MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Uttara Kannada
  • RCB ಟೀಂ ನೋಡಲು ಹೋಗಿ ಉತ್ತರಕನ್ನಡದ ಸಿದ್ದಾಪುರದ ಅಕ್ಷತಾ ಪೈ ನಿಧನ; ವಿಶ್ವೇಶ್ವರ ಹೆಗಡೆ ಪ್ರತಿಕ್ರಿಯೆ

RCB ಟೀಂ ನೋಡಲು ಹೋಗಿ ಉತ್ತರಕನ್ನಡದ ಸಿದ್ದಾಪುರದ ಅಕ್ಷತಾ ಪೈ ನಿಧನ; ವಿಶ್ವೇಶ್ವರ ಹೆಗಡೆ ಪ್ರತಿಕ್ರಿಯೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅಕ್ಷತಾ ಪೈ ನಿಧನರಾಗಿದ್ದಾರೆ. ಈ ಬಗ್ಗೆ ವಿಶ್ವೇಶ್ವರ ಹೆಗಡೆ ಕಾವೇರಿ ಅವರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

1 Min read
Padmashree Bhat
Published : Jun 05 2025, 02:10 PM IST| Updated : Jun 05 2025, 02:17 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : ANI Photos

ಉತ್ತರ ಕನ್ನಡ ಜಿಲ್ಲೆಯ ಎಂಪಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು “ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಜೂನ್ 4, 2025) ನಡೆದ ಕಾಲ್ತುಳಿತ ದುರಂತವು ಅತ್ಯಂತ ಆಘಾತಕಾರಿ ಮತ್ತು ಹೃದಯ ವಿದ್ರಾವಕ ಸಂಗತಿಯಾಗಿದೆ. ಈ ಘಟನೆಯು ಕೇವಲ ಒಂದು ದುರಂತವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಸಂಭವಿಸಿದ "ಹತ್ಯಾಕಾಂಡ" ಎಂದು ನಾನು ಸ್ಪಷ್ಟವಾಗಿ ಹೇಳಬಯಸುತ್ತೇನೆ” ಎಂದಿದ್ದಾರೆ.

25
Image Credit : X

ಈ ದುರ್ಘಟನೆಯಲ್ಲಿ ಅಸುನೀಗಿದ ಎಲ್ಲರಿಗೂ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Related Articles

Related image1
Now Playing
RCB ಸಂಭ್ರಮದಲ್ಲಿ ಸಾವಿನ ಸೂತಕ! ನಡೆಯಬಾರದ ದುರಂತ ನಡೆದು ಹೋಯ್ತು, ಇದಕ್ಕೆ ಹೊಣೆ ಯಾರು?
Related image2
100 ಕೋಟಿ ರೂ ಆಸ್ತಿ ಮಾಡಿದ್ದೀನಿ, RCB ಟೀಂ ನೋಡಲು ಹೋಗಿ ಒಬ್ಬನೇ ಮಗ ಬೀದಿ ಹೆಣವಾದ; ಭೂಮಿಕ್‌ ತಂದೆ ಆಕ್ರೋಶ
35
Image Credit : ANI

ಅತ್ಯಂತ ದುಃಖದ ಸಂಗತಿಯೆಂದರೆ, ಈ ಭೀಕರ ಕಾಲ್ತುಳಿತದಲ್ಲಿ ಸಿದ್ದಾಪುರದ ಅಕ್ಷತಾ ಪೈ ಅವರು ಅಕಾಲಿಕ ಮರಣವಪ್ಪಿದ್ದಾರೆ. ಅವರ ಕುಟುಂಬದ ನೋವಿನಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಈ ಹಠಾತ್ ಅಗಲಿಕೆ ನಮ್ಮೆಲ್ಲರಿಗೂ ತೀವ್ರ ನೋವನ್ನುಂಟು ಮಾಡಿದೆ.

45
Image Credit : Asianet News

“ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಸರ್ಕಾರ ತಕ್ಷಣವೇ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ. 

55
Image Credit : ANI

"ಭವಿಷ್ಯದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಮೊದಲು ಸಮಗ್ರ ಸುರಕ್ಷತಾ ಯೋಜನೆಗಳನ್ನು ಕಡ್ಡಾಯಗೊಳಿಸಬೇಕು. ಜನರ ಜೀವದೊಂದಿಗೆ ಚೆಲ್ಲಾಟವಾಡಬಾರದು" ಎಂದಿದ್ದಾರೆ. 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಆರ್‌ಸಿಬಿ
ಐಪಿಎಲ್
ಬೆಂಗಳೂರು ಕಾಲ್ತುಳಿತ
ಕ್ರಿಕೆಟ್ ಕ್ರೀಡಾಂಗಣ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved