ಹೊಸ ತಳಿಯ ಕೊರೋನಾತಂಕ ನಡುವೆಯೇ ಶಾಕಿಂಗ್ ಮಾಹಿತಿ ಕೊಟ್ಟ ಐಸಿಎಂಆರ್| ಬ್ರಿಟನ್ನಿಂದ ಆಗಮಿಸಿದ ಆರು ಮಂದಿಯಲ್ಲಿ ರೂಪಾಂತರಿ ಕೊರೋನಾ| ಬೆಂಗಳೂರಿನ ಮೂವರಿಗೂ ಹೊಸ ತಳಿ ಕೊರೋನಾ ಸೋಂಕು ದೃಢ
ನವದೆಹಲಿ(ಡಿ.29): ಕಳೆದೊಂದು ವರ್ಷದ ಹಿಂದೆ ಚೀನಾದ ವುಹಾನ್ ಪ್ರಾಂತ್ಯದಿಂದ ಹಬ್ಬಿದ್ದ ಕೊರೋನಾ ವೈರಸ್ ಎಂಬ ಮಹಾಮಾರಿ ಇಡೀ ವಿಶ್ವಕ್ಕೇ ವ್ಯಾಪಿಸಿ ಅಬ್ಬರಿಸುತ್ತಿದೆ. ಈ ಮಹಾಮಾರಿ ಅನೇಕರ ಜೀವ ಬಲಿ ಪಡೆದಿದೆ. ಈ ವೈರಸ್ಗೆ ಲಸಿಕೆ ಸಿಗುವ ಹಂತದಲ್ಲಿರುವಾಗಲೇ ಇದೀಗ ಈ ಕೊರೋನಾದ ಹೊಸ ತಳಿಯೊಂದು ಪತ್ತೆಯಾಗಿದ್ದು, ಇಡೀ ವಿಶ್ವವನ್ನು ಆತಂಕಕ್ಕೆ ದೂಡಿದೆ. ಈ ಆಘಾತದ ನಡುವೆಯೇ ಬ್ರಿಟನ್ನಿಂದ ಭಾರತಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಲ್ಲಿ ಈ ಸೋಂಕು ದೃಢಪಟ್ಟಿದೆ. ಅದರಲ್ಲೂ ಬೆಂಗಳೂರಿಗೆ ಆಗಮಿಸಿದ ಮೂವರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂಬುವುದು ಮತ್ತಷ್ಟು ಚಿಂತೆಗೀಡು ಮಾಡಿದೆ.
ಬ್ರಿಟನ್ನಿಂದ ಬಂದವರ ಪೈಕಿ ಎಷ್ಟು ಮಂದಿ ಈ ರೂಪಾಂತರಿ ವೈರಸ್ ತೆಕ್ಕೆಗೆ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ICMR- ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೊರ ಹಾಕಿದೆ. ಈ ಆರು ಮಂದಿಯಲ್ಲಿ ಮೂವರು ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರು ಹೈದರಾಬಾದ್ನ ಸಿಸಿಎಂಬಿಯಲ್ಲಿದ್ದಾರೆ. ಇನ್ನೊಬ್ಬ ಪ್ರಯಾಣಿಕ ಪುಣೆಯ ಎನ್ಐವಿಯಲ್ಲಿ ದಾಖಲಾಗಿದ್ದಾರೆ.
ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
— Dr Sudhakar K (@mla_sudhakar) December 29, 2020
ಈ ಕುರಿತಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡಾ ಟ್ವೀಟ್ ಮಾಡಿದ್ದು ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 29, 2020, 12:25 PM IST