ಮಹಾರಾಷ್ಟ್ರ ಮೂಲದ 19 ವರ್ಷದ ಯುವ ವೇದ ಪಂಡಿತ ದೇವವ್ರತ ರೇಖೆ, ವಾರಾಣಸಿಯಲ್ಲಿ ಅತ್ಯಂತ ಕಠಿಣವಾದ ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ 50 ದಿನಗಳಲ್ಲಿ ದೋಷರಹಿತವಾಗಿ ಪೂರ್ಣಗೊಳಿಸಿದ್ದಾರೆ. 200 ವರ್ಷಗಳ ನಂತರ ನಡೆದ ಈ ಐತಿಹಾಸಿಕ ಸಾಧನೆ ಶೃಂಗೇರಿ ಮಠ ಸಹಕಾರ, ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ವಾರಾಣಸಿ (ಡಿ.3): ಅತ್ಯಂತ ಕಠಿಣ ಎಂದು ಹೇಳಲಾಗುವ, ಶುಕ್ಲ ಯಜುರ್ವೇದದ ಮಧ್ಯಮಂಡಿನಿ ಶಾಖೆಯ 2000 ಮಂತ್ರಗಳ ದಂಡಕ್ರಮ ಪಾರಾಯಣ ಪಠಣವನ್ನು 50 ದಿನಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಮಹಾರಾಷ್ಟ್ರ ಮೂಲದ ಯುವ ವೇದ ಪಂಡಿತ ವೇದಮೂರ್ತಿ ದೇವವ್ರತ ರೇಖೆ ಪೂರ್ಣಗೊಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಶೃಂಗೇರಿ ಮಠ ಸಾಥ್‌

19 ವರ್ಷದ ರೇಖೆ, ವಾರಾಣಸಿಯಲ್ಲಿ ದೇವವ್ರತ ಅವರು, ವೇದ ಶ್ಲೋಕಗಳು ಮತ್ತು ಪವಿತ್ರ ಶ್ಲೋಕಗಳನ್ನು ಒಂದೇ ಒಂದು ತಪ್ಪಿಲ್ಲದೆ ಪಠಿಸಿದ್ದಾರೆ. ಈ ರೀತಿಯ ಯಶಸ್ವಿ ದಂಡಕ್ರಮ ಪಾರಾಯಣ ಪಠಣ ಇತಿಹಾಸದಲ್ಲೇ 3ನೇ ಸಲ. ಅಲ್ಲದೆ, 200 ವರ್ಷ ಬಳಿಕ ಈ ಸಾಧನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅವರ ಈ ಪ್ರಯತ್ನಕ್ಕೆ ಶೃಂಗೇರಿ ಮಠ ಸಹಕಾರ ನೀಡಿದೆ.

ಮೋದಿ ಅಭಿನಂದನೆ:

ಇದನ್ನು ವಾರಾಣಸಿ ಸಂಸದರೂ ಆಗಿರುವ ನರೇಂದ್ರ ಮೋದಿ ಶ್ಲಾಘಿಸಿದ್ದು, ‘ದೇವವ್ರತ ಮಹೇಶ್ ರೇಖೆ ಅವರನ್ನು ಮುಂದಿನ ಪೀಳಿಗೆಯವರು ಸ್ಮರಿಸುತ್ತಾರೆ. ಒಂದೇ ಒಂದು ತಪ್ಪಿಲ್ಲದೆ ಅವರು ಮಂತ್ರ ಪಠಿಸಿದ್ದಾರೆ. ಅವರು ನಮ್ಮ ಗುರು ಸಂಪ್ರದಾಯದ ಅತ್ಯುತ್ತಮ ಉದಾಹರಣೆ. ಕಾಶಿಯ ಸಂಸದನಾಗಿ, ಈ ಪವಿತ್ರ ನಗರದಲ್ಲಿ ಈ ಅಸಾಧಾರಣ ಸಾಧನೆ ನಡೆದಿರುವುದಕ್ಕೆ ನನಗೆ ಸಂತೋಷವಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.