ಸತತ 18 ಗಂಟೆಗಳ ಗನ್ಫೈಟ್; ಮೂವರ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ಸತತ 18 ಗಂಟೆಗಳ ಗುಂಡಿನ ಚಕಮಕಿ, ಮೂವರು ಉಗ್ರರನ್ನು ಹೊಡೆದುರಳಿಸಿದ ಸೇನೆ ಭಾರಿ ಅನಾಹುತ ತಪ್ಪಿಸೋ ಮೂಲಕ ಜಮ್ಮ ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತಿ ಮಾಡಿದ್ದಾರೆ.
ಶ್ರೀನಗರ(ಡಿ.30): ಜಮ್ಮ ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಜಮ್ಮ ಮತ್ತು ಕಾಶ್ಮೀರ ಪೊಲೀಸರು ಇತ್ತೀಚೆಗೆ ಉಗ್ರರ ಅಡಗುತಾಣಗಳಿಗೆ ನುಗ್ಗಿ ಭೇಟೆಯಾಡುತ್ತಿದ್ದಾರೆ. ಇದೀಗ ರಾತ್ರಿಯಿಡಿ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೆಡೆಮುರಿ ಕಟ್ಟುವಲ್ಲಿ ಸೇನೆ ಯಶಸ್ವಿಯಾಗಿದೆ.
ಶೋಪಿಯಾನ್ ಎನ್ಕೌಂಟರ್; ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ!.
ಕಳೆದ ರಾತ್ರಿ(ಡಿ.29) ಕಾಶ್ಮೀರ ಪೊಲೀಸರು ಉಗ್ರರ ಜೊತೆಗೆ ಗುಂಡಿನ ಚಕಮಕಿ ನಡೆಸಿದ್ದಾರೆ. ತಕ್ಷಣವೇ ಭಾರತೀಯ ಸೇನೆ ಕೂಡ ಕಾಶ್ಮೀರ ಪೊಲೀಸರ ಜೊತೆ ಸೇರಿ ಗುಂಡಿನ ದಾಳಿ ನಡೆಸಿದೆ. ಅಡಗುತಾಣದಲ್ಲಿ ತಪ್ಪಿಸಿಕೊಂಡ ಉಗ್ರರಿಗಾಗಿ ಕಾರ್ಯಚರಣ ನಡೆಸಿದ ಸೇನೆ ಹಾಗೂ ಪೊಲೀಸ್ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತದ ತಿರುಗೇಟಿಗೆ ಐವರ ಸಾವು !.
ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.ಶ್ರೀಗನರ ಬಾರಮುಲ್ಲಾ ಹೆದ್ದಾರಿಯ ಲಾಯಪೋರ ವಲಯದಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಸಂಜೆ 5 ಗಂಟೆಗೆ ಗುಂಡಿನ ಚಕಮಕಿ ಆರಂಭಗೊಂಡಿತ್ತು. ಉಗ್ರರು ಮನೆಯಲ್ಲಿ ತಂಗಿರುವ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ. ಉಗ್ರರು ಕೂಡ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಜಂಟಿ ಕಾರ್ಯಚರಣೆಯಲ್ಲಿ ಯಶಸ್ಸು ಸಿಕ್ಕಿದೆ ಎಂದು ಕಾಶ್ಮೀರ ಪೊಲೀಸ್ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.