ಕೊರೋನಾ ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಸಿಲುಕಿ, ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರು| ಕಾರ್ಮಿಕರನ್ನು ಸಂಸದರ ಕೋಟಾದಡಿ ತಮಗೆ ಲಭ್ಯವಿರುವ ವಿಮಾನ ಟಿಕೆಟ್‌ಗಳನ್ನು ಬಳಸಿ ತವರಿಗೆ ಕಳುಹಿಸಲು ಸಂಸದನ ನಿರ್ಧಾರ| 

ನವದೆಹಲಿ(ಜೂ.04): ಕೊರೋನಾ ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಸಿಲುಕಿ, ಸಂಕಷ್ಟದಲ್ಲಿರುವ ಪಟನಾ ಮೂಲದ 33 ವಲಸೆ ಕಾರ್ಮಿಕರನ್ನು ಸಂಸದರ ಕೋಟಾದಡಿ ತಮಗೆ ಲಭ್ಯವಿರುವ ವಿಮಾನ ಟಿಕೆಟ್‌ಗಳನ್ನು ಬಳಸಿ ತವರಿಗೆ ಕಳುಹಿಸಲು ಆಮ್‌ ಆದ್ಮಿ ಪಕ್ಷದ ಸಂಸದ ಸಂಜಯ್‌ ಸಿಂಗ್‌ ನಿರ್ಧರಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಂಸದರ ಕೋಟಾದಡಿ ವಾರ್ಷಿಕ 34 ವಿಮಾನ ಟಿಕೆಟ್‌ಗಳನ್ನು ಪ್ರತಿ ಸಂಸದನಿಗೆ ಸರ್ಕಾರ ನೀಡುತ್ತದೆ. ಈ ಸೌಲಭ್ಯವನ್ನು ಮಾನವೀಯ ಕಾರ‍್ಯಕ್ಕೆ ಬಳಸಿಕೊಳ್ಳುತ್ತಿರುವ ಸಂಜಯ್‌ ಸಿಂಗ್‌ 33 ವಲಸೆ ಕಾರ್ಮಿರನ್ನು ತವರಿಗೆ ಕಳುಹಿಸಲು ನಿರ್ಧರಿಸಿದ್ದಾರೆ. ಗುರುವಾರ ಸಂಜೆ ವಿಮಾನದ ಮೂಲಕ ಕಾರ್ಮಿಕರು ತಮ್ಮ ತವರು ಸೇರಲಿದ್ದಾರೆ.

ಸಂಜಯ್‌ ಸಿಂಗ್‌ ಅವರ ಈ ಕಾರ‍್ಯವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ‘ನಿಮ್ಮ ಈ ಕೆಲಸ ಎಲ್ಲರಿಗೂ ಮಾದರಿ’ ಪ್ರಶಂಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಂಜಯ್‌ ಸಿಂಗ್‌, ‘ನಿಮ್ಮ ರಾಜಕೀಯ ಸಂಗಡದಿಂದ ಕಲಿತ ಪಾಠ ಇದು’ ಎಂದು ಹೇಳಿ ಧನ್ಯವಾದ ಅರ್ಪಿಸಿದ್ದಾರೆ.