MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • World News
  • ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರೋದ್ಯಾಕೆ? ಉತ್ತರ ನೀಡಿದ ಚೀನಾ

ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರೋದ್ಯಾಕೆ? ಉತ್ತರ ನೀಡಿದ ಚೀನಾ

ಪಹಲ್ಗಾಂ ನರಮೇಧದ ಬಳಿಕ ಭಾರತ-ಪಾಕ್ ಸಂಬಂಧ ಹದಗೆಟ್ಟಿರುವ ನಡುವೆಯೇ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದೆ. ಪಾಕಿಸ್ತಾನದ ಅಧ್ಯಕ್ಷರನ್ನು ಭೇಟಿಯಾದ ಚೀನಾ ರಾಯಭಾರಿ, ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ಬೆಂಬಲವಿದೆ ಎಂದಿದ್ದಾರೆ. ಇತ್ತ ಪಹಲ್ಗಾಂ ಘಟನೆ ಬಳಿಕ ಭಾರತ ಪಾಕಿಸ್ತಾನಕ್ಕೆ ಎಡಿಬಿ ನೆರವು ನಿಲ್ಲಿಸುವಂತೆ ಮನವಿ ಮಾಡಿದೆ.

2 Min read
Kannadaprabha News
Published : May 06 2025, 11:04 AM IST
Share this Photo Gallery
  • FB
  • TW
  • Linkdin
  • Whatsapp
17

ಪಹಲ್ಗಾಂ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಬಿಗಡಾಯಿಸಿರುವ ನಡುವೆಯೇ ನೆರೆಯ ರಾಷ್ಟ್ರ ಚೀನಾ ಮತ್ತೆ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದೆ. ‘ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ’ ಎಂದು ಅದು ಹೇಳಿದೆ.

27

ಪಾಕಿಸ್ತಾನದ ಅಧ್ಯಕ್ಷ ಅಲಿ ಜರ್ದಾರಿ ಅವರನ್ನು ಸೋಮವಾರ ಭೇಟಿಯಾದ ಪಾಕಿಸ್ತಾನದಲ್ಲಿನ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್, ‘ಚೀನಾ ಮತ್ತು ಪಾಕಿಸ್ತಾನದ ಸ್ನೇಹ ಶಾಶ್ವತವಾಗಿದೆ. ಕಾಲ ಕಾಲಕಕೆ ಪರೀಕ್ಷೆಗೆ ಒಳಗಾಗಿದ್ದರೂ ಯಾವಾಗಲೂ ಸವಾಲಿನ ಸಮಯದಲ್ಲಿ ಪರಸ್ಪರ ಬೆಂಬಲಿಸಿದ ಸ್ನೇಹ ನಮ್ಮದಾಗಿದೆ. ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ’ ಎಂದರು.

Related Articles

Related image1
ವಿದೇಶಿ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸಿ ಟ್ರಂಪ್ ಘೋಷಣೆ!
Related image2
ಚೀನಾ ಸೂಚನೆಯಂತೆ ಪಾಕಿಸ್ತಾನ ನಡೆಸಿತಾ ಪೆಹಲ್ಗಾಂ ಉಗ್ರ ದಾಳಿ? ಕನೆಕ್ಟ್ ಆಗುತ್ತಿದೆ ಡಾಟ್ಸ್
37

ಈ ವೇಳೆ ಜರ್ದಾರಿ ಮಾತನಾಡಿ, ‘ಭಾರತವು ಬೇಜಾವಾಬ್ದಾರಿ ಮತ್ತು ಆಕ್ರಮಣಕಾರಿ ನಡೆಯನ್ನು ಅನುಸರಿಸುತ್ತಿದೆ. ಇಂತಹ ನಡೆ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಧಕ್ಕೆ ತರುತ್ತದೆ’ ಎಂದು ಚೀನಾ ರಾಯಭಾರಿಯ ಗಮನಕ್ಕೆ ತಂದರು.

47

ಮೋದಿ ಜತೆ ರಕ್ಷಣಾ ಕಾರ್ಯದರ್ಶಿ ಭೇಟಿ: ಪಹಲ್ಗಾಂ ಚರ್ಚೆ

ಪಹಲ್ಗಾಂ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದರು.

57

ಇತ್ತೀಚೆಗಷ್ಟೇ ನೌಕಾ ಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಪ್ರಧಾನಿ ಭೇಟಿಯಾಗಿ ಅರಬ್ಬಿ ಸಮುದ್ರದಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳಲ್ಲಿನ ಒಟ್ಟಾರೆ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದರು. ಭಾನುವಾರ ವಾಯು ಸೇನೆ ಮುಖ್ಯಸ್ಥ ಏರ್‌ಚೀಫ್‌ ಮಾರ್ಷಲ್‌ ಎಪಿ ಸಿಂಗ್ ಅವರು ಮೋದಿ ಭೇಟಿಯಾಗಿ ಭದ್ರತಾ ಪರಿಸ್ಥಿತಿ ಬಗ್ಗೆ ವಿವರಿಸಿದ್ದರು. ಈ ಬೆನ್ನಲ್ಲೇ ರಾಜೇಶ್‌ ಕುಮಾರ್‌ ಭೇಟಿಯಾಗಿದ್ದಾರೆ.

67

ಪಾಕ್‌ಗೆ ಆರ್ಥಿಕ ನೆರವು ನಿಲ್ಲಿಸಿ

ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ವಿರುದ್ಧ ಕಠಿಣ ರಾಜತಾಂತ್ರಿಕ ನಿಲುವು ಪ್ರದರ್ಶಿಸುತ್ತಿರುವ ಭಾರತ ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದ್ದು, ಆರ್ಥಿಕವಾಗಿ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಹಣಕಾಸು ನೆರವು ನಿಲ್ಲಿಸುವಂತೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ಗೆ (ಎಡಿಬಿ) ಮನವಿ ಮಾಡಿದೆ.

77

ಇತ್ತೀಚೆಗೆ ನಡೆದ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಡಿಬಿ ಬ್ಯಾಂಕ್ ಮುಖ್ಯಸ್ಥ ಮಸಾಟೋ ಕಾಂಡಾ ಅವರೊಂದಿಗೆ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಮಾತ್ರವಲ್ಲದೆ ವಿತ್ತ ಸಚಿವೆ ಈಗಾಗಲೇ ಇಟಲಿ ಹಾಗೂ ಹಲವಾರು ಯುರೋಪಿಯನ್ ರಾಷ್ಟ್ರಗಳೊಂದಿಗೆ ಈ ವಿಚಾರದ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಚೀನಾ
ಪಾಕಿಸ್ತಾನ
ಭಾರತ
ಅಂತರರಾಷ್ಟ್ರೀಯ ಸುದ್ದಿ
ಪಹಲ್ಗಾಮ್ ಭಯೋತ್ಪಾದಕ ದಾಳಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved