Asianet Suvarna News Asianet Suvarna News

ನಿಜ್ಜರ್‌ ಹತ್ಯೆಗೆ ಅನುಮತಿಸಿದ್ದು ಅಮಿತ್ ಷಾ: ಅಮೆರಿಕದ ವಾಷಿಂಗ್ಟನ್ ಪೋಸ್ಟ್ ಪತ್ರಿಕೆ ವರದಿ

ಕೆನಡಾದಲ್ಲಿ ನಿಗೂಢವಾಗಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್  ಸಿಂಗ್ ನಿಜ್ಜರ್ ಪ್ರಕರಣದಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಹಸ್ತವಿದೆ ಎಂದು ಅಮೆರಿಕದ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

Amit Shah Allegedly Approved Nijjars Killing Washington Post Report
Author
First Published Oct 16, 2024, 9:48 AM IST | Last Updated Oct 16, 2024, 9:58 AM IST

ನ್ಯೂಯಾರ್ಕ್: ಕೆನಡಾದಲ್ಲಿ ನಿಗೂಢವಾಗಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್  ಸಿಂಗ್ ನಿಜ್ಜರ್ ಪ್ರಕರಣದಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಹಸ್ತವಿದೆ. ಅಮಿತ್ ಶಾ ಮತ್ತು ಭಾರತದ ವಿದೇಶಿ ಗುಪ್ತಚರ ಸಂಸ್ಥೆ 'ರಾ'ದ ಹಿರಿಯ ಅಧಿಕಾರಿಗಳು ನಿಜ್ಜರ್ ಹತ್ಯೆಗೆ ಅನುಮತಿ ನೀಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ನಿಜ್ಜ‌ರ್ ಹತ್ಯೆ ಕುರಿತ ದಾಖಲೆ ಹಂಚಿಕೊಳ್ಳುವ ಸಲುವಾಗಿ ಕೆನಡಾದ ವಿದೇಶಾಂಗ ಇಲಾಖೆ ಅಧಿಕಾರಿಗಳು ಅ.12ರಂದು ಸಿಂಗಾಪುರದಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದರು. ಈ ಭೇಟಿ ವೇಳೆ, ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡದ ಕುರಿತ ದಾಖಲೆ ಹಸ್ತಾಂತರ ಮಾಡಿದ್ದಾರೆ. ಅದರಲ್ಲಿ ಭಾರತದ ಬಿಷ್ಟೋಯಿ ತಂಡವನ್ನು ಬಳಸಿ ಕಾರ್ಯಾಚರಣೆ ನಡೆಸಿದ ಕುರಿತ ಮಾಹಿತಿ ಇದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ರಾಯಭಾರಿಗಳ ಬಳಸಿ ನಮ್ಮ ಮೇಲೆ ಭಾರತ ದಾಳಿ ಸಂಚು: ಕೆನಡಾ ಪ್ರಧಾನಿ ಟ್ರುಡೋ

ಈ ದಾಖಲೆಗಳನ್ನು ಉಲ್ಲೇಖಿಸಿ ಮೊದಲಿಗೆ ವರದಿ ಪ್ರಕಟಿಸಿದ್ದ ವಾಷಿಂಗ್ಟನ್ ಪೋಸ್ಟ್ ಪತ್ರಿಕೆ, ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳ ಕುರಿತ ಮಾಹಿತಿ ಸಂಗ್ರಹ ಮತ್ತು ಅವರ ಮೇಲಿನ ದಾಳಿಗೆ ಭಾರತದ ಹಿರಿಯ ಸಚಿವರು ಮತ್ತು 'ರಾ'ದ ಹಿರಿಯ ಅಧಿಕಾರಿಗಳು ಅನುಮತಿ ನೀಡಿದ್ದರು ಎಂದು ಹೇಳಿತ್ತು. ಆದರೆ ತನ್ನ ಪರಿಷ್ಕೃತ ವರದಿಯಲ್ಲಿ ಪತ್ರಿಕೆಯು, ಆ ಹಿರಿಯ ಸಚಿವ ಅಮಿತ್ ಶಾ ಎಂದು ಹೆಸರಿಸಿದೆ.

ಕೆನಡಾದಲ್ಲಿ ಕಳೆದ ವರ್ಷ ಆಗಿದ್ದೇನು?
ನಿಜ್ಜರ್‌ನನ್ನು 2023ರ ಜೂ.18ರಂದು ಕೆನಡಾದ ಸರ್ರೆಯಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿತ್ತು. ಬಳಿಕ ಈ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಭಾರತ ಹೇಳಿತ್ತು. ಇದು ಎರಡೂ ದೇಶಗಳ ರಾಜತಾಂತ್ರಿಕ ಯುದ್ಧಕ್ಕೆ ನಾಂದಿ ಹಾಡಿತ್ತು.

ಖಲಿಸ್ತಾನಿ ಉಗ್ರರ ಪರ ನಿಂತು ಮೊಂಡಾಟ: ಭಾರತ, ಕೆನಡಾ ಸಂಬಂಧಕ್ಕೆ ಎಳ್ಳುನೀರು!  

ಭಾರತದ ವಿರುದ್ದ ನಿರ್ಬಂಧದ ಬಗ್ಗೆ ಪರಿಶೀಲನೆ

ಒಟ್ಟಾವಾ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರದಲ್ಲಿ ಭಾರತದ ಜತೆ ರಾಜತಾಂತ್ರಿಕ ಸಂಬಂಧ ಕಡಿದು ಕೊಂಡಿರುವ ಕೆನಡಾ ಸರ್ಕಾರ, ಈಗ ಭಾರತದ ವಿರುದ್ಧ ನಿರ್ಬಂಧ ಹೇರುವ ಸುಳಿವು ನೀಡಿದೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕೆನಡಾ ವಿದೇಶಾಂಗ ಸಚಿವೆ ಮೆಲಾನೀ ಜಾಲಿ ಅವರಿಗೆ ಪತ್ರಕರ್ತರು 'ಭಾರತದ ವಿರುದ್ಧ ನಿರ್ಬಂಧ ಹೇರುತ್ತೀರಾ? ಎಂದು ಪ್ರಶ್ನೆ ಕೇಳಿದಾಗ, ಎಲ್ಲ ಸಾಧ್ಯಾಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದಿದ್ದಾರೆ. 

 ಇದೇ ವೇಳೆ, 'ಭಾರತದಿಂದ ನಾವು ನಿಜ್ಜರ್ ಹತ್ಯೆಯ ತನಿಖೆಗೆ ಸಹಕಾರ ಬಯಸುತ್ತೇವೆ. ಕೆನಡಾ ಪೊಲೀಸರ ವರದಿ ಆಧರಿಸಿ 6 ಭಾರತೀಯ ರಾಯಭಾರಿಗಳನ್ನು ಉಚ್ಚಾಟಿಸಿದ್ದೇವೆ. ಅವರ ವಿಚಾರಣೆಗೆ ನಾವು ನಿರ್ಧರಿಸಿದ್ದೆವು. ಆದರೆ ರಾಜತಾಂತ್ರಿಕ ರಕ್ಷಣೆ ನೆಪವೊಡ್ಡಿ ಭಾರತ ತನಿಖೆಯಿಂದ ಜಾರಿ ಕೊಂಡಿತು' ಎಂದರು. 'ಕೆನಡಾಗೆ ಪ್ರತಿ ವರ್ಷ ಸಾವಿರಾರು ಭಾರತೀಯರು ಬರುತ್ತಾರೆ. ನಮ್ಮವರು ಭಾರತಕ್ಕೂ ಹೋಗುತ್ತಾರೆ. ರಾಜತಾಂತ್ರಿಕ ಬಿಕ್ಕಟ್ಟು ಜನರ ಮೇಲೆ ಪರಿಣಾಮ ಆಗಬಾರದು. ಹೀಗಾಗಿ ಭಾರತವು ತನಿಖೆಗೆ ಸಹಕರಿಸಬೇಕು' ಎಂದು ಜಾಲಿ ಆಗ್ರಹಿಸಿ ದರು. ಈ ವಿಷಯ ಈಗಾಗಲೇ ಉಭಯ ದೇಶಗಳು ಪರಸ್ಪರರ ರಾಜತಾಂತ್ರಿಕರ ಉಚ್ಚಾಟನೆಗೆ ಕಾರಣವಾಗಿದೆ.

Latest Videos
Follow Us:
Download App:
  • android
  • ios