MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Vaastu
  • Bedroom Vastu : ಹಾಸಿಗೆಯಲ್ಲಿ ಕುಳಿತು ತಿನ್ನುತ್ತೀರಾ? ಇದರಿಂದಲೇ ಹಣ ಕೈಲಿ ನಿಲ್ಲುತ್ತಿಲ್ಲ!

Bedroom Vastu : ಹಾಸಿಗೆಯಲ್ಲಿ ಕುಳಿತು ತಿನ್ನುತ್ತೀರಾ? ಇದರಿಂದಲೇ ಹಣ ಕೈಲಿ ನಿಲ್ಲುತ್ತಿಲ್ಲ!

ವಾಸ್ತು ಶಾಸ್ತ್ರದ ನಿಯಮಗಳ ಬಗ್ಗೆ ಇಂದಿಗೂ ಅನೇಕರಿಗೆ ತಿಳಿದಿಲ್ಲ. ಆದ್ದರಿಂದಲೇ ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. 

1 Min read
Suvarna News | Asianet News
Published : Feb 05 2022, 05:25 PM IST
Share this Photo Gallery
  • FB
  • TW
  • Linkdin
  • Whatsapp
17

ಸಾಮಾನ್ಯವಾಗಿ ಜನರು ಮನೆಯಲ್ಲಿರುವ ಸಣ್ಣ ಪುಟ್ಟ ವಸ್ತುಗಳನ್ನು ನಿರ್ಲಕ್ಷಿಸುತ್ತಾರೆ. ವಾಸ್ತವವಾಗಿ, ಈ ತಪ್ಪುಗಳು ಜೀವನದ ಮೇಲೆ ಭಾರವಾಗಬಹುದು. ಇದರಿಂದಾಗಿ ಆರ್ಥಿಕ ಸಮೃದ್ಧಿ, ಯಶಸ್ಸು(Success) ಮತ್ತು ಜೀವನದಲ್ಲಿ ಪ್ರಗತಿ ನಿಲ್ಲುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ನೋಡೋಣ. 

27

ವಾಸ್ತು ಶಾಸ್ತ್ರದ ಪ್ರಕಾರ ಈ ತಪ್ಪುಗಳನ್ನು ಮಾಡಬೇಡಿ
ವಾಸ್ತು(Vaastu) ಶಾಸ್ತ್ರದ ಪ್ರಕಾರ ಹಾಸಿಗೆಯ ಮೇಲೆ ಕುಳಿತು ಊಟ ಮಾಡುವುದು ಸರಿಯಲ್ಲ. ಏಕೆಂದರೆ ಹೀಗೆ ಮಾಡುವುದರಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ಇಂತಹ ಜನರು, ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದುದರಿಂದ ಹಾಸಿಗೆಯಲ್ಲಿ ಕುಳಿತು ತಿನ್ನೋದು ನಿಲ್ಲಿಸಿ. 

37

ಹಾಸಿಗೆಯಲ್ಲಿ(Bed) ಕುಳಿತು ಊಟ ಮಾಡುವ  ಜನರು, ಆರ್ಥಿಕ ಸಂಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಇದರ ಹೊರತಾಗಿ ಯಾವುದೋ ಕೆಲಸದಲ್ಲಿ ಯಶಸ್ಸು ಪಡೆಯಲು ಅವರು ಶ್ರಮಿಸಬೇಕು. ಶ್ರಮ ಪಟ್ಟರೂ ಏನಾದರೊಂದು ಕಾರಣದಿಂದಾಗಿ ಯಶಸ್ಸು ತಪ್ಪಿ ಹೋಗುವ ಸಾಧ್ಯತೆ ಇದೆ. 

47

ವಾಸ್ತು ಪ್ರಕಾರ ರಾತ್ರಿ ಅಡುಗೆ ಮನೆಯಲ್ಲಿ ಸಾಕಷ್ಟು ಪಾತ್ರೆಗಳನ್ನು ಬಿಟ್ಟರೆ ಹಣ ಕಳೆದುಕೊಳ್ಳಲು ಕಾರಣವಾಗುತ್ತದೆ. ಮಲಗುವ ಮುನ್ನ ಪಾತ್ರೆಗಳನ್ನು ಸ್ವಚ್ಛಗೊಳಿಸಬೇಕು. ಏಕೆಂದರೆ ಹೀಗೆ ಮಾಡುವುದರಿಂದ ನಕಾರಾತ್ಮಕ ಶಕ್ತಿ(Negative energy) ಮನೆಯೊಳಗೆ ಪ್ರವೇಶಿಸುವುದಿಲ್ಲ. 

57

ವಾಸ್ತು ಶಾಸ್ತ್ರದ ಪ್ರಕಾರ ರಾತ್ರಿ ಸ್ನಾನಗೃಹದಲ್ಲಿ(Bathroom) ಬಕೆಟ್ ನಲ್ಲಿ ನೀರನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ವಾಸವಾಗುವುದಿಲ್ಲ. ಅದೇ ಸಮಯದಲ್ಲಿ, ಅಡುಗೆಮನೆಯಲ್ಲಿ ನೀರು ತುಂಬಿದ ಬಕೆಟ್ ಅನ್ನು ಇಟ್ಟುಕೊಳ್ಳುವುದರಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ. 

67
dairy products

dairy products

ವಾಸ್ತು ಶಾಸ್ತ್ರದ ಪ್ರಕಾರ ಸೂರ್ಯಾಸ್ತದ ನಂತರ ಯಾರೂ ಮೊಸರು(Curd), ಹಾಲು, ಉಪ್ಪನ್ನು ದಾನವಾಗಿ ನೀಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿ ಬಡತನ ನೆಲೆಸಲು ಆರಂಭವಾಗುತ್ತದೆ. ಅಷ್ಟೇ ಅಲ್ಲ, ನೀವು ಹಣಕಾಸಿನ ನಿರ್ಬಂಧಗಳನ್ನು ಸಹ ಎದುರಿಸಬೇಕಾಗಬಹುದು. 

77

ಮನೆಯ ಈಶಾನ್ಯ ಕೋನದಲ್ಲಿ ಪೂಜಾ ಗೃಹ(Pooja room ನಿರ್ಮಿಸುವುದು ಶುಭಕರ. ಈಶಾನ್ಯ ಕೋನದಲ್ಲಿ ಒಬ್ಬರು ಯಾವಾಗಲೂ ನೀರನ್ನು ಒಂದು ಮಡಕೆಯಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಜೀವನದಲ್ಲಿ ಸಂತೋಷ ಉಂಟಾಗುತ್ತದೆ. ಈ ಬಗ್ಗೆ ನೀವು ತಿಳಿದುಕೊಳ್ಳುವುದು ಉಚಿತ. 

About the Author

SN
Suvarna News
ಜ್ಯೋತಿಷ್ಯ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved