ಮಥುರಾ ಮತ್ತು ವೃಂದಾವನದಲ್ಲೂ ಭವ್ಯ ದೇಗುಲ ನಿರ್ಮಾಣ ಮಥುರಾದಲ್ಲಿ ಕೆಲಸ ಪ್ರಗತಿಯಲ್ಲಿದೆ ಎಂದ ಸಿಎಂ

ಲಖನೌ(ಡಿ.31): ಅಯೋಧ್ಯೆ ಮತ್ತು ವಾರಾಣಸಿಯಂತೆ ಪಶ್ಚಿಮ ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನದಲ್ಲೂ ಭವ್ಯ ದೇಗುಲ ನಿರ್ಮಾಣ ಮಾಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರು ಬುಧವಾರ ಭರವಸೆ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮ್ರೋಹಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣಕ್ಕೆ ಬಿಜೆಪಿ(BJP) ಬದ್ಧವಾಗಿದೆ. ಭವ್ಯ ದೇಗುಲ ನಿರ್ಮಾಣ ಮಾಡುವ ಆಶ್ವಾಸನೆ ನೀಡಿದ್ದೆವು. ಪ್ರಧಾನಿ ಮೋದಿ ಅವರು ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ. ಕಾಶಿಯಲ್ಲೂ ಭವ್ಯ ದೇಗುಲ ನಿರ್ಮಾಣವಾಗಿದೆ. ಹಾಗಿದ್ದಾಗ ಮಥುರಾ(Matura) ಮತ್ತು ವೃಂದಾವನಗಳನ್ನು ಹಾಗೆಯೇ ಬಿಟ್ಟುಬಿಡಲು ಹೇಗೆ ಸಾಧ್ಯ? ಮಥುರಾದಲ್ಲಿ ಕೆಲಸ ಪ್ರಗತಿಯಲ್ಲಿದೆ’ ಎಂದು ಹೇಳಿದರು.

ಅಖಿಲೇಶ್‌ ಹೇಳಿಕೆಗೆ ಯೋಗಿ ಆದಿತ್ಯನಾಥ್‌ ತಿರುಗೇಟು

ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಈ ತಿಂಗಳ ಆರಂಭದಲ್ಲಿ ಮಥುರಾದಲ್ಲಿ ಅಯೋಧ್ಯೆ ಮತ್ತು ಕಾಶಿ ವಿಶ್ವನಾಥದ ಮಾದರಿಯಲ್ಲಿ ಶ್ರೀಕೃಷ್ಣನ ಭವ್ಯವಾದ ದೇವಾಲಯವನ್ನು ನಿರ್ಮಿಸಬೇಕೆಂದು ಬಯಸಿದ್ದರು. ಮಥುರಾ-ವೃಂದಾವನವನ್ನು ಶ್ರೀಕೃಷ್ಣನ ಜನ್ಮಭೂಮಿ (ಜನ್ಮಭೂಮಿ) ಎಂದು ಪರಿಗಣಿಸಲಾಗಿದೆ.

2021 ರ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ-ರಾಜಕಾರಣಿ, ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯವಾದ ಮಂದಿರವನ್ನು ನಿರ್ಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ವಾರಣಾಸಿಯಲ್ಲಿ ಭವ್ಯವಾದ ಕಾರಿಡಾರ್ ಬಂದಿದೆ ಎಂದಿದ್ದರು. 

ಕೇವಲ 9 ಕ್ಯಾಬಿನೆಟ್ ಸಭೆ, ಮೋದಿ ಕನಸು ಸಾಕಾರಗೊಳಿಸಿದ ಸಿಎಂ ಯೋಗಿ!

ಈಗ ಮಥುರಾದಲ್ಲಿ ಭವ್ಯವಾದ ಕೃಷ್ಣ ಮಂದಿರದ ಸಮಯ ಕೂಡ ಬಂದಿದೆ. ಅದು ಹೇಗೆ ಆಗುತ್ತದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೋಡಲಿದ್ದಾರೆ. ಆದರೆ ನಾನು ಹೇಳಬೇಕಾಗಿರುವುದು ಪ್ರೀತಿಯಿಂದ ನಿರ್ಮಿಸಬೇಕು ಎಂದು ಮಥುರಾ ಸಂಸದರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕಾಶಿ ವಿಶ್ವನಾಥ್ ಕಾರಿಡಾರ್ ಕನಸನ್ನು ನನಸು ಮಾಡುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮುಖ ಪಾತ್ರ ವಹಿಸಿದ್ದಾರೆ. ಮುಖ್ಯಮಂತ್ರಿಗಳು ಒಂಬತ್ತು ಸಂಪುಟ ಸಭೆಗಳನ್ನು ನಡೆಸುವ ಮೂಲಕ ಯೋಜನೆಗೆ ರೂಪು ನೀಡಿದ್ದಾರೆ ಮತ್ತು ಕೇವಲ ನಾಲ್ಕು ವರ್ಷಗಳಲ್ಲಿ, ಯೋಗಿ ಮಹತ್ವದ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಒಂಬತ್ತು ಕ್ಯಾಬಿನೆಟ್ ಸಭೆಗಳಲ್ಲಿ ದತ್ತಿ ವ್ಯವಹಾರಗಳ ಇಲಾಖೆಯಿಂದ ಕಾಶಿ ವಿಶ್ವನಾಥ ದೇವಾಲಯದ ವಿಸ್ತರಣೆ ಮತ್ತು ಅಭುವೃದ್ಧಿ ಯೋಜನೆಗೆ ಪ್ರಸ್ತಾವನೆಗಳನ್ನು ಮಂಡಿಸಲಾಯಿತು.

ಇದಕ್ಕಾಗಿ ಇಲಾಖಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ದತ್ತಿ ಕಾರ್ಯದ ಜವಾಬ್ದಾರಿಯನ್ನು ಸಿಎಂ ಯೋಗಿ ನೀಡಿದರು. ಅವ್ನಿಶ್ ಅವಸ್ಥಿ ಅವರ ನೇತೃತ್ವದಲ್ಲಿ ಈ ಯೋಜನೆಯನ್ನು ಸಿದ್ಧಪಡಿಸಲು ವಿಶೇಷ ತಂಡವನ್ನು ರಚಿಸಿದರು. ಇದರಿಂದ ಈ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಂಡಿದೆ. ಈ ಅಧಿಕಾರಿಗಳ ತಂಡವು ಜೂನ್ 19, 2018 ರಿಂದ ಕೆಲಸವನ್ನು ಪ್ರಾರಂಭಿಸಿತು ಮತ್ತು ಕೇವಲ ನಾಲ್ಕು ವರ್ಷಗಳಲ್ಲಿ ಯೋಜನೆಯನ್ನು ಕೊನೆಗೊಳಿಸಿತು.