ಸಂಭಲ್‌ನ ಭಸ್ಮ ಶಂಕರ ದೇವಾಲಯದ ಬಾವಿಯಲ್ಲಿ ಹಾನಿಗೊಳಗಾದ ಮೂರು ವಿಗ್ರಹಗಳು ಪತ್ತೆಯಾಗಿವೆ. 1978ರಲ್ಲಿ ಮುಚ್ಚಲಾಗಿದ್ದ ಈ ದೇವಾಲಯವನ್ನು ಇತ್ತೀಚೆಗೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಲಾಗಿತ್ತು. ಪಾರ್ವತಿ, ಗಣೇಶ ಮತ್ತು ಲಕ್ಷ್ಮೀ ದೇವಿಯ ವಿಗ್ರಹಗಳು ಬಾವಿಯಲ್ಲಿ ಕಂಡು ಬಂದಿವೆ.

ಸಂಭಲ್‌ (ಉ.ಪ್ರ.): ಕಳೆದ ವಾರವಷ್ಟೇ ಸಂಭಲ್‌ನ ವಿವಾದಿತ ಶಾಹಿ ಈದ್ಗಾ ಮಸೀದಿ ಸನಿಹದಲ್ಲಿ ಒತ್ತುವರಿ ತೆರವು ಕಾರ್ಯದ ವೇಳೆ ಪತ್ತೆ ಆಗಿದ್ದ ಸಂಭಲ್‌ನ ಭಸ್ಮ ಶಂಕರ ದೇವಾಲಯದ ಬಾವಿಯಲ್ಲಿ ಹಾನಿಯಾದ 3 ವಿಗ್ರಹಗಳು ಸೋಮವಾರ ಕಂಡುಬಂದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದೂ-ಮುಸ್ಲಿಂ ಗಲಭೆ ಕಾರಣ 1978ರಲ್ಲಿ ಮುಚ್ಚಲಾಗಿದ್ದ ಈ ದೇವಸ್ಥಾನ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಈ ಪತ್ತೆಯಾಗಿದ್ದು, ಡಿ.13ರಂದು ಅದನ್ನು ತೆರೆಯಲಾಗಿತ್ತು ಹಾಗೂ ಪೂಜೆಯನ್ನೂ ಶುರು ಮಾಡಲಾಗಿತ್ತು. ಹನುಮಂತ ಹಾಗೂ ಶಿವಲಿಂಗದ ವಿಕ್ರಹಗಳಿರುವ ಈ ದೇಗುಲದ ಬಳಿಯೇ ಬಾವಿಯೊಂದಿದ್ದು, ಅದನ್ನು 10ರಿಂ 12 ಅಡಿ ಆಳದ ವರೆಗೆ ಅಗೆದಾಗ ತಲೆ ಮುರಿದಿದ್ದ ಪಾರ್ವತಿಯ ಮೂರ್ತಿ ಲಭಿಸಿದೆ. ಅಂತೆಯೇ ಗಣೇಶ ಹಾಗೂ ಲಕ್ಷ್ಮೀ ದೇವಿಯ ವಿಗ್ರಹಗಳೂ ದೊರಕಿವೆ. ಈ ಕುರಿತು ಮಾತನಾಡಿರುವ ಸಂಭಲ್‌ ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ, ‘ಈ ವಿಗ್ರಹಗಳು ಬಾವಿ ಒಳಗೆ ಹೇಗೆ ಹೋದವು ಎಂಬುದು ತಿಳಿದಿಲ್ಲ. ತನಿಖೆಯಿಂದ ಇದು ಬಹಿರಂಗವಾಗಲಿದೆ’ ಎಂದರು.

ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಕೇಳಿದಾಗ, ‘ಮೊದಲು ಅದರ ಪ್ರಾಚೀನತೆಯನ್ನು ಧೃಡಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು. ದೇವಾಲಯ ಹಾಗೂ ಬಾವಿಯ ಕಾರ್ಬನ್‌ ಡೇಟಿಂಗ್‌ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಜಿಲ್ಲಾಧಿಕಾರ ಮನವಿ ಮಾಡಿದೆ.