ರೈಲ್ವೆ ಕ್ರಾಸಿಂಗ್‌ನಲ್ಲಿ ಗೇಟ್ ಮುಚ್ಚದೆ ಅವಘಡ ಸಂಭವಿಸಿದೆ. ವಾಹನಕ್ಕೆ ರೈಲು ಡಿಕ್ಕಿಯಾಗಿ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. 

ಶಹಜಹಾನ್‌ಪುರ (ಏ.23): ಮಾನವಸಹಿತವಾದ ರೈಲ್ವೆ ಕ್ರಾಸಿಂಗ್‌ನಲ್ಲಿ ಹಲವು ವಾಹನಗಳಿಗೆ ರೈಲೊಂದು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ ಹಾಗೂ ಓರ್ವ ಗಾಯಗೊಂಡ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ರೈಲ್ವೆ ಕ್ರಾಸಿಂಗ್‌ ಗೇಟ್‌ಗಳನ್ನು ಮುಚ್ಚದ ಕಾರಣಕ್ಕೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌ-ಚಂಡೀಗಢ ಸೂಪರ್‌ಫಾಸ್ಟ್‌ ರೈಲು ಗುರುವಾರ ಬೆಳಗ್ಗೆ ಮೀರನ್‌ಪುರ ಕಟ್ರಾ ರೈಲು ನಿಲ್ದಾಣದಿಂದ ಹೊರಟ ಬಳಿಕ ರೈಲ್ವೆ ಗೇಟ್‌ ಮುಚ್ಚಿರಲಿಲ್ಲ. 

ರೈಲು ಹಳಿಗೆ ಬಿದ್ದ ಮಗು ರಕ್ಷಿಸಿದ ರೈಲ್ವೇ ಸಿಬ್ಬಂದಿ: ಮೈ ಜುಮ್ಮೆನಿಸುವ ವಿಡಿಯೋ ವೈರಲ್! .

ಆಗ 2 ಟ್ರಕ್‌ಗಳು, ಒಂದು ಕಾರು ಮತ್ತು ಒಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ರೈಲು ಕೂಡ ಹಳಿ ತಪ್ಪಿದೆ. ಇದರಿಂದಾಗಿ 6 ಗಂಟೆಗಳ ಕಾಲ ಈ ಭಾಗದಲ್ಲಿ ರೈಲ್ವೆ ಸಂಚಾರ ಅಸ್ತವ್ಯಸ್ತವಾಗಿದೆ.