಥಿತಿ ಅಯೋಮಯ. ತಂದೆಯ ಆಜ್ಞೆ ಮತ್ತು ಅಜ್ಜಿಯ ಪ್ರೀತಿಯ ನಡುವೆ ಸಿಲುಕಿರುವ ಕರ್ಣ ಏನು ಮಾಡ್ತಾನೆ? ನಿತ್ಯಾಳ ಪ್ರವೇಶ ಈ ಸಮಸ್ಯೆಗಳಿಗೆ ಪರಿಹಾರವಾಗುವುದೇ?

1 Min read
Mahmad Rafik
Published : Jul 15 2025, 11:30 AM IST| Updated : Jul 15 2025, 11:31 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Zee Kannada FB

ಸದ್ಯ ಕರ್ಣ ಸೀರಿಯಲ್ ನಂಬರ್ ಒನ್ ಸ್ಥಾನದಲ್ಲಿದೆ. ಅತ್ತೆ ನಯನತಾರಾಳ ಮೋಸದ ಜಾಲದಲ್ಲಿ ಸಿಲುಕಿರುವ ಕರ್ಣ ಮನೆಯಿಂದ ಹೊರಗೆ ಬಂದಿದ್ದಾನೆ. ಜೋರು ಮಳೆಯಲ್ಲಿಯೇ ಕುಟುಂಬಸ್ಥರು ಬಾಗಿಲು ತೆರೆಯುತ್ತಾರೆ ಎಂದು ಕರ್ಣ ಕಾಯುತ್ತಿದ್ದಾನೆ.

25
Image Credit : Zee Kannada FB

ಕಾಲೇಜಿಗೆ ಚಕ್ಕರ್ ಹಾಕುತ್ತಿದ್ದ ಸಂಜಯ್‌ ಬಂಡವಾಳವನ್ನು ನಿಧಿ ಎಲ್ಲರ ಮುಂದೆ ಬಯಲು ಮಾಡಿದ್ದಳು. ಇದರಿಂದ ಕೋಪಗೊಂಡ ಸಂಜಯ್, ಗರ್ಭಿಣಿಗೆ ನಿಧಿ ನೀಡುತ್ತಿದ್ದ ಇಂಜೆಕ್ಷನ್ ಬದಲಾಯಿಸಿದ್ದನು. ಇದರಿಂದ ನಿಧಿಯನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು.

Related Articles

Related image1
Kiran Raj: ಕರ್ಣ ಧಾರಾವಾಹಿಯಲ್ಲೊಂದೇ ಅಲ್ಲ, ರಿಯಲ್‌ ಆಗಿಯೂ ಡಾಕ್ಟರ್‌ ಆದ ಕಿರಣ್‌ ರಾಜ್!‌ ವಿಡಿಯೋ ವೈರಲ್!
Related image2
ನಗುವಿನ ಕಚಗುಳಿ ಇಡಲು ಕರ್ಣ ಸೀರಿಯಲ್‌ಗೆ ಖ್ಯಾತ ಹಾಸ್ಯ ನಟನ ಎಂಟ್ರಿ
35
Image Credit : Zee Kannada FB

ನನ್ನ ತಂಗಿ ಗೋಲ್ಡ್ ಮೆಡಲಿಸ್ಟ್, ಆಕೆ ಇಂತಹ ಸಿಲ್ಲಿ ಮಿಸ್‌ಟೇಕ್ ಮಾಡಲ್ಲ ಎಂದು ನಿಧಿ ಆಸ್ಪತ್ರೆಯಲ್ಲಿ ಡಾ.ಕರ್ಣ ಮತ್ತು ಆಡಳಿತ ಮಂಡಳಿ ಸದಸ್ಯರನ್ನು ಕ್ಲಾಸ್ ತೆಗೆದುಕೊಂಡು ಬೆವರಿಳಿಸಿದ್ದಳು. ಸಿಸಿಟಿವಿಯಲ್ಲಿ ಸಂಜಯ್ ಇಂಜೆಕ್ಷನ್ ಬದಲಾಯಿಸಿದ್ದು ರೆಕಾರ್ಡ್ ಆಗಿತ್ತು. ಕೊನೆಗೆ ನಿತ್ಯಾ ಒತ್ತಾಯಕ್ಕೆ ಎಲ್ಲರ ಮುಂದೆ ನಿಧಿಗೆ ಸಂಜಯ್ ಕ್ಷಮೆ ಕೇಳಿದ್ದನು.

45
Image Credit : Zee Kannada FB

ಈ ವಿಷಯ ಕರ್ಣನ ಮನೆಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸ್ವಂತ ಮಗನಿಗೆ ಅವಮಾನ ಆಗಿದ್ದಕ್ಕೆ ಕರ್ಣನನ್ನು ತಂದೆ ಮನೆಯಿಂದ ಹೊರಹಾಕಿದ್ದಾರೆ. ಇತ್ತ ಅಜ್ಜಿ, ಮೊಮ್ಮಗ ಕರ್ಣನನ್ನು ಮನೆಯೊಳಗೆ ಕರೆದುಕೊಂಡು ಬಂದಿದ್ದಾಳೆ. ಆದ್ರೆ ಸಂಜಯ್ ಕಾಲ್ಮುಟ್ಟಿ ಕ್ಷಮೆ ಕೇಳುವಂತೆ ತಂದೆ ಆಗ್ರಹಿಸಿದ್ದಾರೆ. ಕ್ಷಮೆ ಕೇಳಿದ್ರೆ ನನ್ನ ಮೇಲೆ ಆಣೆ ಎಂದು ಅಜ್ಜಿ ಹೇಳಿದ್ದಾರೆ.

55
Image Credit : Zee Kannada FB

ಕರ್ಣ ತಂದೆಯನ್ನು ಗೌರವಿಸುವ ವ್ಯಕ್ತಿ. ಇತ್ತ ಅಜ್ಮಿಯ ಪ್ರೀತಿಯ ಮೊಮ್ಮಗ. ಇದೀಗ ಕರ್ಣ ಯಾರ ಮಾತು ಕೇಳುತ್ತಾನೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ. ಕರ್ಣನ ಈ ಎಲ್ಲಾ ಸಮಸ್ಯೆಗಳು ದೂರವಾಗಬೇಕಾದ್ರೆ ನಿತ್ಯಾ ಅವನ ಹೆಂಡ್ತಿಯಾಗಿ ಬರಬೇಕೆಂದು ವೀಕ್ಷಕರು ಆಸೆಪಡುತ್ತಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ಣ ಧಾರಾವಾಹಿ
ಕಿರಣ್ ರಾಜ್
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved