MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Naa Ninna Bidalaare ದುರ್ಗಾಗೆ 'ಬೆಸ್ಟ್​ ಭರವಸೆಯ ನಾಯಕಿ' ಪ್ರಶಸ್ತಿ: ಅವಾರ್ಡ್​ ಬಳಿಕ ಚೇಂಜ್​ ಆಗೋಯ್ತು ಲುಕ್ಕು!

Naa Ninna Bidalaare ದುರ್ಗಾಗೆ 'ಬೆಸ್ಟ್​ ಭರವಸೆಯ ನಾಯಕಿ' ಪ್ರಶಸ್ತಿ: ಅವಾರ್ಡ್​ ಬಳಿಕ ಚೇಂಜ್​ ಆಗೋಯ್ತು ಲುಕ್ಕು!

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯ ದುರ್ಗಾ ಪಾತ್ರಧಾರಿ ರಿಷಿಕಾ, ಜೀ ಕುಟುಂಬ ಅವಾರ್ಡ್ಸ್‌ನಲ್ಲಿ 'ಭರವಸೆಯ ನಾಯಕಿ' ಪ್ರಶಸ್ತಿ ಪಡೆದಿದ್ದಾರೆ. ಈ ಧಾರಾವಾಹಿಯು ಶರತ್, ಅಂಬಿಕಾ ಮತ್ತು ಅವರ ಮಗಳು ಹಿತಾಳ ಕಥೆಯಾಗಿದ್ದು, ಅಂಬಿಕಾಳ ಮರಣದ ನಂತರ ಆಕೆಯ ಆತ್ಮವು ದುರ್ಗಾಳ ಮೂಲಕ ತನ್ನ ಮಗಳನ್ನು ರಕ್ಷಿಸುವ ಸ್ಟೋರಿ… 

2 Min read
Suchethana D
Published : Oct 19 2025, 12:46 PM IST
Share this Photo Gallery
  • FB
  • TW
  • Linkdin
  • Whatsapp
18
ಕನಸು ಕಾಣುತ್ತಾ ಇರಿ
Image Credit : Instagram

ಕನಸು ಕಾಣುತ್ತಾ ಇರಿ

ಕನಸು ಕಾಣಿ, ಯಾವತ್ತೂ ನಿಲ್ಲಿಸಬೇಡಿ. ಒಂದಲ್ಲ ಒಂದು ದಿನ ಅದು ನನಸಾಗುತ್ತದೆ ಎನ್ನುವ ಮೂಲಕ ಜೀ ಕುಟುಂಬ ಅವಾರ್ಡ್ಸ್​ (Zee Kutumba Awards)ನಲ್ಲಿ ಭರವಸೆಯ ನಾಯಕಿ ಪ್ರಶಸ್ತಿ ಪಡೆದಿದ್ದಾರೆ ನಾ ನಿನ್ನ ಬಿಡಲಾರೆ (Naa Ninna Bidallare) ದುರ್ಗಾ ಪಾತ್ರಧಾರಿ ರಿಷಿಕಾ.

28
ಅವಾರ್ಡ್​ ಪಡೆದ ದುರ್ಗಾ
Image Credit : Instagram

ಅವಾರ್ಡ್​ ಪಡೆದ ದುರ್ಗಾ

ಅವಾರ್ಡ್​ ಸಿಗುತ್ತಿದ್ದಂತೆಯೇ ಖುಷಿಯಿಂದ ಕುಪ್ಪಳಿಸಿದ ನಟಿ, ಈ ಬಗ್ಗೆ ತುಂಬಾ ಸಂತೋಷ ವ್ಯಕ್ತಪಡಿಸಿದರು. ಜೀವನದಲ್ಲಿ ಕನಸು ಕಾಣುತ್ತಾ ಇದ್ದರೆ, ಅದು ಒಂದಿಲ್ಲೊಂದು ದಿನ ಸಕ್ಸಸ್​ ಆಗತ್ತೆ ಎಂದರು. ಅಂದಹಾಗೆ, ರಿಷಿಕಾಗೆ ಇದು ನಾಲ್ಕನೇ ಧಾರಾವಾಹಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಕನ್ಯಾಕುಮಾರಿ' ಧಾರಾವಾಹಿಯಲ್ಲಿ ನಾಯಕನ ತಂಗಿ ಐಶ್ವರ್ಯಾ ಆಗಿ ಕಿರುತೆರೆಗೆ ಎಂಟ್ರಿ ಕೊಟ್ಟರು.

Related Articles

Related image1
ಅತ್ಯುತ್ತಮ ಖಳನಟಿ ಪ್ರಶಸ್ತಿ ಪಡೆದ Brahmagantu ಸೌಂದರ್ಯ ರಿಯಲ್​ ಫ್ಯಾಮಿಲಿ ಜೊತೆ ಕಾಣಿಸಿಕೊಂಡಾಗ
Related image2
Karna Serial: ನಿಜ ಜೀವನದಲ್ಲಿಯೂ ಕರ್ಣನೇ ನಟ ಕಿರಣ್​ ರಾಜ್​- ವಿಡಿಯೋ ನೋಡಿ ಮಹಾರಾಜರೂ ಭಾವುಕ
38
ಮೊದಲ ಸೀರಿಯಲ್​ನಲ್ಲಿ ಗಮನ ಸೆಳೆದ ನಟಿ
Image Credit : Instagram

ಮೊದಲ ಸೀರಿಯಲ್​ನಲ್ಲಿ ಗಮನ ಸೆಳೆದ ನಟಿ

ಮೊದಲ ಸೀರಿಯಲ್​ನಲ್ಲಿ ಸೈಡ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದರೂ, ನಟನೆಯ ಮೂಲಕ ಕಿರುತೆರೆ ವೀಕ್ಷಕರ ಮನ ಸೆಳೆದರು. ಬಳಿಕ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಕನ್ಯಾದಾನ' ಧಾರಾವಾಹಿಯಲ್ಲಿ ಚಿತ್ರಾ ಆಗಿ ನಟಿಸಿದ ಈಕೆ ಅಲ್ಲೂ ತಮ್ಮ ನಟನೆಯ ಮೂಲಕ ಗುರುತಿಸಿಕೊಂಡ ಪ್ರತಿಭೆ.

48
ಮೇಕಪ್​ ವಿಡಿಯೋ
Image Credit : Instagram

ಮೇಕಪ್​ ವಿಡಿಯೋ

ಇಂತಿಪ್ಪ ದುರ್ಗಾ ಉರ್ಫ್​ ರಿಷಿಕಾ ಅವರು ಇದೀಗ ಅವಾರ್ಡ್​ ಪಡೆದುಕೊಂಡಿರುವ ಬೆನ್ನಲ್ಲೇ ಮೇಕಪ್​ ವಿಡಿಯೋ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಇದರಲ್ಲಿ ಮೇಕಪ್​ ಬಳಿಕ ತಾವು ಹೇಗೆ ಕಾಣಿಸಿಕೊಳ್ತೇವೆ ಎನ್ನೋದನ್ನು ತೋರಿಸಿದ್ದಾರೆ.

58
ನಾ ನಿನ್ನ ಬಿಡಲಾರೆ ಸೀರಿಯಲ್​ ಸ್ಟೋರಿ
Image Credit : Instagram

ನಾ ನಿನ್ನ ಬಿಡಲಾರೆ ಸೀರಿಯಲ್​ ಸ್ಟೋರಿ

ಇನ್ನು ನಾನಿನ್ನ ಬಿಡಲಾರೆ ಸೀರಿಯಲ್​ ಕುರಿತು ಹೇಳುವುದಾದರೆ, ಶರತ್ ಮತ್ತು ಅಂಬಿಕಾ ಮದುವೆಯಾಗಿ ಹಿತಾ ಎನ್ನುವ ಮಗಳು ಇರುತ್ತಾಳೆ. ಇಬ್ಬರಿಗೂ ಆಕೆಯ ಮೇಲೆ ಪಂಚಪ್ರಾಣ. ಆದರೆ ಓರ್ವ ಲೇಡಿ ವಿಲನ್​ ಸೀರಿಯಲ್​ನಲ್ಲಿ ಇರಲೇಬೇಕಲ್ವೆ? ಅವಳೇ ಮಾಯಾ. ಶರತ್‌ನನ್ನು ತನ್ನ ವಶಮಾಡಿಕೊಳ್ಳಬೇಕು ಎಂಬ ಆಸೆಯಿಂದ ಆಕೆ ಅಂಬಿಕಾಳ ಕೊ*ಲೆ ಮಾಡ್ತಾಳೆ. 

68
ಸೀರಿಯಲ್​ನಲ್ಲಿ ವಿಲನ್​
Image Credit : our own

ಸೀರಿಯಲ್​ನಲ್ಲಿ ವಿಲನ್​

ಅಮ್ಮನ ಪ್ರೀತಿಯಿಲ್ಲದೇ ಬೆಳೆಯುವ ಹಿತಾ, ಅದೊಂದು ಸಂದರ್ಭದಲ್ಲಿ ಅಪ್ಪನ ಮೇಲೂ ಕೋಪಿಸಿಕೊಳ್ಳುವ ಸನ್ನಿವೇಶ ಎದುರಾಗಿ ಮಾತನ್ನೇ ಬಿಡುತ್ತಾಳೆ. ಇತ್ತ ಮಾಯಾ ಹಿತಾಳನ್ನೂ ಕೊಲ್ಲಲು ಸಂಚು ರೂಪಿಸ್ತಾಳೆ. ಆಗ ಸತ್ತು ಹೋದ ತಾಯಿ ಅಂಬಿಕಾ ರಕ್ಷಣೆ ಬರುತ್ತಾಳೆ.

78
ಒಳ್ಳೆಯ ಸ್ವಭಾವದ ದುರ್ಗಾ
Image Credit : Facebook

ಒಳ್ಳೆಯ ಸ್ವಭಾವದ ದುರ್ಗಾ

ಶರತ್​ ಕಂಪೆನಿಯಲ್ಲಿ ಕೆಲಸ ಮಾಡುವ ಎಡವಟ್ಟು ದುರ್ಗಾ ತುಂಬಾ ಒಳ್ಳೆಯ ಸ್ವಭಾವದವಳಾಗಿದ್ದು, ಆಕೆಯನ್ನು ತನ್ನ ಪತಿಯ ಜೊತೆ ಮದ್ವೆ ಮಾಡಿಸಬೇಕು ಎನ್ನುವ ಆಸೆ ಅಂಬಿಕಾಗೆ. ಅವಳು ತಾನು ಯಾರೆಂದು ಹೇಳದೇ ದುರ್ಗಾಗೆ ಮಾತ್ರ ಕಾಣಿಸಿಕೊಂಡು ಫ್ರೆಂಡ್​ ಆಗಿದ್ದಾಳೆ.

88
ಎಡವಟ್ಟು ರಾಣಿ ಮೇಲೆ ವೀಕ್ಷಕರಿಗೆ ಲವ್​
Image Credit : Instagram

ಎಡವಟ್ಟು ರಾಣಿ ಮೇಲೆ ವೀಕ್ಷಕರಿಗೆ ಲವ್​

ಆದರೆ ಆಕೆಯ ಎಡವಟ್ಟಿನಿಂದ ಶರತ್​ಗೆ ಆಕೆಯನ್ನು ಕಂಡ್ರೆ ಇನ್ನಿಲ್ಲದ ಕೋಪ. ಆದರೆ, ಈಗ ಶರತ್​-ಅಂಬಿಕಾ ಮಗಳು ಹಿತಾಳನ್ನು ಕಾಪಾಡಲು ತನ್ನ ಜೀವವನ್ನೇ ಪಣಕ್ಕಿಟ್ಟಿದ್ದಾಳೆ. ಆಕೆಯ ಮೇಲೆ ಹಿತಾಳಿಗೂ ಅದಮ್ಯ ಪ್ರೀತಿ. ಅದೇ ಇನ್ನೊಂದೆಡೆ, ಪರಿಸ್ಥಿತಿ ಒತ್ತಡಕ್ಕೆ ಸಿಕ್ಕು ವಿಲನ್​ ಜೊತೆ ಶರತ್​ ಎಂಗೇಜ್​ಮೆಂಟ್​ ಆಗಿದೆ. ಮುಂದೇನು ಎನ್ನುವುದು ಸದ್ಯಕ್ಕಿರುವ ಕುತೂಹಲ. ನಾಯಕ ಶರತ್​ ಪಾತ್ರದಲ್ಲಿ ಶರತ್ ಪದ್ಮನಾಭ್ ಕಾಣಿಸಿಕೊಂಡಿದ್ದರೆ, ವಿಕ್ರಾಂತ್ ರೋಣ ಚಿತ್ರದಲ್ಲಿ ನಟಿಸಿದ್ದ ನೀತಾ ಅಶೋಕ್, ಅಂಬಿಕಾ ಪಾತ್ರದಲ್ಲಿದ್ದಾರೆ. ದುರ್ಗಾಗಳಾಗಿ ರಿಷಿಕಾ ಹಾಗೂ ವಿಲನ್​ ಆಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಜೀ ಕನ್ನಡ
ನಾ ನಿನ್ನ ಬಿಡಲಾರೆ ಧಾರಾವಾಹಿ
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved