ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಫೋಟಕ ನೀಡಿ ಕೊಂದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಾಣಿ-ಪಕ್ಷಿಗಳ ಮೇಲೆ ಕ್ರೂರತೆ ಬದಲು ಪ್ರೀತಿ ತೋರಿಸಿ ಅನ್ನೋ ಮನವಿಯನ್ನು ಮಾಡಲಾಗುತ್ತಿದೆ. ಸೆಲೆಬ್ರೆಟಿಗಳು, ಕ್ರಿಕೆಟಿಗರು ಸೇರಿದಂತೆ ಹಲವರು ಘಟನೆಯನ್ನು ಖಂಡಿಸುತ್ತಿದ್ದಾರೆ. ಇದೀಗ ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಮರಳು ಶಿಲ್ಪದ ಮೂಲಕ ಘಟನೆ ಖಂಡಿಸಿ, ಸಂದೇಶ ರವಾನಿಸಿದ್ದಾರೆ.

ಪುರಿ(ಜೂ.04): ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಕೊಂದ ಪ್ರಕರಣ ದೇಶದ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಪ್ರಾಣಿ-ಪಕ್ಷಿಗಳ ಮೇಲೆ ಕ್ರೂರತೆ ತೋರಿಸಬೇಡಿ, ಪ್ರೀತಿ ತೋರಿಸಿ ಎಂದು ಹಲವರು ಮನವಿ ಮಾಡುತ್ತಿದ್ದಾರೆ. ಇದರೊಂದಿಗೆ ಆನೆಯನ್ನು ಕೊಂದ ಕಟುಕರಿಗೆ ಶಿಕ್ಷೆ ನೀಡಿ, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಿ ಅನ್ನೋ ಕೂಗು ಕೇಳಿಬರುತ್ತಿದೆ. ಇದೀಗ ಖ್ಯಾತ ಮರಳು ಶಿಲ್ಪಿ ಸುದರ್ಶನ ಪಟ್ನಾಯಕ್, ಘಟನೆಯನ್ನು ಖಂಡಿಸಿ ಪುರಿ ಸಮುದ್ರ ತೀರದಲ್ಲಿ ಮರುಳಿ ಶಿಲ್ಪ ರಚಿಸಿದ್ದಾರೆ. ಇದರೊಂದಿಗೆ ಸಂದೇಶವನ್ನು ಸಾರಿಸಿದ್ದಾರೆ.

ಗರ್ಭಿಣಿ ಆನೆಗೆ ಸ್ಫೋಟಕವಿಟ್ಟು ಹಣ್ಣು ನೀಡಿದ ದುರುಳರು, ನರಕವೇದನೆಯಿಂದ ಪ್ರಾಣಬಿಟ್ಟ ಗಜ!.

ತಾಯಿ ಹಾಗೂ ಮರಿ ಆನೆ ನೆಲಕ್ಕೆ ಬಿದ್ದು, ದಯನೀಯ ಸ್ಥಿತಿಯಿಂದ ನೋಡುತ್ತಿರುವ ಮರಳು ಶಿಲ್ಪರನ್ನು ಸುದರ್ಶನ್ ಪಟ್ನಾಯಕ್ ರಚಿಸಿದ್ದಾರೆ. ಮಾನವೀಯತೆ ಮತ್ತೆ ಸತ್ತು ಹೋಗಿದೆ ಎಂದು ಸುದರ್ಶನ್ ಪಟ್ನಾಯಕ್ ತಮ್ಮ ಮರಳು ಶಿಲ್ಪದ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿ ಸಂದೇಶ ಸಾರಿಸಿದ್ದಾರೆ.

Scroll to load tweet…

ಸುದರ್ಶನ ಪಟ್ನಾಯಕ್ ಮರಳು ಶಿಲ್ಪಕ್ಕೆ ಕ್ಷಣಾರ್ಧಲ್ಲೇ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾನವೀಯತೆ ಸತ್ತು ಹೋಗುತ್ತಿದೆ. ಆದರೆ ತಪ್ಪುಗಳಿಂದ ಎಚ್ಚೆತ್ತುಕೊಳ್ಳುತ್ತಿಲ್ಲ, ಕಲಿಯುತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. 

Scroll to load tweet…
Scroll to load tweet…
Scroll to load tweet…