ಭಾರತ ಹಾಗೂ ಚೀನಾ ಗಡಿ ನಡುವಿನ ಸಂಘರ್ಷ ಅಂತ್ಯಗೊಳಿಸುವ ಭರಾತದ ಪ್ರಯತ್ನಗಳೆಲ್ಲಾ ವಿಫಲವಾಗುತ್ತಿದೆ. ಚೀನಾ ತನ್ನ ಮೊಂಡುವಾದ ಮುಂದುವರಿಸಿದೆ. ಇದರ ನಡುವೆ ಗಡಿಯಲ್ಲಿನ ಅಹಿತಕರ ಬೆಳವಣಿಗೆ ಕುರಿತು ಭಾರತೀ ವಾಯುಸೇನಾ ಮುಖ್ಯಸ್ಥ ಇದೀಗ ಚೀನಾಗೆ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ(ಸೆ.29): ಸದಾ ಕಾಲು ಕೆರೆದು ನಿಂತಿರುವ ಚೀನಾಗೆ ಅದೇ ಭಾಷೆಯಲ್ಲಿ ಉತ್ತರ ನೀಡಲು ಭಾರತೀಯ ಸೇನೆ ಸಜ್ಜಾಗಿದೆ. ಲಡಾಖ್ ಪ್ರಾಂತ್ಯದಲ್ಲಿನ ಬೆಳವಣೆಗೆ ಅಹಿತಕವಾಗಿದ್ದು, ವಾಯು ಸೇನೆ ಎಲ್ಲ ಸಂದರ್ಭ ಎದುರಿಸಲು ಸಜ್ಜಾಗಿದೆ ಎಂದು ಭಾರತೀಯ ವಾಯು ಸೇನೆ ಮುಖ್ಯಸ್ಥ ಆರ್‌ಕೆಎಸ್ ಬದೌರಿಯಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಡಾಖ್ ಬೆನ್ನಲ್ಲೇ ಪಾಕಿಸ್ತಾನ ಗಡಿ ಬಳಿ ತೇಜಸ್ ಯುದ್ದ ವಿಮಾನ ನಿಯೋಜಿಸಿದ IAF!

ಮುಂಬರುವ ದಿನಗಳಲ್ಲಿ ವಾಯುಸೇನೆ ಯುದ್ಧದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಗೆಲುವು ನಿರ್ಧರಿಸುವುದೇ ವಾಯುಸೇನೆ. ಇದೀಗ ಭಾರತದ ವಾಯುಸೇನೆಗೆ ರಾಫೆಲ್ ಯುದ್ಧವಿಮಾನ, ಚಿನೂಕ್, ಅಪಾಚೆ ಸೇರಿತಂದೆ ಅತ್ಯಾಧುನಿಕ ಚಾಪರ್ ಸೇರಿಕೊಂಡಿವೆ. ಹಿಂದೆಂದಿಗಿಂತೂ ಭಾರತ ವಾಯುಸೇನೆ ಬಲಿಷ್ಠವಾಗಿದೆ ಎಂದು ಬದೌರಿಯಾ ಹೇಳಿದರು.

ಮಿಗ್ 21 ಮೂಲಕ ಗಡಿಯಲ್ಲಿ IAF ಮುಖ್ಯಸ್ಥ RKS ಬದೌರಿಯಾ ಹಾರಾಟ; ಸಿದ್ಧತೆ ಪರಿಶೀಲನೆ!.

ಚಳಿಗಾಲ ಸನಿಹವಾಗುತ್ತಿದೆ. ಇದೀಗ ಲಡಾಖ್ ಪ್ರಾಂತ್ಯದಲ್ಲಿ ಪಹರೆ ಅತ್ಯಂತ ಸವಾಲಾಗಿದೆ. ಆದರೆ ಭಾರತೀಯ ಸೇನೆ ಈಗಾಗಲೇ ಗಡಿ ಭಾಗಕ್ಕೆ ಯುದ್ಧ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಆಹಾರ ಸೇರಿದಂತೆ ಎಲ್ಲಾ ಪೂರೈಕೆ ಮಾಡಲಾಗಿದೆ. 

ಚೀನಾದ ಅಪ್ರಚೋದಿತ ದಾಳಿಗಳಿಂದ ಗಡಿಯಲ್ಲಿ ಅಹಿತಕರ ಘಟನೆ ನಿರ್ಮಾಣವಾಗಿದೆ. ಭಾರತ ಶಾಂತಿ ಬಯಸುತ್ತದೆ. ಇದಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಭಾರತ ಮಾಡಲಿದೆ. ಮಾತುಕತೆಗೆ ಮೊದಲ ಆದ್ಯತೆ ನೀಡಲಿದೆ. ಆದರೆ ಚೀನಾದ ಅತಿಕ್ರಮಣ ಪ್ರವೇಶದಿಂದ ಶಾಂತಿಯೂ ಇಲ್ಲ, ಯುದ್ಧ ನಮ್ಮ ಆಯ್ಕೆಯೂ ಅಲ್ಲ ಎಂದು ಬದೌರಿಯಾ ಹೇಳಿದ್ದಾರೆ.