ಕೇರಳದ ಎಲ್ಲಾ ಮಸೀದಿಗಳ ಮೇಲೆ ತ್ರಿವರ್ಣ ಧ್ವಜ| ಗಣರಾಜ್ಯೋತ್ಸವ ಅಂಗವಾಗಿ ಮಸೀದಿಗಳ ಮೇಲೆ ರಾರಾಜಿಸಿದ ತ್ರಿವರ್ಣ ಧ್ವಜ| ಇದೇ ಮೊದಲ ಬಾರಿಗೆ ಕೇರಳದ ಮಸೀದಿಗಳ ಮೇಲೆ ರಾಷ್ಟ್ರಧ್ವಜ ಹಾರಾಟ| ಎಲ್ಲಾ ಮಸೀದಿಗಳಲ್ಲಿ ಸಂವಿಧಾನದ ಪೂರ್ವ ಪೀಠಿಕೆಯ ಪಠಣ|‘ಸಿಎಎ ಹಾಗೂ NRC ವಿರೋಧಿ ಹೋರಾಗಾರರು ದೇಶದ್ರೋಹಿಗಳಲ್ಲ’| ಕೇರಳ ಎಡರಂಗ ಸರ್ಕಾರದಿಂದ ಮಾನವ ಸರಪಳಿ ಕಾರ್ಯಕ್ರಮ| 

ತಿರುವನಂತಪುರಂ(ಜ.26): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಚುರುಕಾಗಿರುವ ಕೇರಳದಲ್ಲಿ, ರಾಜ್ಯದ ಎಲ್ಲಾ ಮಸೀದಿಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ನಿರ್ಣಯ ಕೈಗೊಳ್ಳಲಾಗಿದೆ.

Add Asianetnews Kannada as a Preferred SourcegooglePreferred

ಈ ಕುರಿತು ಕೇರಳ ವಕ್ಫ್ ಬೋರ್ಡ್ ಮಾಹಿತಿ ನೀಡಿದ್ದು, ಗಣರಾಜ್ಯೋತ್ಸವ ಅಂಗವಾಗಿ ರಾಜ್ಯದ ಎಲ್ಲಾ ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಕಡ್ಡಾಯ ಎಂದು ತಿಳಿಸಿದೆ.

ಗಣರಾಜ್ಯೋತ್ಸವ ದಿನದಂದು ಎಲ್ಲ ಮಸೀದಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಹಾಗೂ ಸಂವಿಧಾನದ ಪೂರ್ವ ಪೀಠಿಕೆಯ ಪಠಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇರಳ ವಕ್ಫ್ ಬೋರ್ಡ್ ಹೇಳಿದೆ.

ರಾಜ್ಯಪಾಲರ ವಿರುದ್ಧವೇ ಕೇರಳದಲ್ಲಿ ಗೊತ್ತುವಳಿ?

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ NRC ವಿರೋಧಿ ಹೋರಾಟಗಾರರನ್ನು ದೇಶದ್ರೋಹಿಗಳೆಂದ ಬಿಂಬಿಸಲಾಗುತ್ತಿದೆ. ಆದರೆ ಸಿಎಎ ವಿರೋಧಿ ಹೋರಾಟಗಾರರು ದೇಶದ್ರೋಹಿಗಳಲ್ಲ ಎಂದು ಸಾರಲು ಈ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ದೇಶ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ನಾವೆಲ್ಲರೂ ಒಂದು ಎಂಬ ಸಂದೇಶ ಸಾರಲು ತ್ರಿವರ್ಣ ಧ್ವಜ ಹಾರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ವಕ್ಫ್ ಬೋರ್ಡ್ ಹೇಳಿದೆ.

ಇನ್ನು ಗಣರಾಜ್ಯೋತ್ಸವದ ಅಂಗವಾಗಿ ಕೇರಳದ ಎಡರಂಗ ಸರ್ಕಾರ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯದ 14 ಜಿಲ್ಲೆಗಳ ಪೈಕಿ 10 ಜಿಲ್ಲೆಗಳಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಏಕತೆಯ ಸಂದೇಶ ಸಾರಲು ಮುಂದಾಗಿದೆ.