ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. 

ನಾರಾಯಣಪುರ(ಜೂ.16): ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ 8 ಮಂದಿ ನಕ್ಸಲರು ಮತ್ತು ವಿಶೇಷ ಕಾರ್ಯಪಡೆಯ(ಎಸ್‌ಟಿಎಫ್‌)ಯ ಓರ್ವ ಸಿಬ್ಬಂದಿ ಹತರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಎಸ್‌ಟಿಎಫ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಿಂದ ನಕ್ಸಲರಿಗೆ ಸೇರಿದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢದಲ್ಲಿ 12 ನಕ್ಸಲರ ಹತ್ಯೆ: ಐದೇ ತಿಂಗಳಲ್ಲಿ 100 ಬಲಿ..!

ಈ ವರ್ಷದಲ್ಲಿ ರಾಜ್ಯದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಭಾರೀ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ 131 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.