ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಶಕೆ/ ಆಂಧ್ರ ಪ್ರದೇಶಕ್ಕೆ ಇನ್ನು ಮುಂದೆ ಮೂರು ರಾಜಧಾನಿ/ ಜಗನ್ ಸರ್ಕಾರದ ಹೊಸ ಆಲೋಚನೆಗೆ ಆಂಧ್ರ ರಾಜ್ಯಪಾಲರ ಅಂಕಿತ/ ಅಮರಾವತಿ, ವಿಶಾಖಪಟ್ಟಣ ಮತ್ತು ಕರ್ನೂಲು

ಅಮರವಾತಿ(ಜು. 31`) ಆಂಧ್ರ ಪ್ರದೇಶಕ್ಕೆ ಇನ್ನು ಮುಂದೆ ಒಂದಲ್ಲ- ಎರಡಲ್ಲ ಮೂರು ರಾಜಧಾನಿ. 'ಪ್ರತ್ಯೇಕಿತ' ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿ ಮಾಡುವ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಷಣ್ ಹರಿಚಂದನ್ ಅಂಕಿತ ಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮರಾವತಿ ಆಡಳಿತಾತ್ಮಕ ರಾಜಧಾನಿಯಾಗಿ ಮಾತ್ರ ಉಳಿಯಲಿದೆ. ಉಳಿದಂತೆ ವಿಶಾಖ ಪಟ್ಟಣ ಕಾರ್ಯ ನಿರ್ವಾಹಕ ರಾಜಧಾನಿಯಾಗಿರಲಿದ್ದು, ಕರ್ನೂಲು ಜಿಲ್ಲೆ ನ್ಯಾಯ ರಾಜಧಾನಿಯಾಗಿರಲಿದೆ. ಇದು ಜಗನ್ ಅವರ ಹೊಸ ಆಲೋಚನೆ.

ಆಂಧ್ರ ಪ್ರದೇಶದಲ್ಲಿ ಶಾಲೆ ಆರಂಭಕ್ಕೆ ದಿನಾಂಕ ಫಿಕ್ಸ್

ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ಕುರಿತು ಸರ್ಕಾರ ಅಲ್ಲಿನ ವಿಧಾನಸಭೆಯ ಅನುಮೋದನೆ ಪಡೆದಿತ್ತು. ವಿಧಾನಸಭೆಯಲ್ಲಿ ಆಂಧ್ರಪ್ರದೇಶ ಹಣಕಾಸು ಸಚಿವ ಬುಗ್ಗನ್​​ ರಾಜೇಂದ್ರನಾಥ್​​ ರೆಡ್ಡಿ, ರಾಜ್ಯಾಡಳಿತ ವಿಕೇಂದ್ರಿಕರಣ ಮಸೂದೆ ಮಂಡಿಸಿದ್ದರು. ಸಮಗ್ರ ಅಭಿವೃದ್ಧಿದಾಗಿ ಇದು ಅಗತ್ಯ ಎಂದು ಸಾರಿ ಹೇಳಿದ್ದರು.

ಆಂಧ್ರ ಪ್ರದೇಶ ವಿಧಾನ ಪರಿಷತ್ ನಲ್ಲೂ ಮಂಡಿಸಿದಾಗ ಟಿಡಿಪಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ ಅಲ್ಲಿಯೂ ಪಾಸಾಗಿ ರಾಜ್ಯಪಾಲರ ಅಂಕಿತಕ್ಕೆ ಹೋಗಿತ್ತು. ಈ ಮಸೂದೆ ಅನ್ವಯ ಆಂಧ್ರದಲ್ಲಿ ಮೂರು ದೊಡ್ಡ ಸ್ಮಾರ್ಟ್ ಸಿಟಿಗಳು ತಲೆ ಎತ್ತಲಿವೆ.