ವಿರಾಟ್ ಕೊಹ್ಲಿ ನಾಯಕತ್ವವನ್ನು ಪ್ರಶ್ನಿಸಿದ ಗೌತಮ್ ಗಂಭೀರ್ ಮತ್ತೆ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.  ನೂತನ ಸಂಸದನ ಹೊಸ ವಿವಾದವೇನು? ಇಲ್ಲಿದೆ ವಿವರ. 

ಮುಂಬೈ(ಜು.09): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ವಿಶ್ವಕಪ್ ಟೂರ್ನಿಯ ವಿಶ್ಲೇಷಣೆ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ಪ್ರಶ್ನಿಸಿದ್ದಾರೆ. ಗಂಭೀರ್ ಹೇಳಿಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೂನಂ ಹಿಂದಿಕ್ಕಿದ ಶರ್ಲಿನ್, ವಿಶ್ವಕಪ್ ಗೆಲುವಿಗೆ ಎದೆಯಾಳದ ಹಾರೈಕೆ!

ಖಾಸಹಿ ವಾಹಿನಿಯ ವಿಶ್ವಕಪ್ ಚರ್ಚೆಯಲ್ಲಿ ಪಾಲ್ಗೊಂಡ ಗಂಭೀರ್, ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಕೊಹ್ಲಿ ಯಶಸ್ಸು ಸಾಧಿಸಲು ಕಾರಣ, ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ. ಬ್ಯಾಟ್ಸ್‌ಮನ್ ಆಗಿ ಕೊಹ್ಲಿ ವಿಶ್ವಕಾಪ್ ಟಾಪ್ 4 ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ನಾಯಕತ್ವದಲ್ಲಿ ಧೋನಿ ಹಾಗೂ ರೋಹಿತ್ ಶರ್ಮಾ, ಕೊಹ್ಲಿಗಿಂತ ಮುಂದಿದ್ದಾರೆ ಎಂದು ಹೇಳಿದರು.

Scroll to load tweet…

ಇದನ್ನೂ ಓದಿ: ಬುಮ್ರಾ ಬೌಲಿಂಗ್ ಶೈಲಿ ಅನುಕರಿಸಿದ ವಿರಾಟ್ ಕೊಹ್ಲಿ!

ಕೊಹ್ಲಿ ಉತ್ತಮ ನಾಯಕನಾಗಿದ್ದರೆ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆಪ್ರಸಸ್ತಿ ಗೆಲ್ಲಿಸಿಕೊಡಬೇಕಿತ್ತು. ಆದರೆ ಕೊಹ್ಲಿಗೆ ಸಾಧ್ಯವಾಗಿಲ್ಲ ಎಂದು ಗಂಭೀರ್ ಚರ್ಚೆಯಲ್ಲಿ ಹೇಳಿದ್ದಾರೆ. ಗಂಭೀರ್ ಹೇಳಿಕೆಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.


Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…