Asianet Suvarna News Asianet Suvarna News

ದೇಶದಲ್ಲಿ 3038 ಹೊಸ ಕೋವಿಡ್‌ ಕೇಸ್‌, 9 ಸಾವು; ಸಕ್ರಿಯ ಕೇಸ್‌ 2179ಕ್ಕೆ ಏರಿಕೆ

ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

3038 new covid cases in country, 9 deaths; Active cases rise to 2179 Vin
Author
First Published Apr 5, 2023, 9:07 AM IST

ನವದೆಹಲಿ: ಭಾರತದಲ್ಲಿ ಮಂಗಳವಾರ ಬೆಳಗ್ಗೆ 24 ಗಂಟೆ ಅವಧಿಯಲ್ಲಿ 3038 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪ್ರಮಾಣವು ಶೇ.1.19ರಷ್ಟಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ ಕಡಿಮೆ ಇರುವ ಕಾರಣ ಸಕ್ರಿಯ ಪ್ರಕರಣಗಳು 21,179ಕ್ಕೆ ಏರಿಕೆಯಾಗಿ ಇದರ ಪ್ರಮಾಣವು ಶೇ.0.05ರಷ್ಟಿದೆ. ದೇಶದಲ್ಲಿ ಈವರೆಗೂ 4.47 ಕೋಟಿ ಮಂದಿ ಸೋಂಕಿಗೊಳಗಾಗಿದ್ದು, ಅದರಲ್ಲಿ 4.41 ಕೋಟಿ ಜನ ಗುಣಮುಖರಾಗಿದ್ದಾರೆ ಹಾಗೂ 5.30 ಲಕ್ಷ ಜನ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೂ 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್ ಹೆಚ್ಚಳದಿಂದ ಭಾರತದಲ್ಲಿ ಮಾರ್ಗಸೂಚಿ ಜಾರಿ, ಮತ್ತೆ ಬಂತು ಮಾಸ್ಕ್
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿದೆ. ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೆಲ ಮಾರ್ಗಸೂಚಿ (Guidelines) ಬಿಡುಗಡೆ ಮಾಡಿದೆ. ವಿದೇಶಿ ಪ್ರಯಾಣಿಕರು (Passengers), ಹಾಗೂ ವಿಮಾನ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಿದೆ. 

COVID-19 : ಆಪ್ತರನ್ನು ಗುರುತಿಸೋದೂ ಕಷ್ಟ! ಕೊರೊನಾದಿಂದ ಕಾಡ್ತಿದೆ ಮತ್ತೊಂದು ಸಮಸ್ಯೆ

ವಿದೇಶಿ ಪ್ರಯಾಣಿಕರು ಮೇಲೆ ನಿಗಾ ಇಡಲಾಗುತ್ತಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಆದರೆ ಕಡ್ಡಾಯ ಮಾಡಿಲ್ಲ. ಸದ್ಯ ಸರಾಸರಿ 3,000 ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಆದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಹೀಗಾಗಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಲಾಗುತ್ತಿದೆ. ಕೋವಿಡ್ ವೈರಸ್ ಅಂಟಿಕೊಳ್ಳದಂತೆ ದೂರವಿರಲಿ ತಜ್ಞರು ಸೂಚಿಸಿದ ಸಲಹೆಗಳನ್ನೂ ಸೂಚಿಸಲಾಗಿದೆ ಎಂದು ರಾಜ್ಯಸಭೆಯಲ್ಲಿ ವಿಮಾನಯಾನ ರಾಜ್ಯ ಸಚಿವ ನಿವೃತ್ತ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ. 

ವಿದೇಶದಲ್ಲಿ ಗಣನೀಯವಾಗಿ ಕೋವಿಡ್ ಏರಿಕೆಯಾಗುತ್ತಿದೆ. ಇದರ ಆತಂಕ ಭಾರತದಲ್ಲೂ ಇದೆ. ಆದರೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೂ ಆತಂಕ ಪಡುವ ಅಗತ್ಯವಿಲ್ಲ. ದೇಶದಲ್ಲಿನ ಕೋವಿಡ್ ಪ್ರಕರಣ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಿಗಾವಹಿಸಲಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ ಎಂದು ವಿಕೆ ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಹೊಸ ಅಲೆಯ ಮುನ್ಸೂಚನೆಯಾ?

ಮತ್ತೊಮ್ಮೆ ಬೂಸ್ಟರ್‌ ಡೋಸ್‌ ನೀಡಲು ಡಬ್ಲ್ಯುಎಚ್‌ಒ ಸಲಹೆ
 ಪೂರ್ವರೋಗಗಳಿಂದ ಬಳಲುತ್ತಿರುವವರಿಗೆ, ಆರೋಗ್ಯ ಕಾರ್ಯಕರ್ತರಿಗೆ 6 ಅಥವಾ 12 ತಿಂಗಳ ಬಳಿಕ ಮತ್ತೊಂದು ಬೂಸ್ಟರ್‌ ಡೋಸ್‌ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯ ‘ಲಸಿಕಾಕರಣ ತಜ್ಞರ ಸಮಿತಿ’ ಸಲಹೆ ನೀಡಿದೆ.ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಹೆಚ್ಚುತ್ತಿರುವ ನಡುವೆಯೇ ಈ ಸಲಹೆ ಬಂದಿದೆ. ನಿರ್ದಿಷ್ಟಆರೋಗ್ಯ ಸಮಸ್ಯೆಗಳಿಂದ (Health problem) ಬಳಲುತ್ತಿರುವ ಯುವಕರು, ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ಮತ್ತೊಂದು ಬೂಸ್ಟರ್‌ ಡೋಸ್‌ ನೀಡಬೇಕು. ಒಂದು ವೇಳೆ ಇವರು ಕೋವಿಡ್‌ಗೆ ತುತ್ತಾದರೆ ಹೆಚ್ಚಿನ ತೊಂದರೆಗೆ ತುತ್ತಾಗಲಿದ್ದಾರೆ ಎಂದು ಸಮಿತಿ ಹೇಳಿದೆ.

ಅಲ್ಲದೇ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಯುವಕರಿಗೆ ಈಗಾಗಲೇ ನೀಡಿರುವ ಬೂಸ್ಟರ್‌ ಡೋಸ್‌ ಸಾಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಹಾಗೆಯೇ 6 ತಿಂಗಳಿನಿಂದ 17 ವರ್ಷದೊಳಗಿನವರನ್ನು ಲಸಿಕೆ (Vaccine) ನೀಡಲು ಕೊನೆಯಲ್ಲಿ ಪರಿಗಣಿಸಹುದು ಎಂದು ಸಮಿತಿ ಹೇಳಿದೆ.

ಕೋವಿಡ್ ಏರಿಕೆ: ತಮಿಳುನಾಡಿನ ಆಸ್ಪತ್ರೆಗಳಲ್ಲಿ ಮಾಸ್ಕ್‌ ಕಡ್ಡಾಯ

Follow Us:
Download App:
  • android
  • ios