ಸುದೀರ್ಘ ವಿಮಾನ ಪ್ರಯಾಣದ ವೇಳೆ ತಿನ್ನಲು ಕುಡಿಯಲು ಏನು ಕೊಟ್ಟರೂ ಬೇಡ ಬೇಡ ಎಂದು ಹೇಳಿ ತಿರಸ್ಕರಿಸುತ್ತಿದ್ದ ವಿಮಾನ ಪ್ರಯಾಣಿಕನೋರ್ವನನ್ನು ಏರ್‌ಪೋರ್ಟ್‌ ಪೊಲೀಸರು ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಬಂಧಿಸಿದ್ದಾರೆ. 

ಸುದೀರ್ಘ ವಿಮಾನ ಪ್ರಯಾಣದ ವೇಳೆ ತಿನ್ನಲು ಕುಡಿಯಲು ಏನು ಕೊಟ್ಟರೂ ಬೇಡ ಬೇಡ ಎಂದು ಹೇಳಿ ತಿರಸ್ಕರಿಸುತ್ತಿದ್ದ ವಿಮಾನ ಪ್ರಯಾಣಿಕನೋರ್ವನನ್ನು ಏರ್‌ಪೋರ್ಟ್‌ ಪೊಲೀಸರು ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಬಂಧಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಯ್ಯೋ ಇದೇನಪ್ಪ ಬೇಡ ಅನಿಸಿದ್ದನ್ನ ಬೇಡ ಅಂತ ಹೇಳಬಾರದ ಇವ್ರು ಕೊಟ್ಟಿದ್ದೆಲ್ಲವನ್ನ ತಿನ್ನಬೇಕಾ ಜಸ್ಟ್ ಬೇಡ ಅಂತ ಹೇಳಿದ್ದಕ್ಕೆ ಅರೆಸ್ಟ್ ಮಾಡ್ಬಿಡೋದಾ ಅಂತ ಯೋಚನೆ ಬರ್ಬಹುದು. ಆದರೆ ಈತ ಆಹಾರ ಬೇಡ ಅಂದಿದ್ದಕ್ಕೂ ಕಾರಣ ಇದೆ. ಬಂಧಿಸಿದ್ದಕ್ಕೂ ಕಾರಣ ಇದೆ ಅದೇನೂ ಅಂತ ನಾ ಮುಂದೆ ಓದಿ...

Add Asianetnews Kannada as a Preferred SourcegooglePreferred

ಸೌದಿ ಅರೇಬಿಯಾದ ಜೆಡ್ಡಾದಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾದ ಎಐ992 ಪ್ರಯಾಣಿಕನೋರ್ವ ಈ ಸುದೀರ್ಘ ಪ್ರಯಾಣದಲ್ಲಿ ಎಲ್ಲಿಯೂ ಒಂದೇ ಒಂದು ಗುಟುಕು ನೀರು ಸೇರಿದಂತೆ ಏನನ್ನೂ ಕುಡಿದಿರಲಿಲ್ಲ ಸೇವಿಸಿಯೂ ಇರಲಿಲ್ಲ, ವಿಮಾನದಲ್ಲಿರುವ ಸಿಬ್ಬಂದಿ ಹಲವು ಸಲ ಈತನಿಗೆ ಆಹಾರ ಆಫರ್‌ ಮಾಡಿದ್ದಾರೆ, ನೀರು ಕಾಫಿ, ಟೀ, ಪಾನಿಯಗಳನ್ನು ಬೇಕಾ ಎಂದು ಕೇಳಿದ್ದಾರೆ. ಆದರೆ ಆತ ಒಮ್ಮೆಯೂ ಏನನ್ನೂ ಕುಡಿದಿರಲಿಲ್ಲ, ಈ ಹಿನ್ನೆಲೆಯಲ್ಲಿ ವಿಮಾನ ಸಿಬ್ಬಂದಿಗೆ ಈತನ ನಡವಳಿಕೆ ಬಗ್ಗೆ ಅನುಮಾನ ಬಂದಿದ್ದು, ಅವರು ಸೀದಾ ಪೈಲಟ್‌ ಬಳಿ ವಿಚಾರ ತಿಳಿಸಿದ್ದಾರೆ. ಅಲ್ಲದೇ ಆತನ ಮೇಲೆ ಒಂದು ಕಣ್ಣಿಟ್ಟಿದ್ದಾರೆ. 

ಯೂಟ್ಯೂಬರ್ ಶಬೀರ್ 2 ತಿಂಗಳಲ್ಲಿ ಕಳ್ಳಸಾಗಣೆ ಮಾಡಿದ್ದು ಒಂದಲ್ಲ ಎರಡಲ್ಲ ಬರೋಬ್ಬರಿ 267 ಕೆಜಿ ಬಂಗಾರ

ಇದಾದ ನಂತರ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಈ ವೇಳೆ ಭದ್ರತಾ ಸಿಬ್ಬಂದಿ ತುಂಬಾ ಸೂಕ್ಷ್ಮವಾಗಿ ಗಮನಿಸಿದ್ದಾರೆ. ಈ ವೇಳೆ ಆತ ಗ್ರೀನ್ ಕಸ್ಟಮ್ಸ್ ಕ್ಲಿಯರೆನ್ಸ್ ಚಾನೆಲ್‌ ಮೂಲಕ ಪಾಸಾಗಲು ಯತ್ನಿಸಿದ್ದಾನೆ. ಆದರೆ ಅಲ್ಲಿ ಅವನನ್ನು ತಡೆದ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಆತನನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಹಲವು ಪ್ರಶ್ನೆಗಳನ್ನು ಕೇಳಿ ವಿಚಾರಿಸಿದಾಗ ಆತ ತಾನು ತನ್ನ ಗುದನಾಳದಲ್ಲಿ ಚಿನ್ನ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಪಡಿಸಿದ್ದಾನೆ. ನಾಲ್ಕು ಮೊಟ್ಟೆಯಕಾರಾದ ಕ್ಯಾಪ್ಸುಲ್‌ನಲ್ಲಿ ತುಂಬಿದ್ದ, ಸುಮಾರು 69 ಲಕ್ಷ ಮೌಲ್ಯದ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಈತ ಗುದನಾಳದಲ್ಲಿಟ್ಟು ಸ್ಮಗ್ಲಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. 

ಈತನಿಂದ ಒಟ್ಟು 1096.76 ಗ್ರಾಂ ಅಂದರೆ ಸುಮಾರು ಒಂದು ಕೇಜಿಯಷ್ಟು ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್‌ ಜಂಟಿ ಕಮೀಷನರ್ ಮೋನಿಕಾ ಯಾದವ್ ಹೇಳಿದ್ದಾರೆ. ಕಸ್ಟಮ್ಸ್ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಈತನನ್ನು ಬಂಧಿಸಲಾಗಿದೆ. ಈತ ಜೆಡ್ಡಾದಿಂದ ಚಿನ್ನ ಕಳ್ಳಸಾಗಣೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. 

ಗುದನಾಳದಲ್ಲಿ 1 ಕೆಜಿ ಚಿನ್ನ ಕಳ್ಳಸಾಗಾಣೆ; ಏರ್‌ ಇಂಡಿಯಾ ಗಗನಸಖಿ ಸೆರೆ!

ಇತ್ತೀಚೆಗೆ ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆ ವಿಮಾನದಲ್ಲಿ ಕೆಲಸ ಮಾಡುವ ಕ್ಯಾಬಿನ್ ಸಿಬ್ಬಂದಿಗೆ ಸುದೀರ್ಘ ವಿಮಾನ ಪ್ರಯಾಣದ ವೇಳೆ ತಿಂಡಿ ನೀರು ನಿರಾಕರಿಸುವ ಪ್ರಯಾಣಿಕರ ಮೇಲೆ ಗಮನ ಇಡುವಂತೆ ಸೂಚನೆ ನೀಡಲಾಗಿದೆ. ಕಳೆದ ತಿಂಗಳಷ್ಟೇ ಚೆನ್ನೈ ವಿಮಾನ ನಿಲ್ದಾಣದಲ್ಲಿ ಗಿಫ್ಟ್ ಶಾಪ್ ಇರಿಸಿಕೊಂಡು ಇದೇ ರೀತಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಕಿಂಗ್ ಪಿನ್ ಯೂಟ್ಯೂಬರ್ ಶಬೀರ್ ಅಲಿಯನ್ನು ಪೊಲೀಸರು ಬಂಧಿಸಿದ್ದರು. ಈತ ಹಾಗೂ ಈತನ ತಂಡ ಕೇವಲ 2 ತಿಂಗಳಲ್ಲಿ ಇದೇ ರೀತಿ ಒಟ್ಟು167 ಕೋಟಿ ಮೊತ್ತದ 267 ಕೇಜಿ ಯಷ್ಟು ಚಿನ್ನವನ್ನು ಸ್ಮಗ್ಲಿಂಗ್ ಮಾಡಿದ್ದರು ಎಂಬುದು ಕಸ್ಟಮ್ಸ್ ಅಧಿಕಾರಿಗಳ ವಿಚಾರಣೆ ವೇಳೆ ತಿಳಿದು ಬಂದಿದೆ.