ಪಾಕಿಸ್ತಾನ ವಿರುದ್ಧ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ನ ಬಗ್ಗೆ ಸರಣಿ ಪತ್ರಿಕಾಗೋಷ್ಠಿ ನಡೆಸಿದ್ದ ಕರ್ನಲ್‌ ಸೋಫಿಯಾ ಖುರೇಶಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮಿಕಾ ಸಿಂಗ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಹರ್ಯಾಣದ ಅಶೋಕ ವಿವಿಯ ಪ್ರಾಧ್ಯಾಪಕರನ್ನು ಬಂಧಿಸಲಾಗಿದೆ. 

ಚಂಡೀಗಢ (ಮೇ.19): ಪಾಕಿಸ್ತಾನ ವಿರುದ್ಧ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ನ ಬಗ್ಗೆ ಸರಣಿ ಪತ್ರಿಕಾಗೋಷ್ಠಿ ನಡೆಸಿದ್ದ ಕರ್ನಲ್‌ ಸೋಫಿಯಾ ಖುರೇಶಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮಿಕಾ ಸಿಂಗ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಹರ್ಯಾಣದ ಅಶೋಕ ವಿವಿಯ ಪ್ರಾಧ್ಯಾಪಕರನ್ನು ಬಂಧಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಧಿತ ಪ್ರಾಧ್ಯಾಪಕ ಅಲಿ ಖಾನ್‌ ಮಹ್ಮುದಾಬಾದ್‌ ಅವರು ಚಂಡೀಗಢದಲ್ಲಿನ ಅಶೋಕಾ ವಿವಿಯಲ್ಲಿ ರಾಜಕೀಯ ಶಾಸ್ತ್ರದ ಮುಖ್ಯಸ್ಥರಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ‘ಪತ್ರಿಕಾಗೋಷ್ಠಿ ಕೇವಲ ಬೂಟಾಟಿಕೆ. ಹೇಳುವುದೆಲ್ಲವೂ ಜಾರಿಯಾಗಬೇಕು’ ಎಂದು ಪೋಸ್ಟ್‌ ಹಾಕಿದ್ದರು. ಇದರ ವಿರುದ್ಧ ಸ್ಥಳೀಯ ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಹರ್ಯಾಣ ಮಹಿಳಾ ಆಯೋಗ ಸಹ ಅಲಿ ಖಾನ್‌ಗೆ ಸಮನ್ಸ್‌ ನೀಡಿದೆ.

ಇದನ್ನೂ ಓದಿ: ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಸಂಚು! ಜ್ಯೋತಿ ಕೊಟ್ಟ ಮಾಹಿತಿಯಿಂದಲೇ ಪಹಲ್ಗಾಂ ದಾಳಿ!?

ಯೋಗೇಶ್ ಜಥೇರಿ ಅವರು ಬಿಎನ್‌ಎಸ್‌ನ ಸೆಕ್ಷನ್ 196, 197, 152 ಮತ್ತು 299 ರ ಅಡಿಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಹರಿಯಾಣ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಅವರು ಬಿಎನ್‌ಎಸ್‌ನ ಸೆಕ್ಷನ್ 353, 79, 152, 169 (1) ರ ಅಡಿಯಲ್ಲಿ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ತನಿಖೆಗಾಗಿ ಪೊಲೀಸರು ಅವರ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.