ಇತ್ತೀಚೆಗೆ ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಸಂಸದ ಚರಂಜಿತ್ ಸಿಂಗ್ ಚನ್ನಿ ಗುರುವಾರ ನೀಡಿದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.

ನವದೆಹಲಿ: ಇತ್ತೀಚೆಗೆ ಲೋಕಸಭೆಯ ಸದಸ್ಯನಾಗಿ ಆಯ್ಕೆಯಾದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಪರ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಸಂಸದ ಚರಂಜಿತ್ ಸಿಂಗ್ ಚನ್ನಿ ಗುರುವಾರ ನೀಡಿದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. 20 ಲಕ್ಷ ಮತದಾರರ ಬೆಂಬಲದೊಂದಿಗೆ ಲೋಕಸಭೆಯ ಸದಸ್ಯನಾಗಿರುವ ಅಮೃತ್‌ಪಾಲ್‌ ಸಿಂಗ್‌ರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಜೈಲಿನಲ್ಲಿ ಇಡುವ ಮೂಲಕ ಅವರ ವಾಕ್‌ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ ಎಂದು ಚನ್ನಿ ಲೋಕಸಭೆಯಲ್ಲಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಮೃತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆ ರೀತಿ ಉಡುಗೆ ತೊಡುಗೆಯನ್ನು ಅಳವಡಿಸಿಕೊಂಡು 'ವಾರಿಸ್ ಪಂಜಾಬ್ ದಿ' ಸಂಘಟನೆಯ ಮುಖ್ಯಸ್ಥನಾಗಿರುವ ಅಮೃತ್‌ಪಾಲ್‌ ಸಿಂಗ್‌ ಮತ್ತು ಆತನ ಬೆಂಬಲಿಗರು, ಕಳೆದ ವರ್ಷ ಪಂಜಾಬ್‌ನ ಅಜ್ನಾಲಾ ಪೊಲೀಸ್ ಠಾಣೆ ಬಳಿ ಖಡ್ಗ ಮತ್ತು ಬಂದೂಕು ಹಿಡಿದು ಅರಾಜಕತೆ ಸೃಷ್ಟಿಸಿದ್ದರು. ಈ ಸಂಬಂಧ ಸಿಂಗ್ ಮತ್ತು ಆತನ 9 ಸಹಚರರನ್ನು ಜೈಲಿಗಟ್ಟಲಾಗಿತ್ತು. ಬಳಿಕ ಇತ್ತೀಚೆಗೆ ಆತ ಜೈಲಿಂದಲೇ ಸ್ಪರ್ಧಿಸಿ ಗೆದ್ದಿದ್ದಾನೆ. ಕಳೆದ ತಿಂಗಳು ಲೋಕಸಭಾ ಸದಸ್ಯನಾಗಿ ಪ್ರಮಾಣ ಸ್ವೀಕರಿಸಲು ಸಿಂಗ್ ನಾಲ್ಕು ದಿನಗಳ ಪರೋಲ್ ಪಡೆದು ಹೊರಬಂದಿದ್ದ. ಇಂತಹ ಹಿನ್ನೆಲೆ ಇರುವ ಅಮೃತ್‌ಪಾಲ್ ಸಿಂಗ್ ಪರ ಈಗ ಕಾಂಗ್ರೆಸ್ ನಾಯಕನ ಬ್ಯಾಟಿಂಗ್ ಈಗ ವಿವಾದ ಸೃಷ್ಟಿಸಿದೆ.

ಹರ್ಯಾಣ 19 ವರ್ಷದ ಗ್ಯಾಂಗ್‌ಸ್ಟರ್‌ ಕಡ್ಯಾನ್‌ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌, ಅಮೆರಿಕಕ್ಕೆ ಪರಾರಿ

ಚನ್ನಿಯತ್ತ ತೋಳೇರಿಸಿ ಬಂದ ಬಿಟ್ಟು

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದ ಚರಣಜಿತ್‌ ಸಿಂಗ್‌ ಚನ್ನಿ ಮಾತನಾಡುವಾಗ ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಅವರನ್ನು ಉಲ್ಲೇಖಿಸಿ, ‘ನಿಮ್ಮ ತಾತ, ಮಾಜಿ ಸಿಎಂ ಬೇಅಂತ್‌ ಸಿಂಗ್‌ ಹಂತಕನ ಗುಂಡಿನಿಂದ ಸಾಯಲಿಲ್ಲ. ನೀವು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದಾಗ ಸಾವನ್ನಪ್ಪಿದರು’ ಎಂದು ಕಿಚಾಯಿಸಿದರು. ಆಗ ಸಿಟ್ಟಾದ ಬಿಟ್ಟು, ಚನ್ನಿ ಹತ್ತಿರ ತೋಳೇರಿಸಿ ಬಂದಾಗ ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಡೆದರು.

ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!