MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಕನ್ನಡದ ನಟಿ ಸೌಮ್ಯ ಶೆಟ್ಟಿ ಮದುವೆಯಾದ ಒಂದೇ ತಿಂಗಳಿಗೆ ಗಂಡ ಆತ್ಮ*ಹತ್ಯೆ! ಸೊಸೆ ವಿರುದ್ಧ ತಿರುಗಿಬಿದ್ದ ಮಾವ!

ಕನ್ನಡದ ನಟಿ ಸೌಮ್ಯ ಶೆಟ್ಟಿ ಮದುವೆಯಾದ ಒಂದೇ ತಿಂಗಳಿಗೆ ಗಂಡ ಆತ್ಮ*ಹತ್ಯೆ! ಸೊಸೆ ವಿರುದ್ಧ ತಿರುಗಿಬಿದ್ದ ಮಾವ!

ಖ್ಯಾತ ಕಲಾವಿದೆ ಸೌಮ್ಯ ಶೆಟ್ಟಿ ಅವರ ಪತಿ ಸುದೀಪ್ ಶೆಟ್ಟಿ ಮದುವೆಯಾದ ಒಂದೇ ತಿಂಗಳಲ್ಲಿ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ತಂದೆ ತಮ್ಮ ಸೊಸೆಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದು, ಸೌಮ್ಯ ಶೆಟ್ಟಿ ಈ ಆರೋಪಗಳನ್ನು ನಿರಾಕರಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

2 Min read
Author : Sathish Kumar KH
Published : Mar 31 2026, 04:48 PM IST
Share this Photo Gallery
  • FB
  • TW
  • Linkdin
  • Whatsapp
17
ಮದುವೆಯಾಗಿ ಒಂದೇ ತಿಂಗಳಿಗೆ ಗಂಡನ ಸಾವು
Image Credit : Asianet News

ಮದುವೆಯಾಗಿ ಒಂದೇ ತಿಂಗಳಿಗೆ ಗಂಡನ ಸಾವು

ಉಡುಪಿ (ಮಾ.31): ಪ್ರೀತಿಸಿ ಮದುವೆಯಾದ ಕೇವಲ ಒಂದೇ ತಿಂಗಳಲ್ಲಿ ಖ್ಯಾತ ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿಯ ಗಂಡ ಸುದೀಪ್ ಶೆಟ್ಟಿ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಪ್ರಕರಣ ಹಲವು ಸಂಶಯಗಳ ಸುಳಿಗೆ ಸಿಲಿಕಿದ್ದು, ಆರೋಪ-ಪ್ರತ್ಯಾರೋಪಗಳ ಕಣವಾಗಿ ಮಾರ್ಪಟ್ಟಿದೆ.

27
ಘಟನೆಯ ಹಿನ್ನೆಲೆ:
Image Credit : Asianet News

ಘಟನೆಯ ಹಿನ್ನೆಲೆ:

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ನಿವಾಸಿ ಸುದೀಪ್ ಶೆಟ್ಟಿ ಮತ್ತು ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ, ಖ್ಯಾತ ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿ ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಬಳಿಕ ಮಾರ್ಚ್ 19ರಂದು ಕುಕ್ಕುಂದೂರು ದೇವಸ್ಥಾನದಲ್ಲಿ ವೈದಿಕವಾಗಿ ವಿವಾಹವಾಗಿದ್ದರು. ಆದರೆ, ಮಾರ್ಚ್ 22ರಂದು ಸುದೀಪ್ ವಿಷ ಸೇವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Related Articles

Related image1
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ: ಭಾವಿ ಪತಿಯ ಅಂಕಲ್​ ಎಂದು ಕರೆದು ಪೇಚಿಗೆ ಸಿಲುಕಿದ್ದ ಸ್ಟೋರಿ ಇಲ್ಲಿದೆ
Related image2
Sri Raghavendra Mahathme: 23ರ ವಯಸ್ಸಲ್ಲಿ 85ರ ಅಜ್ಜಿ- ನಟಿ ಭವಾನಿಯ ರೋಚಕ ಸ್ಟೋರಿ ಕೇಳಿ
37
ಮಗನ ಸಾವಿಗೆ ಸೊಸೆಯೇ ಕಾರಣ ಎಂದ ತಂದೆ:
Image Credit : Asianet News

ಮಗನ ಸಾವಿಗೆ ಸೊಸೆಯೇ ಕಾರಣ ಎಂದ ತಂದೆ:

ಸುದೀಪ್ ಶೆಟ್ಟಿ ಅವರ ತಂದೆ ದಾಮೋದರ್ ಅವರು ತಮ್ಮ ಸೊಸೆ ಸೌಮ್ಯ ಶೆಟ್ಟಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. 'ಸೌಮ್ಯ ನನ್ನ ಮಗನಿಗೆ ವಿಷ ಹಾಕಿ ಕೊಂದಿದ್ದಾಳೆ. ಅವಳು ಈ ಹಿಂದೆಯೂ ಹಲವು ಮಂದಿಗೆ ಹೀಗೆಯೇ ವಂಚಿಸಿದ್ದಾಳೆ. ನನ್ನ ಮಗ ವಿಷ ಸೇವಿಸಿದ ವಿಷಯವನ್ನು 7 ದಿನಗಳ ಕಾಲ ಮುಚ್ಚಿಟ್ಟಿದ್ದಾಳೆ. ಸರಿಯಾದ ಚಿಕಿತ್ಸೆ ಕೊಡಿಸದೆ ಆತನ ಸಾವಿಗೆ ಕಾರಣವಾಗಿದ್ದಾಳೆ' ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಆತ್ಮ*ಹತ್ಯೆಗೆ ಪ್ರಚೋದನೆ ನೀಡಿದ ದೂರು ದಾಖಲಿಸಿದ್ದಾರೆ. ಅಲ್ಲದೆ, ಸುದೀಪ್ ಮನೆಯವರು ಶ್ರೀಮಂತರಾಗಿದ್ದು, ಈ ಮದುವೆಗೆ ಅವರ ಒಪ್ಪಿಗೆ ಇರಲಿಲ್ಲ ಎನ್ನಲಾಗಿದೆ.

47
ಪತ್ನಿ ಸೌಮ್ಯ ಶೆಟ್ಟಿ ನೀಡಿದ ಸ್ಪಷ್ಟನೆ:
Image Credit : Asianet News

ಪತ್ನಿ ಸೌಮ್ಯ ಶೆಟ್ಟಿ ನೀಡಿದ ಸ್ಪಷ್ಟನೆ:

ತನ್ನ ಮೇಲೆ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ಸೌಮ್ಯ ಶೆಟ್ಟಿ ನಿರಾಕರಿಸಿದ್ದಾರೆ. ಈ ಕುರಿತು ಸುದೀರ್ಘ ಹೇಳಿಕೆ ನೀಡಿರುವ ಅವರು, 'ಸುದೀಪ್ ಸಾವಿಗೆ ನಾನು ಕಾರಣವಲ್ಲ. ಅವರು ತಮ್ಮ ಮನೆಯವರ ವಿರೋಧ ಮತ್ತು ಮಾನಸಿಕ ಒತ್ತಡದಿಂದ ವಿಷ ಸೇವಿಸಿರಬಹುದು. ಅವರು ನೆಲ್ಯಾಡಿಯ ತಮ್ಮ ಮನೆಗೆ ಹೋಗಿದ್ದಾಗಲೇ ವಿಷ ಸೇವಿಸಿ ಬಂದಿದ್ದರು. ಈ ವಿಚಾರ ನನಗೆ ತಡವಾಗಿ ತಿಳಿಯಿತು. ವಿಷ ಸೇವಿಸಿದ ನಂತರವೂ ಅವರು ಆರಾಮವಾಗಿಯೇ ಇದ್ದರು, ನಾವು ವಾಟರ್ ಪಾರ್ಕ್‌ಗೆ ಕೂಡ ಹೋಗಿದ್ದೆವು. ಆದರೆ ನಂತರ ಅವರ ಆರೋಗ್ಯ ಕ್ಷೀಣಿಸಿತು' ಎಂದಿದ್ದಾರೆ.

57
ನಾನು ಹಣಕ್ಕಾಗಿ ಅವರನ್ನು ಮದುವೆಯಾಗಿಲ್ಲ
Image Credit : Asianet News

ನಾನು ಹಣಕ್ಕಾಗಿ ಅವರನ್ನು ಮದುವೆಯಾಗಿಲ್ಲ

ಸೌಮ್ಯ ಅವರ ಪ್ರಕಾರ, ಸುದೀಪ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಈ ವಿಷಯ ತಿಳಿದಿದ್ದರೂ ತಾನು ಅವರನ್ನು ಪ್ರೀತಿಸಿ ಮದುವೆಯಾಗಿದ್ದೆ. 'ನಾನು ಹಣಕ್ಕಾಗಿ ಅವರನ್ನು ಮದುವೆಯಾಗಿಲ್ಲ. ಅವರ ಮನೆಯವರೇ ಸುದೀಪ್‌ನನ್ನು ಮನೆಯಿಂದ ದೂರವಿಟ್ಟಿದ್ದರು. ಮದುವೆಗೆ ಮೊದಲು ಒಪ್ಪಿದ್ದವರು ನಂತರ ನಿರಾಕರಿಸಿದ್ದರಿಂದ ಸುದೀಪ್ ಮನನೊಂದಿದ್ದರು' ಎಂದು ಹೇಳಿದ್ದಾರೆ.

67
ಸರಣಿ ಮದುವೆಯ ಆರೋಪಕ್ಕೆ ಉತ್ತರ
Image Credit : Asianet News

ಸರಣಿ ಮದುವೆಯ ಆರೋಪಕ್ಕೆ ಉತ್ತರ

ತಾನು ನಾಲ್ಕೈದು ಮದುವೆಯಾಗಿದ್ದೇನೆ ಎಂಬ ಆರೋಪಕ್ಕೆ ಉತ್ತರಿಸಿದ ಸೌಮ್ಯ, 'ನಾನು 9 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದು ನಿಜ. ಆದರೆ ಪತಿಯ ನಡವಳಿಕೆಯಿಂದಾಗಿ ನಾನೇ ವಿಚ್ಛೇದನ ಪಡೆದಿದ್ದೆ. ಅದಾದ ನಂತರ ಕಲಾವಿದೆಯಾಗಿ ಕೆಲಸ ಮಾಡುತ್ತಿರುವಾಗ ಸುದೀಪ್ ಅವರೇ ಫೇಸ್‌ಬುಕ್ ಮೂಲಕ ನನ್ನನ್ನು ಸಂಪರ್ಕಿಸಿ ಮದುವೆಯ ಪ್ರಸ್ತಾಪ ಇಟ್ಟಿದ್ದರು. ನನ್ನ ಹಳೆಯ ಜೀವನದ ಬಗ್ಗೆ ಅವರಿಗೆ ಎಲ್ಲವೂ ತಿಳಿದಿತ್ತು' ಎಂದು ಸ್ಪಷ್ಟಪಡಿಸಿದ್ದಾರೆ.

77
ಪೊಲೀಸ್ ತನಿಖೆ ಚುರುಕು
Image Credit : Asianet News

ಪೊಲೀಸ್ ತನಿಖೆ ಚುರುಕು

ಸದ್ಯ ಕಾರ್ಕಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಸುದೀಪ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 'ಪೋಸ್ಟ್ ಮಾರ್ಟಂ ವರದಿ ಬಂದ ನಂತರ ಸುದೀಪ್ ಯಾವ ವಿಷ ಸೇವಿಸಿದ್ದರು ಮತ್ತು ಸಾವು ಸಂಭವಿಸಲು ನಿಖರ ಕಾರಣವೇನು ಎಂಬುದು ತಿಳಿಯಲಿದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಉಡುಪಿ
ನಟಿ
ದಕ್ಷಿಣ ಭಾರತದ ನಟಿ

Latest Videos
Recommended Stories
Recommended image1
ಅಮೃತಾ ಬಳಿಕ 'ಆದಿಲಕ್ಷ್ಮೀ ಪುರಾಣ'ದಿಂದ ಇಬ್ಬರು ಔಟ್… ಹೊಸ ನಟರ ಎಂಟ್ರಿ
Recommended image2
ತುಂಬು ಗರ್ಭಿಣಿ ಲಕ್ಷ್ಮೀ ನಿವಾಸ ನಟಿ ಮಾನಸ ಮನೋಹರ್ Baby Shower Photos
Recommended image3
Sri Raghavendra Mahathme: 23ರ ವಯಸ್ಸಲ್ಲಿ 85ರ ಅಜ್ಜಿ- ನಟಿ ಭವಾನಿಯ ರೋಚಕ ಸ್ಟೋರಿ ಕೇಳಿ
Related Stories
Recommended image1
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ: ಭಾವಿ ಪತಿಯ ಅಂಕಲ್​ ಎಂದು ಕರೆದು ಪೇಚಿಗೆ ಸಿಲುಕಿದ್ದ ಸ್ಟೋರಿ ಇಲ್ಲಿದೆ
Recommended image2
Sri Raghavendra Mahathme: 23ರ ವಯಸ್ಸಲ್ಲಿ 85ರ ಅಜ್ಜಿ- ನಟಿ ಭವಾನಿಯ ರೋಚಕ ಸ್ಟೋರಿ ಕೇಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved