Asianet Suvarna News Asianet Suvarna News

ಅಯೋಧ್ಯೆ ಬೆನ್ನಲ್ಲೇ ಕೋರ್ಟ್‌ ಮೆಟ್ಟಿಲೇರಿದ ಕೃಷ್ಣ ಜನ್ಮಭೂಮಿ ವಿವಾದ, ಈದ್ಗಾ ಮರೆಯಾಗುತ್ತಾ?

 ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಪಿನ ಬೆನ್ನಲ್ಲೇ ಮತ್ತೊಂದು ವಿವಾದ|  ಕೃಷ್ಣ ಜನ್ಮಭೂಮಿಯ ಪ್ರತಿ ಇಂಚು ಜಾಗವೂ ಕೃಷ್ಣನ ಭಕ್ತರು ಹಾಗೂ ಹಿಂದೂ ಸಮುದಾಯದವರಿಗೆ ಪವಿತ್ರವಾದುದು| ಈದ್ಗಾ ಮಸೀದಿ ಕೆಡವಲು ಮನವಿ

After Ayodhya verdict civil suit filed in Mathura court over Krishna Janmabhoomi seeks removal of Idgah pod
Author
Bangalore, First Published Sep 26, 2020, 3:41 PM IST

ಮಥುರಾ(ಸೆ.26): ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಪು ಹೊರ ಬಂದಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಪಿಎಂ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಅತ್ತ ಬಾಬರಿ ಮಸೀದಿ ನಿರ್ಮಾಣಕ್ಕೂ ಭರದ ಸಿದ್ಧತೆ ಆರಂಭವಾಗಿದೆ. ಆದರೀಗ ಈ ವಿಚಾರ ಇತ್ಯರ್ಥಗೊಂಡ ಬೆನ್ನಲ್ಲೇ ಕೃಷ್ಣ ಜನ್ಮಭೂಮಿ ವಿಚಾರ ಸದ್ದು ಮಾಡಲಾರಂಭಿಸಿದೆ. ಮಥುರಾದ ನ್ಯಾಯಾಲಯದಲ್ಲಿ ಈ ವಿಚಾರವಾಗಿ ಅರ್ಜಿ ಸಲ್ಲಿಸಲಾಗಿದ್ದು, ಕೃಷ್ಣ ಜನ್ಮಭೂಮಿಯ ಪ್ರತಿ ಇಂಚು ಜಾಗವೂ ಕೃಷ್ಣನ ಭಕ್ತರು ಹಾಗೂ ಹಿಂದೂ ಸಮುದಾಯದವರಿಗೆ ಪವಿತ್ರವಾದುದು' ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಡ್ವೊಕೇಟ್ ಹರಿ ಶಂಕರ್ ಹಾಗೂ ವಿಷ್ಣು ಜೈನ್ ಕೋರ್ಟ್‌ಗೆ ಈ ಹೊಸ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಶ್ರೀ ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶದಲ್ಲಿರುವ ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ. 

ಅಲ್ಲದೇ ಮಸೀದಿ ಸಮಿತಿ ಒತ್ತುವರಿ ಮಾಡಿಕೊಂಡಿರುವ ಹಾಗೂ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸುವಂತೆಯೂ ಈ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.
 

Follow Us:
Download App:
  • android
  • ios