ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ: ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ಅನ್ನದಾತರು ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶವೊಂದು ಹೇಳಿದೆ.

Add Asianetnews Kannada as a Preferred SourcegooglePreferred

ವರದಿ ಅನ್ವಯ 2020ರ ಜನವರಿಯಿಂದ 2025ರ ಜನವರಿ ಅವಧಿಯಲ್ಲಿ ಅಮರಾವತಿಯಲ್ಲಿ 5,395, ಅಕೋಲಾದಲ್ಲಿ 3,123, ಬುಲ್ಡಾನಾದಲ್ಲಿ 4,442 , ವಾಶಿಮ್‌ನಲ್ಲಿ 2,048, ಯವತ್ಮಾಲ್‌ನಲ್ಲಿ 6,211 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷದ ಜನವರಿಯಲ್ಲಿಯೇ ಈ ಐದು ಜಿಲ್ಲೆಗಳಲ್ಲಿ ಒಟ್ಟಾರೆ 80 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಈ ಪ್ರಕರಣಗಳಲ್ಲಿ ಒಟ್ಟು 9970 ಪ್ರಕರಣಗಳು ಸರ್ಕಾರದಿಂದ ಪರಿಹಾರಕ್ಕೆ ಅರ್ಹವಾಗಿದ್ದು, 9740 ಪ್ರಕರಣಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. 10963 ಆತ್ಮಹತ್ಯೆ ಪ್ರಕರಣಗಳು ಪರಿಹಾರಕ್ಕೆ ಅನರ್ಹ. 319 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಭೋವಿ ನಿಗಮ ಹಗರಣಕೋರರಿಗೆ ಶಾಕ್, ಇಡಿ ದಾಳಿ, ದಾಖಲೆಗಳು ವಶಕ್ಕೆ!