ವೈದ್ಯಕೀಯ ವ್ಯವಸ್ಥೆಗಳು ಅದೆಷ್ಟು ಸುವ್ಯವಸ್ಥಿತವಾಗಿ ಸಜ್ಜುಗೊಂಡರೂ ಬಡವರು ಮಾತ್ರ ಸಮಸ್ಯೆಯಿಂದ ಹೈರಾಣಾಗುವುದು ತಪ್ಪಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿರುವುದು, ಆಂಬುಲೆನ್ಸ್ ಸಿಗದಿರುವುದು ಮೊದಲಾದ ಘಟನೆಗಳು ನಡೆಯುತ್ತದೆ. ಅದೇ ರೀತಿ ಮಧ್ಯಪ್ರದೇಶದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. 

ಜಬಲ್‌ಪುರ: ಬಡವರಿಗಾಗಿ ಸರ್ಕಾರ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಆದರೆ ಅದೆಷ್ಟೇ ಸೌಲಭ್ಯವಿದ್ದರೂ ಅದೆಷ್ಟೋ ಬಾರಿ ಸಂಕಷ್ಟದಲ್ಲಿರುವ ಬಡವರಿಗೆ ಈ ಸೌಲಭ್ಯ ಸಮರ್ಪಕವಾಗಿ ಸಿಗುವುದೇ ಇಲ್ಲ. ಬಡವರು ಕೇವಲ ಚಿಕಿತ್ಸೆಗಾಗಿ ಮಾತ್ರವಲ್ಲ, ಸತ್ತ ನಂತರ ಮೃತದೇಹವನ್ನು ಸಾಗಿಸಲು ಸಹ ಒದ್ದಾಡಬೇಕಾಗುತ್ತದೆ. ಅದೆಷ್ಟೋ ಬಾರಿ ಮನೆ ಮಂದಿ, ಕುಟುಂಬ ಸದಸ್ಯರ ಮೃತದೇಹವನ್ನು ಹೊತ್ತುಕೊಂಡೇ ಹೋದ ಹಲವು ಘಟನೆಗಳು ನಡೆದಿವೆ. ಕೆಲವೆಡೆ ತಳ್ಳುಗಾಡಿಯಲ್ಲಿ ಹಾಕಿಕೊಂಡು ಮೃತದೇಹವನ್ನು ಕೊಂಡೊಯ್ಯುತ್ತಾರೆ. ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ್ ಕೊಡಲು ನಿರಾಕರಿಸಿದ ಕಾರಣ ಜನರು ಅನಿವಾರ್ಯವಾಗಿ ಹೀಗೆ ಮಾಡಬೇಕಾಗುತ್ತದೆ. ಹಾಗೆಯೇ ಇಲ್ಲೊಂದೆಡೆ, ತಂದೆ ತನ್ನ ಮಗುವಿನ ಮೃತದೇಹವನ್ನು ಆಸ್ಪತ್ರೆಯ ಆಂಬ್ಯುಲೆನ್ಸ್ ಸಿಗದೆ ಚೀಲದಲ್ಲಿ ಹಾಕಿ ಕೊಂಡೊಯ್ದಿದ್ದಾರೆ.

Add Asianetnews Kannada as a Preferred SourcegooglePreferred

ಈ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಜನಾಂಗದ ಸುನೀಲ್ ಧುರ್ವೆ ಮತ್ತು ಪತ್ನಿ ಜುಮ್ನಿಬಾಯಿ ಜಬಲ್ ಪುರ್‌ನ ವೈದ್ಯಕೀಯ ಕಾಲೇಜಿನಲ್ಲಿ ಮಗು (Baby)ವೊಂದಕ್ಕೆ ಜನ್ಮ ನೀಡಿದ್ದಾರೆ. ನವಜಾತ ಮಗು ಅನಾರೋಗ್ಯಕ್ಕೆ ಒಳಗಾಗಿತ್ತು. ಹೆಚ್ಚಿನ ಚಿಕಿತ್ಸೆ (Treatment) ಕೊಟ್ಟರೂ ಮಗು ಬದುಕುಳಿಯಲ್ಲಿಲ್ಲ. ಆದರೆ ದಂಪತಿಗಳ ಬಳಿ ಮಗುವಿನ ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಲು ದುಡ್ಡಿರಲಿಲ್ಲ. ಹೀಗಾಗಿ ನತದೃಷ್ಟ ತಂದೆ (Father), ನವಜಾತ ಶಿಶುವನ್ನು ಚೀಲದಲ್ಲಿಟ್ಟುಕೊಂಡು 150 ಕಿ.ಮೀ ಪ್ರಯಾಣಿಸಿದರು.

ಸಮಯಪ್ರಜ್ಞೆ ಮೆರೆದು ಗರ್ಭಿಣಿಗೆ ದಾರಿ ಮಧ್ಯೆ ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿದ ಸಿಬ್ಬಂದಿಗಳು

ಒ೦ದು ಕಡೆ ಮಗುವನ್ನ ಉಳಿಸಿಕೊಳ್ಳಲಾಗಲಿಲ್ಲ ಅನ್ನೊ ನೋವು. ಇನ್ನೊಂದು ಕಡೆ ಮಗುವಿನ ಮೃತದೇಹ (Deadbody) ಸ್ಮಶಾನಕ್ಕೆ ತೆಗೆದುಕೊಂಡು ಹೋಗೋದಾದರೂ ಹೇಗೆ ಅಂತ ಗೊತ್ತಾಗದ ಈ ದಂಪತಿ (Couple) ಕಂಗಾಲಾಗಿದ್ದರು. ಕೊನೆಗೆ ಕೈಯಲ್ಲಿದ್ದ ಚೀಲದಲ್ಲೇ ಮಗುವಿನ ಶವ ಹಾಕಿಕೊಂಡು ಅಲ್ಲೇ ಇದ್ದ ಬಸ್‌ನಲ್ಲಿ ಕುಳಿತಿದ್ದಾರೆ.

ನವಜಾತ ಶಿಶುವಿನ ಮೃತದೇಹವನ್ನು ವೈದ್ಯಕೀಯ ಕಾಲೇಜಿನಿಂದ ಆಟೋ ರಿಕ್ಷಾದಲ್ಲಿ ಜಬಲ್‌ಪುರ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಬರಲಾಯಿತು. ಆದರೆ ಬಸ್ ಚಾಲಕ ಮೃತದೇಹದೊಂದಿಗೆ ಬಸ್ ಪ್ರವೇಶಿಸಲು ನಿರಾಕರಿಸಿದನು. ಕೊನೆಗೆ ಬಲವಂತದ ಮೇರೆಗೆ ಮೃತದೇಹವನ್ನು ಚೀಲದಲ್ಲಿ ಬಚ್ಚಿಟ್ಟು ಮತ್ತೊಂದು ಬಸ್ಸಿನಲ್ಲಿ 150 ಕಿಲೋಮೀಟರ್ ಪ್ರಯಾಣಿಸಿದ್ದಾರೆ. ಮತ್ತು ಹೇಗೋ ತಡರಾತ್ರಿ ದಿಂಡೋರಿಗೆ ತಲುಪಿದೆ. ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ತಮ್ಮ ಸಂಬಂಧಿಕರಿಗಾಗಿ ದಿಂಡೋರಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದರು, ಆದರೆ ದಿಂಡೂರಿನಲ್ಲೂ ಯಾರೂ ಸಹಾಯಕ್ಕೆ (Help) ಮುಂದಾಗಲಿಲ್ಲ.

ಆಕ್ಸಿಡೆಂಟ್ ಆಗಿ ಆಪರೇಷನ್ ಆದರೂ ಕುಗ್ಗದೆ, ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡೇ ಎಕ್ಸಾಂ ಬರೆದ ವಿದ್ಯಾರ್ಥಿನಿ

ಮಗು ಕಳೆದುಕೊಂಡ ನೋವು ತಾಯಿಗೆ ಬಿಕ್ಕಿ-ಬಿಕ್ಕಿ ಅಳುವಂತೆ ಮಾಡಿತ್ತು. ಆದರೆ ತಂದೆ ಮಾತ್ರ ಕಲ್ಲು ಹೃದಯ ಮಾಡಿಕೊಂಡು ಮಗುವಿನ ಮೃತದೇಹ ಇರುವ ಚೀಲ ಹಿಡಿದುಕೊಂಡೇ ಕೂತಿದ್ದ. ಕೊನೆಗೆ ಬಸ್‌ನಿಂದ ಇಳಿಯುವಾಗ ಇದು ಕೆಲವರ ಗಮನಕ್ಕೆ ಬಂದಿದೆ. ತಕ್ಷಣವೇ ಸ್ಥಳೀಯರು ಅಲ್ಲಿ ಜಮಾಯಿಸಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಈ ಹಿಂದೆ ಪಶ್ಚಿಮಬಂಗಾಳದಲ್ಲೂ ಇಂಥಹದ್ದೇ ಘಟನೆಯೊಂದು ನಡೆದಿತ್ತು. ಸಿಲಿಗುರಿಯ ಕಲಿಯಾಗಂಜ್‌ನಲ್ಲಿ ಈ ಘಟನೆ ವರದಿಯಾಗಿತ್ತು. ತನ್ನ ಐದು ತಿಂಗಳ ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು 200 ಕಿಲೋಮೀಟರ್‌ಗಳವರೆಗೆ ಪ್ರಯಾಣಿಸಿ ನಂತರ ಅಲ್ಲಿಂದ ಸಾರ್ವಜನಿಕ ಬಸ್‌ನಲ್ಲಿ ಪ್ರಯಾಣಿಸಿದ್ದೇನೆ ಎಂದು ವ್ಯಕ್ತಿ ಹೇಳಿಕೊಂಡಿದ್ದ.ಆಂಬ್ಯುಲೆನ್ಸ್ ಚಾಲಕ ಸಿಲಿಗುರಿಯಿಂದ ಕಲಿಯಾಗಂಜ್‌ಗೆ ಹೋಗಲು ನನ್ನ ಬಳಿ 8,000 ರೂ. ಕೇಳಿದ. ಅದನ್ನು ನನಗೆ ಕೊಡಲು ಸಾಧ್ಯವಾಗಲ್ಲಿಲ್ಲ ಎಂದು ವ್ಯಕ್ತಿ ತಿಳಿಸಿದ್ದಾನೆ. 

ಮಗುವಿನ ತಂದೆ (Father) ಆಶಿಮ್ ದೇಬ್‌ಶರ್ಮಾ, 'ನನ್ನ ಐದು ತಿಂಗಳ ಮಗು ಕಳೆದ ರಾತ್ರಿ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆರು ದಿನಗಳ ಕಾಲ ಚಿಕಿತ್ಸೆ (Treatment) ಪಡೆದ ನಂತರ ಸಾವನ್ನಪ್ಪಿದೆ. ಈ ಸಮಯದಲ್ಲಿ ನಾನು ಆಸ್ಪತ್ರೆಯಲ್ಲಿ (Hospital) 16,000 ರೂ. ಪಾವತಿಸಿದೆ. ಆದರೆ ನನ್ನ ಮಗುವನ್ನು (Children) ಕಲಿಯಗಂಜ್‌ಗೆ ಸಾಗಿಸಲು ಅಲ್ಲಿನ ಆಂಬ್ಯುಲೆನ್ಸ್‌ ಡ್ರೈವರ್‌ 8,000 ಕೇಳಿದ. ಆದರೆ ಅಷ್ಟು ರೂಪಾಯಿ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ ಎಂದು ವ್ಯಕ್ತಿ ತಿಳಿಸಿದ್ದಾನೆ.