Asianet Suvarna News Asianet Suvarna News

ಆಪ್‌ನಿಂದ ಟಿಕೆಟ್‌ ನಿರಾಕರಣೆ: ಶಾಸ್ತ್ರಿ ಮೊಮ್ಮಗ ಕಾಂಗ್ರೆಸ್‌ಗೆ!

ಆಪ್‌ನಿಂದ ಟಿಕೆಟ್‌ ನಿರಾಕರಣೆ: ಶಾಸ್ತ್ರಿ ಮೊಮ್ಮಗ ಕಾಂಗ್ರೆಸ್‌ಗೆ| ದ್ವಾರಕಾ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಹಿನ್ನೆಲೆ

AAP MLAs Adarsh Shastri and Jagdeep Singh Quit After Denial Of Ticket
Author
Bangalore, First Published Jan 19, 2020, 12:59 PM IST

ನವದೆಹಲಿ[ಜ.19]; ದೇಶದ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮೊಮ್ಮಗ ಹಾಗೂ ಆಮ್‌ ಆದ್ಮಿ ಪಕ್ಷ (ಆಪ್‌)ದ ಶಾಸಕ ಆದರ್ಶ ಶಾಸ್ತ್ರಿ ಅವರು ಶನಿವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

20 ದಿನದಲ್ಲಿ 5000 ರ‍್ಯಾಲಿಗೆ ಬಿಜೆಪಿ ಮೆಗಾ ಪ್ಲಾನ್!

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಪ್‌, ದ್ವಾರಕಾ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಆದರ್ಶ ಅವರು ಬೇಸರಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸುಭಾಷ್‌ ಛೋಪ್ರಾ ಹಾಗೂ ಎಐಸಿಸಿ ಉಸ್ತುವಾರಿ ಪಿ.ಸಿ ಚಾಕೋ ಅವರ ನೇತೃತ್ವದಲ್ಲಿ ಆದರ್ಶ ಕಾಂಗ್ರೆಸ್‌ ಸೇರಿದ್ದಾರೆ.

ಫೆ.8ಕ್ಕೆ ನಿಗದಿಯಾಗಿರುವ ದಿಲ್ಲಿ ವಿಧಾನಸಭೆ ಚುನಾವಣೆಗೆ ದ್ವಾರಕಾ ಕ್ಷೇತ್ರದಿಂದಲೇ ಆದರ್ಶ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಕೇಜ್ರಿವಾಲ್‌ ವಿರುದ್ಧ ಸ್ಪರ್ಧೆ ಇಲ್ಲ: ನಿರ್ಭಯಾ ತಾಯಿ

ಇನ್ನು ಇತ್ತ ಬಿಜೆಪಿಯು ದೆಹಲಿ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.

Follow Us:
Download App:
  • android
  • ios