MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಸಿರಿ ಕನ್ನಡ ವಾಹಿನಿಯಲ್ಲಿ ಬರಲಿದೆ Matte Mayamruga

ಸಿರಿ ಕನ್ನಡ ವಾಹಿನಿಯಲ್ಲಿ ಬರಲಿದೆ Matte Mayamruga

ಕ್ಲಾಸಿಕ್‌ ಧಾರಾವಾಹಿ ಮಾಯಾಮೃಗದ ಮುಂದುವರಿದ ಭಾಗ ಶುರು. ಸುದ್ಧಿಗೋಷ್ಠಿಯಲ್ಲಿ ಧಾರಾವಾಹಿ ವಿಶೇಷತೆ ಪ್ರಸ್ತಾಪ... 

2 Min read
Vaishnavi Chandrashekar
Published : Sep 12 2022, 11:13 AM IST
Share this Photo Gallery
  • FB
  • TW
  • Linkdin
  • Whatsapp
112

ಸಿರಿ ಕನ್ನಡ ವಾಹಿನಿಯಲ್ಲಿ ಟಿಎನ್‌ ಸೀತಾರಾಮ್‌, ಪಿ.ಶೇಷಾದ್ರಿ, ನಾಗೇಂದ್ರ ಶಾ ನಿರ್ದೇಶನದ ‘ಮತ್ತೆ ಮಾಯಾಮೃಗ’ ಧಾರಾವಾಹಿ ಪ್ರಸಾರವಾಗಲಿದೆ. 

212

ಇದು ದೂದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಕ್ಲಾಸಿಕ್‌ ಧಾರಾವಾಹಿ ‘ಮಾಯಾಮೃಗ’ದ ಮುಂದುವರೆದ ಭಾಗ. ಪ್ರಸ್ತುತ ಚಿತ್ರೀಕರಣ ಆರಂಭವಾಗಿದ್ದು, ಅಕ್ಟೋಬರ್‌ನಲ್ಲಿ ಪ್ರಸಾರ ಆರಂಭವಾಗುವ ಸಾಧ್ಯತೆ ಇದೆ.

312

ಮಾಯಾಮೃಗದಲ್ಲಿ ನಟಿಸಿದ್ದ ಲಕ್ಷ್ಮಿ ಚಂದ್ರಶೇಖರ್‌, ಶಶಿಕುಮಾರ್‌, ವಿಕ್ರಂ ಸೂರಿ, ಟಿಎನ್‌ ಸೀತಾರಾಮ್‌, ಪಿ. ಶೇಷಾದ್ರಿ, ಮಾಳವಿಕಾ ಮುಂತಾದವರು ‘ಮತ್ತೆ ಮಾಯಾಮೃಗ’ದಲ್ಲಿಯೂ ನಟಿಸುತ್ತಿದ್ದಾರೆ. 

412

ಅವರೆಲ್ಲರ ಜೊತೆಗೆ ವಿದ್ಯಾಭೂಷಣರ ಪುತ್ರಿ ಮೇಧಾ ವಿದ್ಯಾಭೂಷಣ, ನಿಖಿತಾ, ಮಧುಮತಿ, ಕಾರ್ತಿಕ್‌ ವೈಭವ್‌, ನವೀನ್‌ ಅಭಿನಯಿಸುತ್ತಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಟಿಎನ್‌ ಸೀತಾರಾಮ್‌, ‘ಮಾಯಾಮೃಗ ಬಂದು 24 ವರ್ಷದ ಬಳಿಕ ಆ ಧಾರಾವಾಹಿಯ ಸೀಕ್ವೆಲ್‌ ಬರುತ್ತಿದೆ. 

512

ಮನುಷ್ಯರ ಲೆಕ್ಕದಲ್ಲಿ ನೋಡುವುದಾದರೆ ಎರಡು ತಲೆಮಾರು, ಕಿರುತೆರೆ ವೀಕ್ಷಕರ ಮನಸ್ಥಿತಿ ಲೆಕ್ಕದಲ್ಲಿ ನೋಡಿದರೆ ಮೂರು ತಲೆಮಾರು ಬದಲಾಗಿದೆ. ಆಗ ಇದ್ದ ಅನೇಕರು ಈಗಿಲ್ಲ. ಹಲವರು ಎತ್ತರಕ್ಕೆ ಹೋಗಿದ್ದಾರೆ. ಇಂಥಾ ಸಂದರ್ಭದಲ್ಲಿ ಮತ್ತೆ ಮಾಯಾಮೃಗ ಬರುತ್ತಿದೆ. 

612

 ಮಯಾಮೃಗದಲ್ಲಿ ಮಧ್ಯಮ ವರ್ಗದ ಜನರು ಅನೇಕ ಕಾರಣಗಳಿಗೆ ದಿಗ್ಭ್ರಾಂತರಾಗಿದ್ದ ಕತೆಯನ್ನು ಸೂಕ್ಷ್ಮವಾಗಿ ಹೇಳಿದ್ದೆವು. ಈಗ ಆ ಪಾತ್ರಗಳ ಮುಂದಿನ ಜನರೇಷನ್‌ ಕತೆಯಲ್ಲಿ ಬಂದಿದೆ. ಅಲ್ಲಿದ್ದ ಪಾತ್ರಗಳ ಮಕ್ಕಳು, ಮೊಮ್ಮಕ್ಕಳ ಕತೆ ನಡೆಯುತ್ತದೆ. 

712

ಮಾಳವಿಕ ಮಗ ಏನಾಗಿರಬಹುದು, ಮಂಜುಭಾಷಿಣಿ ಈಗ ಹೇಗೆ ಜಗತ್ತು ನೋಡುತ್ತಾರೆ ಎಂಬ ಪ್ರಶ್ನೆಗಳಿಗೆ ಇಲ್ಲಿ ಉತ್ತರ ಸಿಗುತ್ತದೆ. ನಗು, ಸಂಭ್ರಮ ಕಾಲಕಾಲಕ್ಕೆ ಬೇರೆ ಆಗಿರುತ್ತದೆ. ಆದರೆ ಭಾವ, ಕಣ್ಣೀರು ಎಲ್ಲಾ ಕಾಲಕ್ಕೂ ಒಂದೇ. 

812

ಹೊರಮೈ ವಿಭಿನ್ನ ಇರಬಹುದು. ಆದರೆ ಒಳಗು ಒಂದೇ. ಅದೇ ನಂಬಿಕೆಯಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದೇವೆ. ಆತಂಕ ಇದೆ. ಜೊತೆಗೆ ನಂಬಿಕೆಯೂ ಇದೆ’ ಎಂದರು.

912

ಪಿ. ಶೇಷಾದ್ರಿ, ‘ಮಾಯಾಮೃಗ ಯೂಟ್ಯೂಬಲ್ಲಿ ಪ್ರಸಾರವಾದಾಗಲೂ ಅತ್ಯುತ್ತಮ ಪ್ರತಿಕ್ರಿಯೆ ಬಂದಿತ್ತು. ಹಾಗಾಗಿ ಈ ಧಾರಾವಾಹಿ ನವನವೀನ. ಸಿರಿ ಕನ್ನಡದವರು ಕಥೆ ಹೇಗೆ ಇದೆಯೋ ಅದೇ ಥರ ಮಾಡಿ ಎಂದು ಪೂರ್ತಿ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಅ ಅಚ್ಚ ಕನ್ನಡದ ವಾಹಿನಿ ಪ್ರೇಕ್ಷಕರಿಗೆ ವಿಶೇಷ ಅನುಭವ ಕೊಡುತ್ತದೆ ಎಂದು ನಂಬಿದ್ದೇನೆ’ ಎಂದರು.

1012

 ಸಿರಿ ಕನ್ನಡ ವಾಹಿನಿಯ ಮುಖ್ಯಸ್ಥ ಸಂಜಯ್‌ ಶಿಂಧೆ, ‘ಸಿರಿ ಕನ್ನಡ ವಾಹಿನಿಗೆ ಇದು ಮಹತ್ವದ ಯೋಜನೆ. ತುಂಬಾ ಸಮಯ ಒತ್ತಾಯದ ಮನವಿ ಮಾಡಿ ಈ ಧಾರಾವಾಹಿಗೆ ತಂಡವನ್ನು ಒಪ್ಪಿಸಿದ್ದೇವೆ. 

1112

ಮೂವರು ನಿರ್ದೇಶಕರಿಗೂ ಧನ್ಯವಾದ. ಈ ಸೀಕ್ವೆಲ್‌ ಧಾರಾವಾಹಿ ಪ್ರಪಂಚದಲ್ಲಿಯೇ ಅಪರೂಪ. ಅಕ್ಟೋಬರ್‌ ತಿಂಗಳಲ್ಲಿ ಪ್ರಸಾರ ಆರಂಭಿಸುವ ಉದ್ದೇಶ ಇದೆ’ ಎಂದರು.

1212

ನಿರ್ದೇಶಕ ನಾಗೇಂದ್ರ ಶಾ, ಹಿರಿಯ ನಟಿ ಲಕ್ಷ್ಮಿ ಚಂದ್ರಶೇಖರ್‌, ಧಾರಾವಾಹಿ ಬರಹಗಾರ ಜೆಎಂ ಪ್ರಹ್ಲಾದ್‌, ಸಿರಿ ಕನ್ನಡ ಪ್ರೋಗ್ರಾಮಿಂಗ್‌ ಹೆಡ್‌ ರಾಜೇಶ್‌ ರಾಜಘಟ್ಟ, ಸಂಚಿಕೆ ನಿರ್ದೇಶಕ ಪ್ರದೀಪ್‌, ಸಂಯೋಜಕ ಚಂದನ್‌ ಶಂಕರ್‌, ಅನುಪಮಾ ಶೇಷಾದ್ರಿ, ಅರವಿಂದ್‌, ಚಂದ್ರು ಇದ್ದರು.

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಕನ್ನಡ ಧಾರಾವಾಹಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved