MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಶ್ರೀನಿವಾಸ್-ಲಕ್ಷ್ಮೀಗೆ ಯಾಕಿಷ್ಟು ಅವಸರ? ಇದು ಸಿನಿಮಾ ಅಲ್ಲ, ಸೀರಿಯಲ್ ಅಂದ್ರು ವೀಕ್ಷಕರು!

ಶ್ರೀನಿವಾಸ್-ಲಕ್ಷ್ಮೀಗೆ ಯಾಕಿಷ್ಟು ಅವಸರ? ಇದು ಸಿನಿಮಾ ಅಲ್ಲ, ಸೀರಿಯಲ್ ಅಂದ್ರು ವೀಕ್ಷಕರು!

ಜೀ ಕನ್ನಡದ 'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ ಲಲಿತಾ ಪಾತ್ರದ ಅಂತ್ಯವಾಗಿದ್ದು, ವೀಕ್ಷಕರು ಬೇಸರಗೊಂಡಿದ್ದಾರೆ. ಅತ್ತಿಗೆಯ ಅಂತಿಮ ಸಂಸ್ಕಾರಕ್ಕೂ ನಿಲ್ಲದೆ ಲಕ್ಷ್ಮೀ ಹೊರಟುಹೋಗಿದ್ದು, ಕಥೆಯನ್ನು ಅವಸರವಾಗಿ ಮುಗಿಸಲಾಗುತ್ತಿದೆ ಎಂದು ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1 Min read
Author : Mahmad Rafik
Published : Jan 14 2026, 10:30 AM IST
Share this Photo Gallery
  • FB
  • TW
  • Linkdin
  • Whatsapp
15
ಧಾರಾವಾಹಿ ಕಥೆ
Image Credit : Zee Kannada

ಧಾರಾವಾಹಿ ಕಥೆ

ಧಾರಾವಾಹಿ ಕಥೆಯನ್ನು ರಬ್ಬರ್‌ನಂತೆ ಎಳೆಯಲಾಗುತ್ತೆ ಎಂಬ ಅಪವಾದ ಎಲ್ಲಾ ಸೀರಿಯಲ್‌ಗೂ ತಾಗಿರುತ್ತದೆ. ಇದೀಗ ಸೀರಿಯಲ್ ಕಥೆಯನ್ನು ಸ್ಪೀಡ್ ಮಾಡಿದ್ದಕ್ಕೆ ವೀಕ್ಷಕರು ಬೇಸರದ ಮಾತುಗಳನ್ನಾಡಿದ್ದಾರೆ. ಈ ರೀತಿ ಮಾತುಗಳು ಜೀ ಕನ್ನಡದ ಲಕ್ಷ್ಮೀ ನಿವಾಸದ ಸೀರಿಯಲ್‌ ಬಗ್ಗೆ ಕೇಳಿ ಬಂದಿವೆ.

25
ಲಕ್ಷ್ಮೀ ನಿವಾಸ ಧಾರಾವಾಹಿ
Image Credit : Zee Kannada

ಲಕ್ಷ್ಮೀ ನಿವಾಸ ಧಾರಾವಾಹಿ

ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಲಲಿತಾ ಪಾತ್ರದ ಅಂತ್ಯವಾಗಿದೆ. ಸೈಕೋ ಜಯಂತ್‌ನಿಂದಲೇ ಲಲಿತಾ ಉಸಿರು ನಿಂತಿದೆ. ಇತ್ತ ಲಲಿತಾ ಆಹ್ವಾನದ ಮೇರೆಗೆ ತವರು ಮನೆಗೆ ಗಂಡ ಶ್ರೀನಿವಾಸ್ ಜೊತೆಯಲ್ಲಿ ಲಕ್ಷ್ಮೀ ಆಗಮಿಸಿದ್ದಳು. ಮನೆ ಬಳಿ ಬರುತ್ತಿದ್ದಂತೆ ಅತ್ತಿಗೆ ಲಲಿತಾ ಸಾವು ಲಕ್ಷ್ಮೀಗೆ ಬರಸಿಡಿಲಿನಂತೆ ಅಪ್ಪಳಿಸಿತ್ತು.

Related Articles

Related image1
2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
Related image2
ಮತ್ತೆ ಮೈಲೇಜ್ ಪಡೆದುಕೊಂಡ ಲಕ್ಷ್ಮೀ ನಿವಾಸ ಸೀರಿಯಲ್; ಅಂತ್ಯವಾಗಲಿದೆ ವೀಕ್ಷಕರ ಕಾಯುವಿಕೆ
35
ಅತ್ತಿಗೆ ಸಾವು
Image Credit : Zee Kannada

ಅತ್ತಿಗೆ ಸಾವು

ಅತ್ತಿಗೆ ಸಾವು, ತಂದೆಯ ಅನಾರೋಗ್ಯ ಕಂಡು ಲಕ್ಷ್ಮೀ ಕಣ್ಣೀರು ಹಾಕಿದ್ದಳು. ಲಕ್ಷ್ಮೀ ಆಗಮನದಿಂದ ತಂದೆ ಮಾತನಾಡೋದನ್ನು ಕೇಳಿ ನರಸಿಂಹ ಸಹ ಆಶ್ಚರ್ಯ ವ್ಯಕ್ತಪಡಿಸಿದ್ದನು. ತಂದೆಯನ್ನು ಮನೆಯೊಳಗೆ ಬಿಟ್ಟು ಬರೋವಷ್ಟರಲ್ಲಿ ಅತ್ತಿಗೆಯ ಅಂತಿಮ ದರ್ಶನ ಪಡೆದು ಲಕ್ಷ್ಮೀ ಮತ್ತು ಶ್ರೀನಿವಾಸ್ ಅಲ್ಲಿಂದ ತೆರಳಿದ್ದರು.

45
 ನರಸಿಂಹ ಬೇಸರ
Image Credit : Zee Kannada

ನರಸಿಂಹ ಬೇಸರ

ಮನೆಯಿಂದ ಹೊರಬರುತ್ತಲೇ ಸೋದರಿ ಕಾಣದಿದ್ದಾಗ ನರಸಿಂಹ ಬೇಸರಗೊಳ್ಳುತ್ತಾನೆ. ಇಷ್ಟು ದಿನ ಆದ್ಮೇಲೆ ಬಂದ್ರೂ ಅಂತಿಮ ಸಂಸ್ಕಾರ ಮುಗಿಯುವರೆಗೂ ನಿಲ್ಲದೇ ಅವಸರವಾಗಿ ಹೋಗಿದ್ದಕ್ಕೆ ನರಸಿಂಹ ಬೇಸರ ವ್ಯಕ್ತಪಡಿಸುತ್ತಾನೆ. ಇದೇ ಬೇಸರವನ್ನು ವೀಕ್ಷಕರು ಸಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: BBK 12: 'ವಿನ್ನರ್' ಎಂದ ಸ್ಪರ್ಧಿಗೆ ಮಧ್ಯರಾತ್ರಿಯ ಮಿಡ್‌ವೀಕ್ ಎಲಿಮಿನೇಷನ್ ಶಾಕ್!

55
ಲಕ್ಷ್ಮೀ-ಶ್ರೀನಿವಾಸ್ ಕಣ್ಣೀರು
Image Credit : Zee Kannada

ಲಕ್ಷ್ಮೀ-ಶ್ರೀನಿವಾಸ್ ಕಣ್ಣೀರು

ಸಾಮಾನ್ಯವಾಗಿ ಸಾವು ಆದ್ರೆ ಜನರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಯೇ ಹಿಂದಿರುಗುತ್ತಾರೆ. ಅತ್ತಿಗೆ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹೊಂದಿದ್ದ ಲಕ್ಷ್ಮೀ ಬೇಗನೇ ಹೋಗಿರೋದನ್ನು ವೀಕ್ಷಕರು ಪ್ರಶ್ನೆ ಮಾಡಿದ್ದಾರೆ. ಅಲ್ಲಿಂದ ದೂರ ಬಂದು ಲಕ್ಷ್ಮೀ-ಶ್ರೀನಿವಾಸ್ ಕಣ್ಣೀರು ಹಾಕಿದ್ದಾರೆ. ಈ ದೃಶ್ಯಗಳನ್ನು ನೋಡಿದ ವೀಕ್ಷಕರು, ಇದು ಸಿನಿಮಾ ಅಲ್ಲ, ಸೀರಿಯಲ್ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಾಳಿ ಕಟ್ಟಲು ಒಪ್ಪದ ತೇಜಸ್; ಇತ್ತ ನಿತ್ಯಾ ಮಾತುಗಳನ್ನು ಕೇಳಿ ದಿಗಿಲುಬಿದ್ದ ಕರ್ಣ-ನಿಧಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಲಕ್ಷ್ಮೀ ನಿವಾಸ ಧಾರಾವಾಹಿ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Recommended image1
ತಾಳಿ ಕಟ್ಟಲು ಒಪ್ಪದ ತೇಜಸ್; ಇತ್ತ ನಿತ್ಯಾ ಮಾತುಗಳನ್ನು ಕೇಳಿ ದಿಗಿಲುಬಿದ್ದ ಕರ್ಣ-ನಿಧಿ
Recommended image2
BBK 12: 'ವಿನ್ನರ್' ಎಂದ ಸ್ಪರ್ಧಿಗೆ ಮಧ್ಯರಾತ್ರಿಯ ಮಿಡ್‌ವೀಕ್ ಎಲಿಮಿನೇಷನ್ ಶಾಕ್!
Recommended image3
ಗಿಲ್ಲಿ ನಟನನ್ನು ಕೈಬಿಟ್ಟು ಗೋಲ್ಡ್ ಬೆನ್ನುಬಿದ್ದ ಬಿಗ್ ಬಾಸ್ ಡಾಗ್ ಸತೀಶ್!
Related Stories
Recommended image1
2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
Recommended image2
ಮತ್ತೆ ಮೈಲೇಜ್ ಪಡೆದುಕೊಂಡ ಲಕ್ಷ್ಮೀ ನಿವಾಸ ಸೀರಿಯಲ್; ಅಂತ್ಯವಾಗಲಿದೆ ವೀಕ್ಷಕರ ಕಾಯುವಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved