ಪ್ರಸ್ತುತ ಲೋಕಸಭಾ ಚುನಾವಣೆ ಮಣಿಪುರವನ್ನು ಒಡೆಯುವ ಮತ್ತು ಒಂದುಗೂಡಿಸುವವರ ನಡುವಿನ ಸಂಗ್ರಾಮವಾಗಿದೆ. ಬಿಜೆಪಿಯು ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಕ್ಕೆ ಆದ್ಯತೆ ನೀಡುತ್ತದೆ: ಅಮಿತ್‌ ಶಾ 

ಇಂಫಾಲ್‌(ಏ.16): ಗಲಭೆಪೀಡಿತ ಮಣಿಪುರ ರಾಜ್ಯವನ್ನು ಒಡೆಯದೆ ಅಲ್ಲಿ ಸರ್ವ ಸಮುದಾಯವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ಬಿಜೆಪಿಯ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದರು.

Add Asianetnews Kannada as a Preferred SourcegooglePreferred

ಸೋಮವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ಲೋಕಸಭಾ ಚುನಾವಣೆ ಮಣಿಪುರವನ್ನು ಒಡೆಯುವ ಮತ್ತು ಒಂದುಗೂಡಿಸುವವರ ನಡುವಿನ ಸಂಗ್ರಾಮವಾಗಿದೆ. ಬಿಜೆಪಿಯು ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಕ್ಕೆ ಆದ್ಯತೆ ನೀಡುತ್ತದೆ’ ಎಂದು ತಿಳಿಸಿದರು.

ಮೈತೇಯಿಗಿಲ್ಲ ಎಸ್ಟಿ ಸ್ಥಾನಮಾನ: ಮಣಿಪುರ ಗಲಭೆಗೆ ಕಾರಣವಾಗಿದ್ದ ವಿವಾದಿತ ಆದೇಶವೇ ರದ್ದು

ಕಳೆದ ವರ್ಷ ಮಣಿಪುರದಲ್ಲಿ ಪ್ರಬಲ ಮೈತೇಯಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡುವ ವಿಚಾರವಾಗಿ ಗಲಭೆ ಏರ್ಪಟ್ಟು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮಣಿಪುರದ ಒಂದು ಲೋಕಸಭಾ ಕ್ಷೇತ್ರಕ್ಕೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.