1984ರ ಸಿಖ್ ವಿರೋಧಿ ದಂಗೆಯಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ. ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ನವದೆಹಲಿ (ಫೆ.13): 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅವರಿಗೆ ಗರಿಷ್ಠ ಮರಣದಂಡನೆ ಅಥವಾ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ವ್ಯಾಪಕ ನರಮೇಧ ನಡೆಸಲಾಗಿತ್ತು. ಈ ದಂಗೆಯಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್‌ದೀಪ್ ಸಿಂಗ್ ಅವರನ್ನು 1984ರ ನ.01ರಂದು ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ವಿರುದ್ಧ ಹೈಕೋರ್ಟ್ ಮೊರೆ ಹೋದ ನಿವೃತ್ತ ಜಡ್ಜ್!...

ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಆರೋಪಿಯಾಗಿದ್ದರು. ಅವರ ವಿರುದ್ಧ ಹಲವು ಪ್ರಕರಣ ದಾಖಲಾಗಿತ್ತು. ಈಗಾಗಲೇ ಎರಡು ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿದ್ದು, ಇನ್ನೆರೆಡು ಪ್ರಕರಣಗಳ ತೀರ್ಪು ಹೊರಬರಬೇಕಿದೆ. ಸಜ್ಜನ್‌ ಪ್ರಸ್ತುತ ದೆಹಲಿ ಕಂಟೋನ್ಮೆಂಟ್‌ನಲ್ಲಿ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.