ತನ್ನ ಮೇಲೆ ಆರೋಪ ಕೇಳಿ ಬಂದಿದ್ದಕ್ಕೆ ಯುವಕನೊಬ್ಬ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹಾಸನ(ಏ. 23) ಆರೋಪ‌ ಬಂದ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ‌ ನಗರದ ವಿಶಾಲ್ ಮಾರ್ಟ್ ಅಂಗಡಿ ಸಿಬ್ಬಂದಿ ವಿರುದ್ದ ಬ್ರಹ್ಮದೇವರಹಳ್ಳಿಯ ಪ್ರಮೋದ್(19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾರ್ಟ್ ನ ವ್ಯಾಪಾರದ 60 ಸಾವಿರ ಹಣ ದುರುಪಯೋಗ ಮಾಡಿಕೊಂಡಿದ್ದು ಎಂಬ ಆರೋಪ ಕೇಳಿ ಬಂದಿತ್ತು. ಆರೋಪದಿಂದ‌ ಮನನೊಂದು ಎರಡು ದಿನದ ಹಿಂದೆ ಪ್ರಮೋದ್ ವಿಷ ಸೇವಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಸಾವಿಗೂ ಮುನ್ನ ಕಿರಣ್ , ಜುನೈದ್, ಆದಿಲ್ ಮಾನಸಿಕ‌ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಮೋದ್ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.