Student bus accident in Hassan: ಕೇರಳದಿಂದ ಕರ್ನಾಟಕಕ್ಕೆ ಅಧ್ಯಯನ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಹಾಸನದ ಅರಕಲಗೂಡು ಬಳಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕೇರಳ ಬಸ್ ಹಾಸನದ ಬಳಿ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಕೇರಳದಿಂದ ಕರ್ನಾಟಕಕ್ಕೆ ಅಧ್ಯಯನ ಪ್ರವಾಸ ಬಂದ ವಿದ್ಯಾರ್ಥಿಗಳ ಬಸ್ಸೊಂದು ಹಾಸನದ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನದ ಅರಕಲಗೂಡು ತಾಲೂಕಿನ ಬರಗೂರು ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನೂ ಕೂಡಲೇ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಹಾಗೂ ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ಬೆಂಗಳೂರು ಪ್ರವಾಸದಿಂದ ಹಿಂದಿರುಗುತ್ತಿದ್ದಾಗ ಬರಗೂರು ಬಳಿ ಬಸ್ ಪಲ್ಟಿ:

ಕೇರಳದ ವಿದ್ಯಾರ್ಥಿಗಳು ಬೆಂಗಳೂರಿಗೆ ಪ್ರವಾಸ ಹೋಗಿದ್ದು, ವಾಪಸ್ ಬರುತ್ತಿದ್ದ ವೇಳೆ ಹಾಸನದ ಅರಕಲಗೂಡಿನ ಸಮೀಪ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿಗಳು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ವಡಕಾರದ ಶಾಲೆಯೊಂದರಿಂದ ಮಕ್ಕಳು ಕರ್ನಾಟಕ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಈ ಬಸ್ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ: ಮಾಜಿ ಗೆಳತಿಗೆ ಮುತ್ತು ಕೊಡಲು ಹೋಗಿ ಮಾತೇ ನಿಂತೋಯ್ತು: ವಿವಾಹಿತನಿಗೆ ಆಗಿದ್ದೇನು?

ಇದನ್ನೂ ಓದಿ: ಜಿಪ್‌ ಲೈನ್ ಅಪಘಾತವಾಗಿದೆ ಎಂದು ಸುಳ್ಳು ಎಐ ವೀಡಿಯೋ: ಯುವಕನ ಬಂಧನ