MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Uttara Kannada
  • ಶಿರಸಿಯ ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ನೇಮಕ!

ಶಿರಸಿಯ ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ನೇಮಕ!

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಎಂಬಿಬಿಎಸ್ ಮತ್ತು ಎಂಡಿ ಪದವಿ ಪಡೆದ ಇವರು, ಸಿಕಂದರಾಬಾದ್‌ನಲ್ಲಿ ದೇಶ ಕಾಯುವ ಸೈನಿಕರ ವೈದ್ಯಕೀಯ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ.

1 Min read
Kannadaprabha News
Published : Sep 18 2025, 04:27 PM IST
Share this Photo Gallery
  • FB
  • TW
  • Linkdin
  • Whatsapp
14
ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್
Image Credit : Asianet News

ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಣ್ಣು ಮಗಳೊಬ್ಬಳು ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ನೇಮಕಗೊಂಡಿದ್ದಾರೆ. ಆಂಧ್ರ ಪ್ರದೇಶದ ಸಿಕಂದರಾಬಾದಿನ ಮಿಲಿಟರಿ ಆಸ್ಪತ್ರೆಯಲ್ಲಿ ಡಾ.ರಶ್ಮಿ ಹೆಗಡೆ ಇದೀಗ ಸೈನಿಕರ ನೆರವಿನ ಸೇವೆಗೆ ಕಂಕಣತೊಟ್ಟಿದ್ದಾರೆ.

24
ಗದಗನಲ್ಲಿ MBBS ಪದವಿ
Image Credit : Social Media

ಗದಗನಲ್ಲಿ MBBS ಪದವಿ

ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಮುಗಿಸಿ, ಕಳೆದ ಜನವರಿ ತಿಂಗಳಿನಲ್ಲಿ ಕೆಎಂಸಿ ಹುಬ್ಬಳ್ಳಿಯಿಂದ ತಮ್ಮ ಎಂಡಿ ಪದವಿ ಗಳಿಸಿದ್ದರು. 

Related Articles

Related image1
‘ಡು ಯು ನೋ ಕನ್ನಡ’: ಸಿಎಂ ಸಿದ್ದರಾಮಯ್ಯ ತಮಾಷೆ, ರಾಷ್ಟ್ರಪತಿಯ ಹೃದಯ ಗೆದ್ದ ಉತ್ತರ
Related image2
Reporter Diary: ಉತ್ತರ ಕನ್ನಡದ ಕುತೂಹಲಕಾರಿ ಡೈರಿ ರಹಸ್ಯ, ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿದ್ದು ಅಚ್ಚರಿಯ ಮಾಹಿತಿ!
34
 ಡಾ. ಲಕ್ಷ್ಮಿ ನಾರಾಯಣ ಹೆಗಡೆ ಅವರ ಪುತ್ರಿ
Image Credit : Social Media

ಡಾ. ಲಕ್ಷ್ಮಿ ನಾರಾಯಣ ಹೆಗಡೆ ಅವರ ಪುತ್ರಿ

ರಶ್ಮಿ ಹೆಗಡೆ ಶಿರಸಿ ತಾಲೂಕಿನ ಬೊಪ್ಪನಳ್ಳಿಯ ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯದ ರೋಹಿಣಿ, ವಿಶ್ರಾಂತ ಡಾ. ಲಕ್ಷ್ಮಿ ನಾರಾಯಣ ಹೆಗಡೆ ಅವರ ಪುತ್ರಿಯಾಗಿದ್ದಾರೆ.

44
 ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ
Image Credit : stockPhoto

ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ

ದೇಶ ಕಾಯುವ ಸೈನಿಕರ ಮತ್ತು ಅವರ ಕುಟುಂಬದವರ ವೈದ್ಯಕೀಯ ಸೇವೆಗೆ ತಮ್ಮನ್ನು ತೊಡಗಿಸಿಕೊಂಡು ಹಲವು ಯುವ ವೈದ್ಯರಿಗೆ ಮಾದರಿಯಾಗಿರುವುದು ಉಲ್ಲೇಖನೀಯ. ರಶ್ಮಿ ತಮ್ಮ ಪ್ರಾಥಮಿಕ ಆಭ್ಯಾಸವನ್ನು ಗೋಕಾಕಿನ ಕೆಎಲ್‌ಇ ಸಂಸ್ಥೆಯಲ್ಲಿ, ಪಿಯುಸಿಯನ್ನು ಶಿರಸಿಯ ಚೈತನ್ಯ ಮಹಾವಿದ್ಯಾಲಯದಲ್ಲಿ ಪೂರೈಸಿ 2015ನೇ ಇಸ್ವಿಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯಕ್ಕೆ 4ನೇ ಸ್ಥಾನ ಗಳಿಸಿದ್ದನ್ನು ಸ್ಮರಿಸಬಹುದು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಉತ್ತರ ಕನ್ನಡ
ವೈದ್ಯರು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved