MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಡಿಕೆಶಿ ಪುತ್ರಿ ಐಶ್ವರ್ಯಾ ಜೊತೆ 'ಆ ದಿನಗಳು' ನೆನಪಿಸಿಕೊಂಡ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ!

ಡಿಕೆಶಿ ಪುತ್ರಿ ಐಶ್ವರ್ಯಾ ಜೊತೆ 'ಆ ದಿನಗಳು' ನೆನಪಿಸಿಕೊಂಡ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ!

ನಟಿ ರಮ್ಯಾ ಅವರು ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್ ಹೆಗ್ಡೆ ಅವರೊಂದಿಗೆ ವೇದಿಕೆ ಹಂಚಿಕೊಂಡ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಇಬ್ಬರ ಸ್ನೇಹದ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ, ಆದರೆ ಈಗ ಅವರ ಬಾಂಧವ್ಯದ ಬಗ್ಗೆ ಎಲ್ಲರಿಗೂ ಅರಿವಾಗಿದೆ.

2 Min read
Santosh Naik
Published : Mar 27 2025, 10:39 PM IST| Updated : Mar 27 2025, 10:41 PM IST
Share this Photo Gallery
  • FB
  • TW
  • Linkdin
  • Whatsapp
110

ಡಿಸಿಎಂ ಡಿಕೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಡಿಕೆಎಸ್‌ ಹೆಗಡೆ ಅವರ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿಯಲ್ಲಿ ವಿಟಿಯು ಯೂಥ್‌ ಫೆಸ್ಟ್‌ನ ಬಡ್ಡಿ ಬೆಂಚ್‌ ಕಾನ್ವರ್ಷೇಷನ್‌ನಲ್ಲಿ ನಾಲ್ಕನೇ ಎಪಿಸೋಡ್‌ನ ಅತಿಥಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಆಗಮಿಸಿದ್ದರು.
 

210

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದದಲ್ಲಿ ನಟಿ ರಮ್ಯಾ ಮಾತನಾಡಿ ಹಲವಾರು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ಐಶ್ವರ್ಯಾ ಡಿಕೆಎಸ್‌ ಹೆಗ್ಡೆ ಕೂಡ ವೇದಿಕೆಯಲ್ಲಿ ಜೊತೆಯಾಗಿದ್ದರು.

310

ಆ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿರುವ ರಮ್ಯಾ, ಐಶ್ವರ್ಯಾ ಡಿಕೆಎಸ್‌ ಹೆಗ್ಡೆ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡು, ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

410

ನನ್ನ ಮುದ್ದು, ಕರುಣೆಯ ಮೂರ್ತಿಯಾಗಿರುವ ಐಶು, ನೀನು ಅದ್ಭುತ ಮಹಿಳೆಯಾಗಿ ರೂಪುಗೊಂಡಿದ್ದಕ್ಕೆ ನನಗೆ ಬಹಳ ಹೆಮ್ಮೆ ಇದೆ ಎಂದು ರಮ್ಯಾ ಬರೆದುಕೊಂಡಿದ್ದಾರೆ.

510

ನಿನಗೆ ಈಜುವುದನ್ನು ಕಲಿಸಿದ್ದು, ಒಟ್ಟಿಗೆ ಶಾಪಿಂಗ್‌ ಮಾಡಿದ್ದು, ನನ್ನ ಸಿನಿಮಾಗಳ ಸಮಯದಲ್ಲಿ ಥಿಯೇಟರ್‌ನಲ್ಲಿ ಕೂಗಿದ್ದು, ಕೊನೆಗೆ ಇಂದು ನಿನ್ನೊಂದಿಗೆ ವೇದಿಕೆ ಹಂಚಿಕೊಂಡಿದ್ದನ್ನು ನೋಡಿ ಖುಷಿಯಾಗಿದೆ.

610

 ನೀನು ಇಂದು ಅನೇಕ ಯುವತಿಯರಿಗೆ ಸ್ಫೂರ್ತಿ ನೀಡುವುದನ್ನು ನೋಡುವುದು ಎಲ್ಲವೂ ಲೈಫ್‌ ಒಂದು ಪೂರ್ಣ ಸರ್ಕಲ್‌ ಪಡೆದ ಮೂವ್‌ಮೆಂಟ್‌ ಎಂದು ನನಗೆ ಅನಿಸಿದೆ. ನಿನಗೆ ನನ್ನಲ್ಲಿ ಯಾವಾಗಲೂ ಒಬ್ಬ ಸ್ನೇಹಿತೆ ಇರುತ್ತಾಳೆ ಐಶು ಎಂದು ರಮ್ಯಾ ಬರೆದುಕೊಂಡಿದ್ದಾರೆ.

710

ಇದಕ್ಕೆ ಐಶ್ವರ್ಯಾ ಕೂಡ ಪ್ರತಿಕ್ರಿಯೆ ನೀಡಿ, ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ತುಂಬಾ ಧನ್ಯವಾದ. ನಿಜವಾಗಿಯೂ ಬಹಳಷ್ಟು ಅರ್ಥವನ್ನು ನೀಡುತ್ತದೆ. ಇಷ್ಟು ವರ್ಷಗಳಲ್ಲಿ ನಾವು ಹೆಚ್ಚು ಮಾತುಕತೆ ನಡೆಸಿಲ್ಲ ಅನ್ನೋದು ನನಗೆ ತಿಳಿಸಿದೆ. ಆದರೆ ಇಂದಿನ ಮಾತುಕತೆ ಬಹಳ ಸಮಯದಿಂದ ಉಂಟಾಗಿದ್ದ ಹಲವು ಅಂತರವನ್ನು ತೆಗೆದುಹಾಕಿದೆ ಎಂದು ಬರೆದಿದ್ದಾರೆ.

810

ನಾನು ಚಿಕ್ಕವಳಾಗಿದ್ದಾಗ ನನ್ನ ಸ್ನೇಹಿತೆಯಾಗಿದ್ದಕ್ಕಾಗಿ, ನನ್ನನ್ನು ಅಲಂಕಾರ ಮಾಡಿದ್ದಕ್ಕಾಗಿ, ಸಿಂಗಾರ ಮಾಡಿದ್ದಕ್ಕಾಗಿ, ಯಾವಾಗಲೂ ಹಿನ್ನೆಲೆಯಲ್ಲಿ ಸದ್ದಿಲ್ಲದೆ ಇದ್ದು, ನನ್ನನ್ನು ಬೆಂಬಲಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಐಶ್ವರ್ಯಾ ಬರೆದಿದ್ದಾರೆ. ಇಂದು ನಿಮ್ಮ ಪಕ್ಕದಲ್ಲಿ ನಿಲ್ಲುವುದು ನನಗೆ ಬಹಳಷ್ಟು ಅರ್ಥಪೂರ್ಣ ಎನಿಸಿತ್ತು ಎಂದಿದ್ದಾರೆ.

ಸಿಎಂ ಬದಲಾವಣೆ ಚರ್ಚೆ ಮಧ್ಯೆಯೇ ಡಿಕೆಶಿ ಪುತ್ರಿ ಐಶ್ವರ್ಯ ಹೇಳಿದ್ದೇನು? ಜೈಲಿನಿಂದ ಬಂದಾಗ ಮಾತು ಬಿಟ್ಟಿದ್ದೇಕೆ?

910

ಈ ಮಾತುಕತೆಯನ್ನು ಮುಂದುವರಿಸಲು ನಾನು ನಿಜವಾಗಿಯೂ ಬಯಸಿದ್ದೇನೆ. ಪ್ರತಿ ಬಾರಿಯೂ ನನ್ನ ಸ್ನೇಹಿತೆ ಅಗತ್ಯವಿರುವಾಗೆಲ್ಲಾ ಇರುತ್ತಾಳೆ ನಾನೂ ಕೂಡ ಹಾಗೆಯೇ ಇರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಅಗತ್ಯ ನಿಮಗಿದ್ದಾಗ ಖಂಡಿತಾ ಸಹಾಯ ಮಾಡುತ್ತೇನೆ. ಈ ಕ್ಷಣವನ್ನು ತುಂಬಾ ವಿಶೇಷವಾಗಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗೂ, ಡಿಕೆಶಿ ಪುತ್ರಿ ಐಶ್ವರ್ಯಾ ಕುಂಭಮೇಳ ಪುಣ್ಯಸ್ನಾನಕ್ಕೂ ಲಿಂಕ್ ಮಾಡಿ ನೆಟ್ಟಿಗರ ಟೀಕೆ!

1010

ರಮ್ಯಾ ಹಂಚಿಕೊಂಡ ಪೋಸ್ಟ್‌ಗೆ ಸಾಕಷ್ಟು ಮಂದಿ ಕಾಮೆಂಟ್‌ ಮಾಡಿದ್ದು, ಇವರಿಬ್ಬರ ನಡುವೆ ಇಂಥದ್ದೊಂದು ಸ್ನೇಹವಿರುವ ಬಗ್ಗೆ ನಮಗೆ ಇಂದೇ ಗೊತ್ತಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ರಮ್ಯಾ ಧರಿಸಿದ್ದ ಡ್ರೆಸ್‌ನ ಬಗ್ಗೆ ಮೆಚ್ಚುಗೆಯ ಕಾಮೆಂಟ್‌ ಮಾಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಸ್ಯಾಂಡಲ್‌ವುಡ್
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬಿಗ್‌ಬಾಸ್‌ ಮನೆಯಿಂದ ಹೊರಬಂದ ಬೆನ್ನಲ್ಲಿಯೇ ಸ್ಪರ್ಧಿ ಮೇಲೆ ಗಂಭೀರ ಆರೋಪ ಮಾಡಿದ ಡಿಸೈನರ್‌!
Recommended image2
Bigg Boss Kannada 12: ಏನೂ ಮಾಡಲ್ಲ, ವೇಸ್ಟ್ ಎಂದಿದ್ದ ಗಿಲ್ಲಿ ನಟ; ಠಕ್ಕರ್‌ ಕೊಡೋ ಕೆಲಸ ಮಾಡಿದ ಕಾವ್ಯ ಶೈವ!
Recommended image3
ಪ್ರೀತಿಸಿದ ಹುಡುಗಿ ಮೋಸ ಮಾಡಿದ್ರೆ ತಿರುಗಿ ನೋಡದ ಹುಡುಗರು; ದ್ರೋಹ ಮಾಡಿದೋಳ ಹಿಂದೆ ಹೋದ Bigg Boss ಸ್ಪರ್ಧಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved