ವಿವಾದಿತ ಜಲ್ಲಿಕಟ್ಟು ಆಯೋಜನೆ ಮಾಡಿದ್ದರಿಂದ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡರುವ ಘಟನೆ ಸಂಭವಿಸಿದೆ.
ಚೆನ್ನೈ, (ಜ.10): ಜಲ್ಲಿಕಟ್ಟು ನೋಡುವ ವೇಳೆ ಮನೆ ಗೋಡೆ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಮೇಪನಪಲ್ಲಿ ಬಳಿ ನಡೆದಿದೆ.
ಘಟನೆಯಲ್ಲಿ 2 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಮೀಪದ ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಗ್ಗಿ ಸಂಕ್ರಾಂತಿ; ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಭ್ರಮವೋ ಸಂಭ್ರಮ!
ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಈ ಜಲ್ಲಿಕಟ್ಟು ಸ್ಪರ್ಧೆ ನೋಡಲು ಜನ ಸಮೂಹ ಸೇರಿತ್ತು. ಕೆಲವರು ಮನೆಯ ಟೆರೇಸ್ ಮೇಲೆ ನಿಂತು ವೀಕ್ಷಣೆ ಮಾಡುತ್ತಿದ್ರು.
ಮನೆ ಮೇಲೆ ಭಾರಿ ಜನಸಮೂಹ ಸೇರುತ್ತಿದ್ದಂತೆ ಇದ್ದಕ್ಕಿದ್ದಂತೆ ಗೋಡೆ ಕುಸಿದಿದೆ. ಇನ್ನು ಘಟನಾ ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 10, 2021, 9:16 PM IST