userpic
user icon
0 Min read

ಮುರ್ಷಿದಾಬಾದ್ ಹಿಂಸಾಚಾರ, ಕೇಂದ್ರ ಪಡೆ ನಿಯೋಜನೆಗೆ ಹೈಕೋರ್ಟ್ ಆದೇಶ!

3 Killed In Bengal Waqf Protests Court Orders Deployment Of Central Forces rav

Synopsis

ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಮೂವರು ಸಾವನ್ನಪ್ಪಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ಹಿಂಸಾಚಾರ ನಿಯಂತ್ರಿಸಲು ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.

Waqf act: ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾನೂನು ವಿರುದ್ಧ ಪ್ರತಿಭಟನೆ ಹಿಂಸಾತ್ಮಕವಾಗಿ ತಿರುಗಿ ಮೂವರು ಸಾವು,  ಕೋಲ್ಕತ್ತಾ ಹೈಕೋರ್ಟ್ ಕೇಂದ್ರ ಪಡೆ ನಿಯೋಜನೆಗೆ ಆದೇಶ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಹೊಸ ವಕ್ಫ್ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆ ಶನಿವಾರ (ಏಪ್ರಿಲ್ 12, 2025) ಹಿಂಸಾತ್ಮಕವಾಗಿ ತಿರುಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿ, ರೈಲು ಮತ್ತು ರಸ್ತೆ ಸಂಚಾರವನ್ನು ತಡೆದಿದ್ದಾರೆ.
 
ಈ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕ ಶುಭೇಂದು ಅಧಿಕಾರಿ ಅವರು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ, ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳ ನಿಯೋಜನೆಗೆ ಒತ್ತಾಯಿಸಿದ್ದಾರೆ.  ಕೋಲ್ಕತ್ತಾ ಹೈಕೋರ್ಟ್‌ನ ವಿಶೇಷ ಪೀಠವು ಈ ಬೇಡಿಕೆಯನ್ನು ಅಂಗೀಕರಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. 'ಗಂಭೀರ ಆರೋಪಗಳು ಬೆಳಕಿಗೆ ಬಂದಾಗ ನ್ಯಾಯಾಲಯವು ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ. ಅಗತ್ಯವಿದ್ದರೆ, ಕೇಂದ್ರ ಪಡೆಗಳನ್ನು ಇತರೆಡೆಯೂ ನಿಯೋಜಿಸಬಹುದು' ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: Waqf act: ಮಮತಾ ಬ್ಯಾನರ್ಜಿ ಹೇಳಿಕೆಗೆ ಮಿಥುನ್ ಚಕ್ರವರ್ತಿ ತಿರುಗೇಟು!

ಹಿಂಸಾಚಾರದ ವಿವರ: ಶಂಶೇರ್‌ಗಂಜ್‌ನ ಜಾಫ್ರಾಬಾದ್‌ನಲ್ಲಿ ತಂದೆ-ಮಗನ ಶವಗಳು ಮನೆಯೊಳಗೆ ಪತ್ತೆಯಾಗಿದ್ದು, ಚಾಕು ಇರಿತದ ಗಾಯಗಳ ಗುರುತುಗಳಿವೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಇನ್ನೊಂದು ಘಟನೆಯಲ್ಲಿ, ಧುಲಿಯನ್‌ನಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆಗೈಯಲಾಗಿದೆ. 
ಬಿಎಸ್‌ಎಫ್ ಪಡೆಗಳು ಸ್ಥಳಕ್ಕೆ ತಲುಪಿದ್ದರೂ, ಜಿಲ್ಲಾಧಿಕಾರಿಗಳು ಹಿಂಸಾಚಾರ ನಿಗ್ರಹಕ್ಕೆ ಅವಕಾಶ ನೀಡಿಲ್ಲ ಎಂದು ಶುಭೇಂದು ಅಧಿಕಾರಿ ಆರೋಪಿಸಿದ್ದಾರೆ.

ಇದನ್ನೂ ಓದಿ: 'ನನ್ನನ್ನು ನಂಬಿ, ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತರೋಲ್ಲ': ಮಮತಾ ಬ್ಯಾನರ್ಜಿ ಸ್ಫೋಟಕ ಹೇಳಿಕೆ!
 

ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ಕೇಂದ್ರ ಸಚಿವ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್, ಮಮತಾ ಬ್ಯಾನರ್ಜಿ ಸರ್ಕಾರವು ಶಂಶೇರ್‌ಗಂಜ್, ಸುತಿ, ಮತ್ತು ಜಂಗಿಪುರದಲ್ಲಿ ಹಿಂದೂಗಳ ಮೇಲಿನ ದಾಳಿಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ. 'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅಲ್ಪಸಂಖ್ಯಾತರ ಕೆಲವು ವರ್ಗಗಳಿಂದ ನಡೆಯುವ ವಿಧ್ವಂಸಕ ಕೃತ್ಯಗಳನ್ನು ಐದು ನಿಮಿಷದಲ್ಲಿ ಹತ್ತಿಕ್ಕಲಾಗುವುದು' ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.

Download App

Latest Videos