ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯು ಆಗಸ್ಟ್ 5 ರಿಂದ 7 ರವರೆಗೆ (ಶುಕ್ರವಾರದಿಂದ ಭಾನುವಾರದವರೆಗೆ) ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದೆ.

ಬೆಂಗಳೂರು (ಆ.04): ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯು ಆಗಸ್ಟ್ 5 ರಿಂದ 7 ರವರೆಗೆ (ಶುಕ್ರವಾರದಿಂದ ಭಾನುವಾರದವರೆಗೆ) ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿದ್ದು, ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಕೈಮಗ್ಗ ಮೇಳವಾಗಿದೆ. 

Add Asianetnews Kannada as a Preferred SourcegooglePreferred

ಕೋವಿಡ್‌ನಲ್ಲಿ ನೇಕಾರರ ಜೀವನ‌ ತತ್ತರಿಸಿ ಹೋಗಿದ್ದ ಕಾರಣ ನೇಕಾರರನ್ನ ಬೆಂಬಲಿಸಿ‌ ರಾಜ್ಯ ಕೈಮಗ್ಗ-ಜವಳಿ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿತ್ತು. ಈಗ ಕರ್ನಾಟಕ ಸರ್ಕಾರ ಕೋವಿಡ್ ನಂತರ ರಾಜ್ಯದಲ್ಲಿ ಪ್ರಪ್ರಥಮವಾಗಿ ಆಯೋಜನೆ ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ.5ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. 

Udupi: ಕುಂದಾಪುರ ಕಾಲೇಜ್ ಕ್ಯಾಂಪಸ್‌ನಲ್ಲಿ ಸ್ಪೆಷಲ್ ಮಾರ್ಕೆಟ್

8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ನೇಕಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.7ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಕೈಮಗ್ಗ ಮತ್ತು ಜವಳಿ, ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಲಿದ್ದಾರೆ. ಮೇಳದಲ್ಲಿ 26 ಸ್ಟಾಲ್‌ಗಳಿರಲಿದ್ದು, ಕೈಮಗ್ಗದಲ್ಲಿ ತಯಾರು ಮಾಡುವ ಕರ್ನಾಟಕದ ವಿವಿಧ ಜಿಲ್ಲೆಗಳ ವಿಶಿಷ್ಟ ಕೈಮಗ್ಗ ಉತ್ಪನ್ನಗಳಾದ ರೇಷ್ಮೆ ಸೀರೆಗಳು, ಹತ್ತಿಯ ವಸ್ತ್ರಗಳು, ರಗ್ಗು, ಕಂಬಳಿ, ಬೆಡ್ ಶೀಟ್, ಕುರ್ತಾ ಟಾಪ್, ಶರ್ಟ್,ಲುಂಗಿ ಸೇರಿದಂತೆ ಹಲವು ಬಟ್ಟೆಗಳು ಪ್ರದರ್ಶನದಲ್ಲಿರಲಿವೆ ಹಾಗೂ ರಿಯಾಯಿತಿ ದರದಲ್ಲಿ ಲಭ್ಯ.

ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವು ಬೆಳಗ್ಗೆ 11ರಿಂದ ಸಂಜೆ 7.30ರವರೆಗೆ ನಡೆಯಲಿದೆ.