MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Udupi
  • ಆಟಿ ಅಮಾವಾಸ್ಯೆ ವಿಶೇಷ! ಅಮೃತಕ್ಕೆ ಸಮಾನ ಹಾಲೆ ಮರದ ಕಷಾಯ.. ತುಳುನಾಡಿನಲ್ಲಿ ಇವತ್ತು ಇದನ್ನ ಕುಡಿಯೋದು ಯಾಕೆ?

ಆಟಿ ಅಮಾವಾಸ್ಯೆ ವಿಶೇಷ! ಅಮೃತಕ್ಕೆ ಸಮಾನ ಹಾಲೆ ಮರದ ಕಷಾಯ.. ತುಳುನಾಡಿನಲ್ಲಿ ಇವತ್ತು ಇದನ್ನ ಕುಡಿಯೋದು ಯಾಕೆ?

ತುಳುನಾಡಿನಾದ್ಯಂತ ಪಾರಂಪರಿಕ 'ಪಾಲೆ' ಮರದ ತೊಗಟೆಯ ಕಷಾಯ ಮತ್ತು ಪಿತೃ ಕಾರ್ಯಗಳೊಂದಿಗೆ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಕೇರಳ ಸಮಾಜಂ ವತಿಯಿಂದ ಮಲ್ಪೆ ಕಡಲತೀರದಲ್ಲಿ ಕೇರಳ ಶೈಲಿಯ 'ಬಲಿತರ್ಪಣಂ' ಆಯೋಜಿಸಲಾಗಿತ್ತು.

2 Min read
Author : Ganesh Mabla Gowda
Published : Aug 12 2026, 09:39 PM IST
Share this Photo Gallery
  • FB
  • TW
  • Linkdin
  • Whatsapp
15
ಆಟಿ ಅಮಾವಾಸ್ಯೆ ಎಂದರೆ ಅದು ಕೇವಲ ಒಂದು ತಿಥಿಯಲ್ಲ
Image Credit : Asianet News

ಆಟಿ ಅಮಾವಾಸ್ಯೆ ಎಂದರೆ ಅದು ಕೇವಲ ಒಂದು ತಿಥಿಯಲ್ಲ

ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಎಂದರೆ ಅದು ಕೇವಲ ಒಂದು ತಿಥಿಯಲ್ಲ, ಅದು ಪ್ರಕೃತಿ ನೀಡುವ ಔಷಧ ಮತ್ತು ಪೂರ್ವಜರಿಗೆ ಸಲ್ಲಿಸುವ ಕೃತಜ್ಞತೆಯ ಸಮಾಗಮ. ಈ ಬಾರಿ ಉಡುಪಿಯಲ್ಲಿ ಒಂದು ವಿಶೇಷ ಇತಿಹಾಸ ಸೃಷ್ಟಿಯಾಯಿತು. ಸಾಮಾನ್ಯವಾಗಿ ಕೇರಳದ ಓಣಂ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದ ಉಡುಪಿಯ 'ಕೇರಳ ಸಮಾಜಂ' ಇದೇ ಮೊದಲ ಬಾರಿಗೆ ಪಿತೃಗಳಿಗೆ ತರ್ಪಣ ಬಿಡುವ 'ಬಲಿತರ್ಪಣಂ' ಕಾರ್ಯಕ್ರಮವನ್ನು ಕೇರಳದ ಶೈಲಿಯಲ್ಲೇ ಆಯೋಜಿಸಿ ಗಮನ ಸೆಳೆಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮಲ್ಪೆ ಕಡಲತೀರದಲ್ಲಿ ಕೇರಳ ತಂತ್ರಿಗಳ ಮಂತ್ರಘೋಷ
Image Credit : Asianet News

ಮಲ್ಪೆ ಕಡಲತೀರದಲ್ಲಿ ಕೇರಳ ತಂತ್ರಿಗಳ ಮಂತ್ರಘೋಷ

ಉಡುಪಿಯಲ್ಲಿ ನೆಲೆಸಿರುವ ಕೇರಳ ಮೂಲದ ನೂರಾರು ಕುಟುಂಬಗಳು ಇಷ್ಟು ವರ್ಷಗಳ ಕಾಲ ಸ್ಥಳೀಯ ಪದ್ಧತಿಯಂತೆ ತರ್ಪಣ ಬಿಡುತ್ತಿದ್ದವು. ಆದರೆ ಈ ವರ್ಷ ಕೇರಳದಿಂದಲೇ ನುರಿತ ತಂತ್ರಿಗಳನ್ನು ಕರೆಸಲಾಗಿತ್ತು. ಮಲ್ಪೆ ಕಡಲತೀರದ ಅಲೆಗಳ ಸದ್ದಿನ ನಡುವೆ, ಕೇರಳದ ವಿಶಿಷ್ಟ ವಿಧಿವಿಧಾನಗಳೊಂದಿಗೆ ಸುಮಾರು 70ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಅಗಲಿದ ಪಿತೃಗಳಿಗೆ ಬಲಿತರ್ಪಣಂ ಸಲ್ಲಿಸಿದವು. ಮೃತರ ಆತ್ಮಕ್ಕೆ ಅವರವರ ಸಂಪ್ರದಾಯದಂತೆಯೇ ಸದ್ಗತಿ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಡಲತೀರದಲ್ಲಿ ಕೇರಳ ಮೂಲದ ಬಾಂಧವರು ಭಕ್ತಿಭಾವದಿಂದ ಪಿತೃಕಾರ್ಯ ಮುಗಿಸಿ ಸಂತೃಪ್ತಿ ವ್ಯಕ್ತಪಡಿಸಿದರು.

Related Articles

Related image1
ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್! ರಾಜ್ಯ ಸರ್ಕಾರದಿಂದ ಖಡಕ್ ಆದೇಶ
Related image2
ನೆಟ್‌ವರ್ಕ್ ಕಂಪನಿಗಳ ಬುಡಕ್ಕೆ ತಂದಿಟ್ಟ ಪ್ರಜ್ವಲ್ ರೇವಣ್ಣ -ಏರ್‍‌ಟೆಲ್ ಕಂಪನಿಗೆ ಅಲೋಕ್ ಕುಮಾರ್ ಎಚ್ಚರಿಕೆ
35
ಹಾಲೆ ಮರದ ಕಷಾಯ
Image Credit : Asianet News

ಹಾಲೆ ಮರದ ಕಷಾಯ

ಇನ್ನೊಂದೆಡೆ, ತುಳುನಾಡಿನ ಪ್ರತಿಯೊಂದು ಮನೆಯಲ್ಲೂ ಸೂರ್ಯೋದಯಕ್ಕೂ ಮುನ್ನವೇ ಸಂಭ್ರಮ ಮನೆಮಾಡಿತ್ತು. ಆಟಿ ಅಮಾವಾಸ್ಯೆಯಂದು ಹಾಲೆ ಮರದ (ಪಾಲೆ ಮರ) ಕಷಾಯ ಕುಡಿಯುವುದು ಇಲ್ಲಿನ ಅನಾದಿಕಾಲದ ಸಂಪ್ರದಾಯ. ನಂಬಿಕೆಯ ಪ್ರಕಾರ, ಈ ದಿನ ಹಾಲೆ ಮರದ ತೊಗಟೆಯಲ್ಲಿ 640 ಬಗೆಯ ಔಷಧೀಯ ಗುಣಗಳು ಅಡಗಿರುತ್ತವೆ.

ಮನೆಯ ಪುರುಷರು ಸೂರ್ಯೋದಯಕ್ಕೂ ಮುನ್ನ ಕಾಡಿಗೆ ಹೋಗಿ, ಮರದ ತೊಗಟೆಯನ್ನು ತರುತ್ತಾರೆ. ಮಹಿಳೆಯರು ಅದನ್ನು ಬೆಣಚು ಕಲ್ಲಿನಿಂದ ಜಜ್ಜಿ, ಕಾಳು ಮೆಣಸು, ಬೆಳ್ಳುಳ್ಳಿ, ಓಮ ಸೇರಿಸಿ ಕಷಾಯ ಸಿದ್ಧಪಡಿಸುತ್ತಾರೆ. ಮನೆಯವರೆಲ್ಲರೂ ಈ ಕಹಿ ಕಷಾಯವನ್ನು ಕುಡಿದು 'ಸರ್ವರೋಗ ನಿವಾರಣೆ'ಗೆ ಪ್ರಾರ್ಥಿಸುತ್ತಾರೆ. ಕಷಾಯದ ಕಹಿ ತಣಿಸಲು ನಂತರ ಮೆಂತ್ಯೆ ಗಂಜಿಯನ್ನು ಸವಿಯುವುದು ಇಲ್ಲಿನ ವಿಶೇಷ. ಇದು ಶರೀರದ ಉಷ್ಣತೆಯನ್ನು ಕಡಿಮೆ ಮಾಡಿ ದೇಹವನ್ನು ತಂಪುಗೊಳಿಸುತ್ತದೆ.

45
ಮರುವಂತೆಯಲ್ಲಿ ಸಮುದ್ರ ಸ್ನಾನ
Image Credit : Asianet News

ಮರುವಂತೆಯಲ್ಲಿ ಸಮುದ್ರ ಸ್ನಾನ

ಉಡುಪಿ ಜಿಲ್ಲೆಯ ಮರುವಂತೆಯ ಮಹಾರಾಜ ವರಾಹ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಡಗರದ ವಾತಾವರಣ. ಆಟಿ ಅಮಾವಾಸ್ಯೆಯ ಅಂಗವಾಗಿ ಲಕ್ಷಾಂತರ ಭಕ್ತರು ಮರುವಂತೆ ಕಡಲಿನಲ್ಲಿ ಪುಣ್ಯಸ್ನಾನ ಮಾಡಿದರು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಸಾಗರ ಮತ್ತು ನದಿ ಭೇಟಿಯಾಗುವ ಈ ಪುಣ್ಯಕ್ಷೇತ್ರದಲ್ಲಿ ಸಮುದ್ರ ಸ್ನಾನ ಮಾಡಿ ವರಾಹ ಸ್ವಾಮಿಯ ದರ್ಶನ ಪಡೆಯುವುದು ಕರ್ಕಾಟಕ ಅಮಾವಾಸ್ಯೆಯ ವಿಶೇಷತೆಯಾಗಿದೆ.

55
ಪೂರ್ವಜರ ಆತ್ಮಕ್ಕೆ ಶಾಂತಿ ಕೋರುವ ದಿನ
Image Credit : Asianet News

ಪೂರ್ವಜರ ಆತ್ಮಕ್ಕೆ ಶಾಂತಿ ಕೋರುವ ದಿನ

ಒಟ್ಟಾರೆಯಾಗಿ ಈ ಬಾರಿಯ ಆಟಿ ಅಮಾವಾಸ್ಯೆಯು ತುಳುನಾಡಿನ ಸಾಂಪ್ರದಾಯಿಕ ಕಷಾಯದ ಆರೋಗ್ಯ ಮತ್ತು ಕೇರಳ ಶೈಲಿಯ ತರ್ಪಣದ ಭಕ್ತಿಯೊಂದಿಗೆ ವಿಶಿಷ್ಟವಾಗಿ ಆಚರಿಸಲ್ಪಟ್ಟಿತು. ಮನುಷ್ಯನ ಆರೋಗ್ಯ ಮತ್ತು ಪೂರ್ವಜರ ಆತ್ಮಕ್ಕೆ ಶಾಂತಿ ಕೋರುವ ಈ ದಿನವು ಕರಾವಳಿಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮತ್ತೊಮ್ಮೆ ಅನಾವರಣಗೊಳಿಸಿತು.

About the Author

GM
Ganesh Mabla Gowda
ಪತ್ರಿಕೋದ್ಯಮದ ಕನಸು ಕಟ್ಟಿಕೊಟ್ಟಿದ್ದು ಕುವೆಂಪು ವಿವಿ. ʼಕನ್ನಡ ಜನಾಂತರಂಗʼ ಮತ್ತು ʼಕರಾವಳಿ ಅಲೆʼ ಮೂಲಕ ವೃತ್ತಿ ಆರಂಭ. ಅದಕ್ಕೆ ರೆಕ್ಕುಪುಕ್ಕ ಕೊಟ್ಟಿದ್ದು ಪಬ್ಲಿಕ್‌ ಟಿವಿ, ಟಿವಿ9 ಹಾಗೂ ನ್ಯೂಸ್‌ಫಸ್ಟ್‌ ಕನ್ನಡ. ಒಂದಷ್ಟು ಅನುಭವ. ಪ್ರಸ್ತುತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ ಮುಂದುವರಿದಿದ್ದೇನೆ. ಬದುಕು ನಿರಂತರ ಕಲಿಕೆ. ಅದಕ್ಕೆ ಈಗ ʼನೇರ ದಿಟ್ಟ ನಿರಂತರʼ! ಪುಸ್ತಕ ಓದೋದು ನನ್ನ ಅಭ್ಯಾಸ. ಕವನ ಬರೆಯೋದು ನನ್ನಿಷ್ಟ. ರಾಜಕೀಯ ಹಾಗೂ ಕ್ರಿಕೆಟ್‌ ಸುದ್ದಿಗಳ ಮೇಲೆ ಹೆಚ್ಚು ಆಸಕ್ತಿ. ಹಾಂ.. ಅಂದ್ಯಾಗೆ ನನ್ನ ಊರು ಉತ್ತರ ಕನ್ನಡ ಜಿಲ್ಲೆ ದೊಡ್ಮನೆ ಬಳಿಯ ಕೆರೆಕುಳಿ ಎಂಬ ಪುಟ್ಟ ಊರು!
ಉಡುಪಿ
ಟ್ರೆಂಡಿಂಗ್ ನ್ಯೂಸ್
ವೈರಲ್ ಸುದ್ದಿ
ವೈರಲ್ ವಿಡಿಯೋ
Latest Videos
Recommended Stories
Recommended image1
ಆ.11ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್, 57 ಸುರಂಗ, 226 ಸೇತುವೆ 108 ವಕ್ರಾಕೃತಿ ತಿರುವು ದಾಟಲಿದೆ ರೈಲು!
Recommended image2
ಮೃತ ಕಾನ್‌ಸ್ಟೇಬಲ್ ಅರ್ಜುನ್ ಶಂಕರ್ ಕುಟುಂಬಕ್ಕೆ 1.45 ಕೋಟಿ ರೂಪಾಯಿ ವಿಮೆ ಹಸ್ತಾಂತರ
Recommended image3
ಬರದ ಮಧ್ಯೆಯೂ ರಾಜ್ಯದ ಹಲವೆಡೆ ಭಾರೀ ಮಳೆ: ಕಣ್ಮನ ಸೆಳೆದ ಹೊಗೇನಲ್‌ ಜಲಪಾತ!
Related Stories
Recommended image1
ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್! ರಾಜ್ಯ ಸರ್ಕಾರದಿಂದ ಖಡಕ್ ಆದೇಶ
Recommended image2
ನೆಟ್‌ವರ್ಕ್ ಕಂಪನಿಗಳ ಬುಡಕ್ಕೆ ತಂದಿಟ್ಟ ಪ್ರಜ್ವಲ್ ರೇವಣ್ಣ -ಏರ್‍‌ಟೆಲ್ ಕಂಪನಿಗೆ ಅಲೋಕ್ ಕುಮಾರ್ ಎಚ್ಚರಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved