MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Nee Iralu Jotheyalli serial: ಆಧುನಿಕ ಯುಗದ ಶ್ರೀಕೃಷ್ಣನಾದ ಪವನ್‌ ರವೀಂದ್ರ, ಹೆದರಿಸೋಕೆ ರೆಡಿಯಾದ ನಟಿ ರಜಿನಿ!

Nee Iralu Jotheyalli serial: ಆಧುನಿಕ ಯುಗದ ಶ್ರೀಕೃಷ್ಣನಾದ ಪವನ್‌ ರವೀಂದ್ರ, ಹೆದರಿಸೋಕೆ ರೆಡಿಯಾದ ನಟಿ ರಜಿನಿ!

ಸ್ಟಾರ್ ಸುವರ್ಣ ವಾಹಿನಿಯಲ್ಲೀಗ "ನೀ ಇರಲು ಜೊತೆಯಲ್ಲಿ" ಎಂಬ ಹೊಸ ಧಾರಾವಾಹಿಯು ಪ್ರಸಾರ ಆಗಲಿದೆ. ವಿಭಿನ್ನ ಕಥೆಯೊಂದಿಗೆ ಧಾರಾವಾಹಿ ತಂಡವು ತೆರೆ ಮೇಲೆ ಬರಲು ರೆಡಿಯಾಗಿದೆ. ನಟಿ ರಜಿನಿ, ಪವನ್‌ ರವೀಂದ್ರ, ಸಲೋಮಿ ಡಿಸೋಜಾ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 Min read
Padmashree Bhat
Published : Aug 06 2025, 10:24 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಅಮೃತವರ್ಷಿಣಿ" ಧಾರಾವಾಹಿ ಖ್ಯಾತಿಯ ರಜಿನಿ, ವರ್ಷಗಳ ಬಳಿಕ ಈ ಕಥೆಯ ಮೂಲಕ ಸುವರ್ಣ ಪರಿವಾರಕ್ಕೆ ಕಮ್ ಬ್ಯಾಕ್ ಆಗಿದ್ದು ಊರ್ಮಿಳಾ ದಿವಾನ್ ಎಂಬ ಮುಖ್ಯ ಖಳನಾಯಕಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ನಾಯಕನಾಗಿ ಪವನ್ ರವೀಂದ್ರ ಹಾಗು ನಾಯಕಿಯಾಗಿ ಸಲೋಮಿ ಡಿಸೋಜಾ ಬಣ್ಣ ಹಚ್ಚಿದ್ದಾರೆ. ಜೊತೆಗೆ ನಟ ಮೋಹನ್ ಸೇರಿದಂತೆ ಇನ್ನು ಅನೇಕ ಪ್ರತಿಭಾನ್ವಿತ ನಟ-ನಟಿಯರು ಅಭಿನಯಿಸುತ್ತಿದ್ದಾರೆ.

25
Image Credit : Asianet News

ಮಾತಿನಲ್ಲಿ ತುಂಟತನವನ್ನೊಳಗೊಂಡ ಕಥಾನಾಯಕ ಕೃಷ್ಣನದ್ದು ಸ್ವಾತಂತ್ಯ ಹೋರಾಟಗಾರರ ಕುಟುಂಬ. ಕೆಲಸದಲ್ಲಿ ಜಾಣ್ಮೆ, ನಿಪುಣತೆ ಹೊಂದಿರುವ ಈತ, ತಂತ್ರದಲ್ಲಿ ಕಪಟಿಯಾಗಿದ್ದರೂ ಮಾಡಿದ ಸಹಾಯಕ್ಕೆ ಪ್ರತಿಫಲವನ್ನು ನಿರೀಕ್ಷಿಸದ ಅಧುನಿಕ ಯುಗದ ಶ್ರೀ ಕೃಷ್ಣ. ಆದರೆ ಈ ಕೃಷ್ಣನಿಗೆ ಪೂತನಿಯಂತೆ ಕಾಟ ಕೊಡೋಳು ಅತ್ತಿಗೆ ಊರ್ಮಿಳಾ ದಿವಾನ್. ನನ್ನದೇ ನಡಿಬೇಕು, ನನ್ನಿಂದಲೇ ಎಲ್ಲಾ ಎಂಬ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾ, ಅಹಂಕಾರವನ್ನೇ ಒಡವೆಯನ್ನಾಗಿಸಿಕೊಂಡು ಮನೆಮಂದಿಯನ್ನೆಲ್ಲಾ ತನ್ನ ಕೈಗೊಂಬೆಯಾಗಿಸಿರ್ತಾಳೆ.

Related Articles

Related image1
ಈ ಕನ್ನಡ ಧಾರಾವಾಹಿ ನಟಿಯರ Real Age ಎಷ್ಟು? ನೀವು ಊಹಿಸಿದ್ದೆಲ್ಲ ನಿಜವಲ್ಲ!
Related image2
ಲಂಡನ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಕನ್ನಡ ಧಾರಾವಾಹಿ ನಟಿ ಪ್ರಿಯಾಂಕಾ ಚಿಂಚೋಳಿ!
35
Image Credit : Asianet News

ಹೀಗೆ ಸೊಕ್ಕಿನಿಂದ ಮೆರಿತಿರೋ ಊರ್ಮಿಳಾಗೆ ಮುಂದೆ ಕೃಷ್ಣ ತಕ್ಕ ಪಾಠ ಕಲಿಸ್ತಾನ? ತದ್ವಿರುದ್ಧ ಭಾವಗಳನ್ನು ಹೊಂದಿರುವ ಕೃಷ್ಣ,ರಚನಾ ಹೇಗೆ ಒಂದಾಗ್ತಾರೆ? ರಚನಾಗೆ ಆದರ್ಶವಾಗಿರೋ ಊರ್ಮಿಳಾ, ತನ್ನನ್ನೇ ಎದುರಾಳಿಯಾಗಿ ನೋಡಿದ್ರೆ ಮುಂದೇನಾಗಬಹುದು? ಎಂಬುದೇ ಮುಖ್ಯ ಕಥಾ ಹಂದರ.

.

45
Image Credit : Asianet News

ಇನ್ನು ತಂದೆಯ ಮುದ್ದಿನ ಮಗಳು ಕಥಾನಾಯಕಿ ರಚನಾ ಪಟೇಲ್. ಓದಿನಲ್ಲಿ ಅತ್ಯಂತ ಪ್ರತಿಭಾವಂತೆ, ಯಾರನ್ನು ನೋಯಿಸದ ಮಾತೃ ಹೃದಯಿ. ಸೌಂದರ್ಯವನ್ನು ಮುಖದಲ್ಲಿ ಮಾತ್ರವಲ್ಲದೆ ನಡವಳಿಕೆಯಲ್ಲಿಯೂ ಒಗ್ಗೂಡಿಸಿರುವ ಈಕೆಗೆ, ಸಾಧನೆಯ ಶಿಖರವೇರಿರುವ ಊರ್ಮಿಳಾ ದಿವಾನೇ ಆದರ್ಶ. ಆಕೆಯಂತೆ ಏನನ್ನಾದರೂ ಸಾಧಿಸಬೇಕೆಂಬ ಛಲ ರಚನಾಳದ್ದು.

.

55
Image Credit : Asianet News

ಮುದ್ದುಲಕ್ಷ್ಮಿ, ಮರಳಿ ಬಂದಳು ಸೀತೆ, ಮರಳಿ ಮನಸಾಗಿದೆ ಸೇರಿದಂತೆ ಇನ್ನೂ ಅನೇಕ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ.ರಮೇಶ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ "ನೀ ಇರಲು ಜೊತೆಯಲ್ಲಿ" ಧಾರಾವಾಹಿ ಮೂಡಿ ಬರಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಸ್ಟಾರ್ ಸುವರ್ಣ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved