userpic
user icon
0 Min read

ದೇಶದಲ್ಲಿರುವ ಎಲ್ಲಾ ಪಾಕಿಸ್ತಾನಿಯರ ಗುರುತಿಸಿ ವಾಪಸ್ ಕಳಿಸಿ: ರಾಜ್ಯಗಳಿಗೆ ಅಮಿತ್ ಷಾ ಸೂಚನೆ

Amit Shah Directs States to Identify and Expel Pakistani Citizens
Amith Shah

Synopsis

ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿರುವ ಪಾಕಿಸ್ತಾನದ ಎಲ್ಲಾ ನಾಗರಿಕರು 48 ಗಂಟೆಯೊಳಗೆ ದೇಶ ತೊರೆಯಬೇಕೆಂದು ಆದೇಶಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚಿಸಿದ್ದಾರೆ.

ನವದೆಹಲಿ: ಪಹಲ್ಗಾಮ್‌ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ, ಭಾರತದಲ್ಲಿರುವ ಪಾಕ್‌ನ ರಾಜತಾಂತ್ರಿಕ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬ ಪಾಕಿಸ್ತಾನ ನಾಗರಿಕರು 48 ಗಂಟೆಯಲ್ಲಿ ದೇಶ ತೊರೆಯುವಂತೆ ಆದೇಶಿಸಿತ್ತು. ಹೀಗಾಗಿ ಈ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಅಮಿತ್ ಷಾ ಮಾತನಾಡಿದ್ದಾರೆ ಎಂದು ವರದಿಯಾಗಿದ್ದು, ರಾಜ್ಯಗಳಲ್ಲಿ ಇರುವ ಪ್ರತಿಯೊಬ್ಬ ಪಾಕಿಸ್ತಾನಿ ಪ್ರಜೆಯನ್ನು ಗುರುತಿಸಿ ದೇಶದಿಂದ ಹೊರ ಹಾಕುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ನಂತರ ಬುಧವಾರ ಭಾರತ ಪಾಕಿಸ್ತಾನದ ವಿರುದ್ಧ ಐದು ಮಹತ್ವದ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಭೂ ರಸ್ತೆ ಸಾರಿಗೆ ಇರುವ ಅಟ್ಟಾರಿ ವಾಘಾ ಗಡಿ ಬಂದು ಮಾಡುವುದು, 60 ದಶಕದಷ್ಟು ಹಿಂದಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಸ್ಥಗಿತಗೊಳಿಸುವುದು. ಪಾಕಿಸ್ತಾನದ ನಾಗರಿಕರಿಗೆ ನೀಡಿದ್ದ ಸಾರ್ಕ್‌ ವಿಶೇಷ ವೀಸಾವನ್ನು ರದ್ದುಪಡಿಸುವುದು, ಪಾಕಿಸ್ತಾನದ ಜೊತೆಗಿನ ಎಲ್ಲಾ ರಾಜತಾಂತ್ರಿಕ ಒಪ್ಪಂದವನ್ನು ಬಂದ್ ಮಾಡುವುದು. ಹಾಗೂ ಪಾಕಿಸ್ತಾನ ಭಯೋತ್ಪಾದಕರಿಗೆ ಬೆನ್ನೆಲುಬಾಗಿ ನಿಂತು ಸಹಾಯ ಮಾಡುತ್ತಿರುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ರಾಷ್ಟ್ರಗಳಿಗೆ ಪತ್ರ ಬರೆದು ವಿಚಾರ ತಿಳಿಸುವುದು ಸೇರಿದಂತೆ ಹಲವು ರಾಜತಾಂತ್ರಿಕ ಕ್ರಮಗಳನ್ನು ಭಾರತ ಕೈಗೊಂಡಿದೆ. 

ಇದನ್ನೂ ಓದಿ: ಐಐಟಿಯನ್ನರ ಹಳ್ಳಿ ಎಂದೇ ಹೆಸರಾದ ಈ ಗ್ರಾಮದ 40 ವಿದ್ಯಾರ್ಥಿಗಳು ಜೆಇಇ ಪಾಸ್!

ಹೀಗಾಗಿ ವೈದ್ಯಕೀಯ ವೀಸಾವೂ ಸೇರಿದಂತೆ ಪಾಕಿಸ್ತಾನ ನಾಗರಿಕರಿಗೆ ನೀಡಿದ್ದ ಎಲ್ಲಾ ರೀತಿಯ ವೀಸಾಗಳನ್ನು ಏಪ್ರಿಲ್ 27ಕ್ಕೆ ಜಾರಿಯಾಗುವಂತೆ ಬಂದ್ ಮಾಡಲಾಗಿದೆ. ಹೀಗಾಗಿ ರಾಜ್ಯಗಳಿಗೂ ಈ ಆದೇಶವನ್ನು ಕೂಡಲೇ ಪಾಲಿಸುವಂತೆ ಆದೇಶಿಸಲಾಗಿದೆ. ಪಹಲ್ಗಾಮ್ ದಾಳಿ ಯೋಜನೆ ಮತ್ತು ಅದನ್ನು ಕಾರ್ಯಗತಗೊಳಿಸುವಿಕೆಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬುದಕ್ಕೆ ತನ್ನ ಬಳಿ ಹಲವು ಸಾಕ್ಷ್ಯಗಳಿವೆ ಎಂದು ಭಾರತ ಹೇಳಿದೆ. ಗುರುವಾರ ಅಮೆರಿಕ, ಯುನೈಟೆಡ್ ಕಿಂಗ್‌ಡಮ್, ಇಟಲಿ, ಫ್ರಾನ್ಸ್, ಜರ್ಮನಿ, ರಷ್ಯಾ ಮತ್ತು ಚೀನಾದ ಹಿರಿಯ ವಿದೇಶಿ ರಾಜತಾಂತ್ರಿಕರಿಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಈ ಸಾಕ್ಷ್ಯವನ್ನು ತೋರಿಸಿದ್ದರು.  ಭಾರತದ ಈ ನಿರ್ಧಾರಕ್ಕೆ ಪ್ರತಿಯಾಗಿ ಪಾಕಿಸ್ತಾನವೂ 1972ರ ಶಿಮ್ಲಾ ಒಪ್ಪಂದವನ್ನು ಕೂಡ ರದ್ದು ಮಾಡಿದೆ. ಹಾಗೆಯೇ ಭಾರತಕ್ಕೆ ಸೇರಿದ ವಿಮಾನಗಳು ತನ್ನ ವಾಯು ಪ್ರದೇಶದಲ್ಲಿ ಹಾರಾಟ ನಡೆಸದಂತೆ ಪಾಕಿಸ್ತಾನವೂ ನಿರ್ಬಂಧ ವಿಧಿಸಿದೆ. 

ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ನಂತರ ಕಾಶ್ಮೀರಿ ಮುಸ್ಲಿಂ ಯುವಕನೋರ್ವನ ವೀಡಿಯೋ ಸಖತ್ ವೈರಲ್: ಆತ ಹೇಳಿದ್ದೇನು

ಭಟ್ಕಳದಲ್ಲಿ ಇದ್ದಾರೆ 14 ಪಾಕಿಸ್ತಾನಿಗಳು, ಆದರೆ ದೇಶ ತೊರೆಯಬೇಕಾಗಿಲ್ಲ
 ಭಟ್ಕಳದಲ್ಲಿ 14 ಪಾಕಿಸ್ತಾನಿಯರಿದ್ದರೂ ಅವರು ಇಲ್ಲಿನವರನ್ನು ವಿವಾಹ ಆಗಿರುವುದರಿಂದ ಅವರು ದೇಶ ತೊರೆಯದೆ, ಇಲ್ಲೇ ವಾಸಿಸಬಹುದಾಗಿದೆ. ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ. ಆದರೆ ಇಲ್ಲಿರುವ ಬಹುತೇಕರು ಮಹಿಳೆಯರಾಗಿದ್ದು, ಅವರನ್ನು ಸ್ಥಳೀಯರನ್ನು ವಿವಾಹವಾಗಿದ್ದು, ದೀರ್ಘಕಾಲೀನ ವೀಸಾ ಹೊಂದಿದ್ದಾರೆ. ಹೀಗಾಗಿ ಸದ್ಯಕ್ಕಂತೂ ಇವರು ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. ಪ್ರಸ್ತುತ ಭಟ್ಕಳದಲ್ಲಿ ಒಟ್ಟು 14 ಪಾಕಿಸ್ತಾನಿ ಮೂಲದವರಿದ್ದು, ಅವರಲ್ಲಿ 10 ಮಹಿಳೆಯರಾಗಿದ್ದಾರೆ, ಮೂವರು ಮಕ್ಕಳು. ಇನ್ನೊಬ್ಬ ಮಹಿಳೆ ಅಕ್ರಮ ವಲಸಿಗರಾಗಿದ್ದು, ಅವರ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. 

ಈ ಮಹಿಳೆ ಬಾಂಗ್ಲಾದೇಶದ ಮೂಲಕ ನುಸುಳಿ ಭಟ್ಕಳಕ್ಕೆ ಬಂದು ಇಲ್ಲಿ ಸಂಸಾರ ಮಾಡುತ್ತಿದ್ದು, ಆಕೆಯ ಮೇಲೆ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿರುವುದರಿಂದ ಇಲ್ಲಿಯೇ ವಾಸವಾಗಿದ್ದಾಳೆ. ಭಟ್ಕಳಕ್ಕೂ ಹಾಗೂ ಪಾಕಿಸ್ತಾನಕ್ಕೂ ಬಹಳ ಹಿಂದಿನಿಂದಲೂ ನಂಟಿದೆ. ಇಲ್ಲಿನ ಅನೇಕರ ಸಂಬಂಧಿಗಳು ಪಾಕಿಸ್ತಾನದಲ್ಲಿ ಇರುವುದರಿಂದ ಇಂದಿಗೂ ಅವರ ಹಾಗೂ ಭಟ್ಕಳದವರ ನಡುವೆ ವೈವಾಹಿಕ ಸಂಬಂಧಗಳು ನಡೆಯುತ್ತಲೇ ಇರುತ್ತವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಪಾಕಿಸ್ತಾನದಿಂದ ಒಟ್ಟು 4 ಜನರು ಸಂದರ್ಶನ ವೀಸಾದಲ್ಲಿ ಬಂದು ಹೋಗಿದ್ದಾರೆ. ಆದರೆ, ಸದ್ಯ ಪಾಕಿಸ್ತಾನದಿಂದ ಪ್ರವಾಸಿ ವೀಸಾದೊಂದಿಗೆ ಬಂದಿದ್ದ ಪ್ರಜೆಗಳು ಯಾರೂ ಇಲ್ಲ ಎಂದು ತಿಳಿದು ಬಂದಿದೆ.

Latest Videos