ಮಧ್ಯರಾತ್ರಿಯಿಂದಲೂ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ಹಾಸನದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. 

ಹಾಸನ [ಅ.15]: ಟಯರ್ ಪಂಕ್ಚರ್ ಆಗಿ ಮಧ್ಯರಾತ್ರಿಯಿಂದಲೂ ಖಾಸಗಿ ಬಸ್ ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. 

Add Asianetnews Kannada as a Preferred SourcegooglePreferred

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಂತಿದ್ದು, ಬಸ್ಸಿನಲ್ಲಿದ್ದ 30 ಪ್ರಯಾಣಿಕರು ಪರದಾಟ ಕೇಳುವರಿಲ್ಲದಂತಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದೋಣಿಗಲ್ ಸಮೀಪ ಬಸ್ ಭಾರತಿ ಬಸ್ ಟಯರ್ ಪಂಕ್ಚರ್ ಆಗಿ ಕೆಟ್ಟು ನಿಂತಿದ್ದು, ರಸ್ತೆಯಲ್ಲಿ ರಾತ್ರಿ ಕಳೆಯುವಂತಾಯ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಗಳೂರು ಮೂಲದ ಭಾರತಿ ಟ್ರಾವೆಲ್ಸ್ ಸೇರಿದ ಬಸ್ ಇದಾಗಿದ್ದು, ಈ ಬಗ್ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.