MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ

Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ

'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ ವಿಶ್ವನ ತಾಯಿ ಲಲಿತಾ ಪಾತ್ರವನ್ನು ಹಠಾತ್ತನೆ ಅಂತ್ಯಗೊಳಿಸಲಾಗಿದೆ. ಜಯಂತ್‌ನಿಂದ ತಳ್ಳಲ್ಪಟ್ಟು ಸಾವನ್ನಪ್ಪುವ ದೃಶ್ಯದ ಮೂಲಕ ನಟಿ ವಿಜಯಲಕ್ಷ್ಮಿ ಸುಬ್ರಮಣಿ ಅವರ ಪಾತ್ರಕ್ಕೆ ಮುಕ್ತಾಯ ಹಾಡಲಾಗಿದೆ.  ಇದೀಗ ಸನ್ಮಾನ ಮಾಡಿರುವ ಬಗ್ಗೆ ನಟಿ ಹೇಳಿದ್ದೇನು?

2 Min read
Author : Suchethana D
Published : Jan 16 2026, 07:22 PM IST
Share this Photo Gallery
  • FB
  • TW
  • Linkdin
  • Whatsapp
16
ವಿಶ್ವನ ಅಮ್ಮನ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ಸುಬ್ರಮಣಿ
Image Credit : actress vijayalakshmi subramani intagram

ವಿಶ್ವನ ಅಮ್ಮನ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ಸುಬ್ರಮಣಿ

ಲಕ್ಷ್ಮೀ ನಿವಾಸ (Lakshmi Nivasa) ಸೀರಿಯಲ್​ನಲ್ಲಿ ವಿಶ್ವನ ತಾಯಿ ಲಲಿತಾ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ಸುಬ್ರಮಣಿ (vijayalakshmi Subramani) ನಟಿಸುತ್ತಿದ್ದರು. ಆದರೆ ಅವರ ಪಾತ್ರವನ್ನು ಈಗ ಮುಗಿಸಲಾಗಿದೆ. ಮನೆ ಬಿಟ್ಟು ಹೋಗಿರುವ ಜಾಹ್ನವಿ, ತನ್ನ ಸ್ನೇಹಿತೆಯ ಮಗಳು ಎಂದು ಗೊತ್ತಾದ ತಕ್ಷಣ ಆಕೆಯನ್ನು ವಾಪಸ್​ ಮನೆಗೆ ಕರೆದು ಆಕೆಗೆ ತಾಯಿಯ ಪ್ರೀತಿ ನೀಡಿದ ಲಲಿತಾ ಅವರನ್ನು ಸಾಯಿಸುವ ಮೂಲಕ ಪಾತ್ರಕ್ಕೆ ಮುಕ್ತಾಯ ಹಾಡಲಾಗಿದೆ.

26
ಲಲಿತಾ ಪಾತ್ರ ಅಂತ್ಯ
Image Credit : Instagram

ಲಲಿತಾ ಪಾತ್ರ ಅಂತ್ಯ

ಜಾಹ್ನವಿಯನ್ನು ಹುಡುಕಿಕೊಂಡು ವಿಶ್ವನ ಮನೆಗೆ ಜಯಂತ್​ ಬರುತ್ತಾನೆ. ಆದರೆ, ಲಲಿತಾ ಆತನನ್ನು ತಡೆಯುತ್ತಾಳೆ. ನನ್ನ ಕೊನೆಯ ಉಸಿರು ಇರುವವರೆಗೂ ನಾನು ಅವಳನ್ನು ಭೇಟಿಯಾಗಲು ಬಿಡುವುದಿಲ್ಲ ಎನ್ನುತ್ತಾಳೆ. ಇದರಿಂದ ಕೋಪಗೊಂಡ ಜಯಂತ್​ ಆಕೆಯನ್ನು ದೂಕಿದಾಗ ಅಲ್ಲಿಯೇ ಲಲಿತಾ ಸಾವನ್ನಪ್ಪುತ್ತಾಳೆ.

Related Articles

Related image1
ಒಡತಿ ಟೊಮೆಟೊ ಕೊಟ್ಟಿಲ್ಲವೆಂದು ಪೊಲೀಸರನ್ನು ಕರೆಸಿದ ಗಿಳಿ! ಅಚ್ಚರಿಯ ವಿಡಿಯೋ ವೈರಲ್​
Related image2
BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
36
ನೋವು ತೋಡಿಕೊಂಡಿದ್ದ ನಟಿ
Image Credit : Instagram

ನೋವು ತೋಡಿಕೊಂಡಿದ್ದ ನಟಿ

ಈ ದೃಶ್ಯದ ಅವಶ್ಯಕತೆಯೇ ಇರಲಿಲ್ಲ. ಆದರೂ ತಮ್ಮನ್ನು ವಿನಾಕಾರಣ ಸಾಯಿಸಲಾಗಿದೆ ಎಂದು ನಟಿ ವಿಜಯಲಕ್ಷ್ಮಿ ಅವರು ಇದಾಗಲೇ ಕೆಲವು ಪೋಸ್ಟ್​ಗಳ ಮೂಲಕ ಅಸಮಾಧಾನ ಹೊರಹಾಕಿದ್ದರು. ಒಂದು ಒಳ್ಳೆ ಪಾತ್ರವನ್ನ ಸುಖಾಸುಮ್ಮನೆ ಸಾಯಿಸೋದು? ಈ ಧಾರಾವಾಹಿಗೆ ಕಥೆ ಮಾಡುವವರ ಪಾಂಡಿತ್ಯ ನಿಪುಣತೆಗೆ ಕನ್ನಡಿ ಹಿಡಿದಿದೆ ಎನ್ನುತ್ತಾ ತಮ್ಮ ಪಾತ್ರವನ್ನು ಸಾಯಿಸಿರುವ ಬಗ್ಗೆ ನೋವು ತೋಡಿಕೊಂಡಿದ್ದರು ನಟಿ.

46
ಇನ್ನೊಂದು ಪೋಸ್ಟ್​
Image Credit : Instagram

ಇನ್ನೊಂದು ಪೋಸ್ಟ್​

ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ನೊಂದು ಪೋಸ್ಟ್​ ಹಾಕಿದ್ದಾರೆ. ಅದರಲ್ಲಿ ಲಲಿತಾ ಸಾವಿನ ಬಳಿಕ, ಅವರ ರೋಲ್​ ಮುಗಿದ ಕಾರಣ ಅವರನ್ನು ಆತ್ಮೀಯವಾಗಿ ಸೀರಿಯಲ್​ನಿಂದ ಬೀಳ್ಕೊಟ್ಟ ದೃಶ್ಯವಿದೆ.

56
ಜಯಂತ್​ ವಿಷ್​
Image Credit : Instagram

ಜಯಂತ್​ ವಿಷ್​

ಇದರಲ್ಲಿ ಜಯಂತ್​ ಪಾತ್ರಧಾರಿ ದೀಪಕ್ ಸುಬ್ರಹ್ಮಣ್ಯ (Deepak Subramanya) ಅವರು ಕೇಕ್​ ಕಟ್​ ಮಾಡುವುದನ್ನು ನೋಡಬಹುದಾಗಿದೆ. ಕೇಕ್​ ತಂದು ಅದರಲ್ಲಿ ವಿಜಯಲಕ್ಷ್ಮಿ ಅವರಿಗೆ ವಿಷ್​ ಮಾಡಲಾಗಿದೆ. ಅದನ್ನು ಶೇರ್​ ಮಾಡಿಕೊಂಡಿರೋ ನಟಿ, ಕೊನೆ ದಿನದ ಲಲಿತಾ ಸಾವಿನ ಚಿತ್ರೀಕರಣ ಮುಗಿದ ನಂತರ ಜಯಂತ್ ಕೈಯಲ್ಲೆ ಪೇಟ ತೋಡಿಸಿ ಸನ್ಮಾನ ಮಾಡಿದ್ದು ಎಂದು ತಮಾಷೆಯಿಂದ ಬರೆದುಕೊಂಡಿದ್ದಾರೆ.

66
ಕಾರಣ ಇದುವರೆಗೂ ಗೊತ್ತಿಲ್ಲ
Image Credit : actress vijayalakshmi subramani intagram

ಕಾರಣ ಇದುವರೆಗೂ ಗೊತ್ತಿಲ್ಲ

ಆದರೆ, ಇದು ತಮಾಷೆಯಲ್ಲ, ನೋವಿನ ವಿಷಯವೆನ್ನುವುದು ಅವರ ಮುಂದಿನ ಲೈನ್​ಗಳಲ್ಲಿ ತಿಳಿಯುತ್ತದೆ. ನಾನು ನನ್ನ ಪಾತ್ರ ಸೀರಿಯಲ್ ನಲ್ಲಿ ಮುಗಿದ ಮೇಲೆ ಮಲೇಷ್ಯಾಗೆ ಹೋಗಿದ್ದೆ. ನಾನು ಬೇರೆ ಯಾವ ಪ್ರಾಜೆಕ್ಟೂ ಒಪ್ಪಿಕೊಂಡಿರಲಿಲ್ಲ, ನನ್ನ ಪಾತ್ರಕ್ಕೆ ಅಂತ್ಯ ಹಾಡಿರೋದು ನನ್ನಿಂದಲ್ಲ, ಕಾರಣ ನನಗೆ ಇದುವರೆಗೂ ಗೊತ್ತಿಲ್ಲ ಎಂದು ನಟಿ ನೋವು ತೋಡಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಲಕ್ಷ್ಮೀ ನಿವಾಸ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ
ಸಂಬಂಧಗಳು
ಕನ್ನಡ ಧಾರಾವಾಹಿ

Latest Videos
Recommended Stories
Recommended image1
ಬಿಗ್ ಬಾಸ್ ಟ್ರೋಫಿನೂ ಇಲ್ಲ, ಜುಟ್ಟೂ ಇಲ್ಲ; 24 ಸ್ಪರ್ಧಿಗಳನ್ನು ಹೊರಹಾಕ್ತೀನೆಂದ ಧ್ರುವಂತ್ ಗೆಟಪ್ ಚೇಂಜ್!
Recommended image2
Kichcha Sudeep: ರಣಹದ್ದಿನ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು? ನಿಜ ಏನು?
Recommended image3
BBK 12 ಫಿನಾಲೆ ಬೆನ್ನಲ್ಲೇ ಹೊಸ ವಿವಾದ, ಗಿಲ್ಲಿ ನಟ ಅಶ್ವಿನಿ ಗೌಡ ಫ್ಯಾನ್ಸ್ ನಡುವೆ ಭಾಷೆ ಜೊತೆ ಜಾತಿ ಜಗಳ..!
Related Stories
Recommended image1
ಒಡತಿ ಟೊಮೆಟೊ ಕೊಟ್ಟಿಲ್ಲವೆಂದು ಪೊಲೀಸರನ್ನು ಕರೆಸಿದ ಗಿಳಿ! ಅಚ್ಚರಿಯ ವಿಡಿಯೋ ವೈರಲ್​
Recommended image2
BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved