ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಚೌಹಾಟನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಜೈಪುರ (ಫೆ.5): ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಚೋದನಕಾರಿ ಹೇಳಿಕೆಗಳ ಮೂಲಕ ದ್ವೇಷ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ಯೋಗ ಗುರು ರಾಮ್‌ದೇವ್ ವಿರುದ್ಧ ಭಾನುವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಚೌಹಾಟನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರ್ಹೈ ಚೌಹಾಟನ್‌ ಪೊಲೀಸ್ ಠಾಣೆ ಎಸ್‌ಎಚ್‌ಒ ಭೂತಾರಾಮ್ ಪ್ರಕಾರ, ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ) ಮತ್ತು 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು ಇತ್ಯಾದಿ)ಸೆಕ್ಷನ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ಫೆಬ್ರವರಿ 2 ರಂದು ನಡೆದ ದಾರ್ಶನಿಕರ ಸಭೆಯಲ್ಲಿ, ಹಿಂದೂ ಧರ್ಮವನ್ನು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಹೋಲಿಸುವಾಗ ಮುಸ್ಲಿಮರು ಭಯೋತ್ಪಾದನೆ ಮತ್ತು ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ರಾಮದೇವ್ ಆರೋಪಿಸಿದರು. ಹಿಂದೂ ಧರ್ಮವು ತನ್ನ ಅನುಯಾಯಿಗಳಿಗೆ ಒಳ್ಳೆಯದನ್ನು ಮಾಡಲು ಕಲಿಸಿದರೆ ಎರಡು ಧರ್ಮಗಳು ಮತಾಂತರದ ಮಾಡುವುದರಲ್ಲಿ ನಿರತವಾಗಿವೆ ಎನ್ನುವ ಅರ್ಥದಲ್ಲಿ ಅವರು ಮಾತನಾಡಿದ್ದರು.

'5 ಬಾರಿ ನಮಾಜ್‌ ಮಾಡು, ಬೇಕಾದ ಪಾಪಗಳನ್ನ ಮಾಡು.. ಮುಸ್ಲಿಮರಿಗೆ ಇದನ್ನೇ ಕಲಿಸೋದು' ಎಂದ ಬಾಬಾ ರಾಮ್‌ದೇವ್‌!

ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ಈಗಾಗಲೇ ಬಿಹಾರದಲ್ಲಿಯೂ ಒಂದು ಕೇಸ್ ದಾಖಲಿಸಲಾಗಿದೆ. ಬಿಹಾರ ಮೂಲದ ಹಕ್ಕುಗಳ ಕಾರ್ಯಕರ್ತ ತಮನ್ನಾ ಹಶ್ಮಿ, ರಾಮ್‌ದೇವ್‌ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.ಇತ್ತೀಚಿನ ಸಭೆಯಲ್ಲಿ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಅವರು ಆರೋಪ ಮಾಡಿದ್ದರು.

ಶೀಘ್ರದಲ್ಲೇ ಪಾಕ್‌ 4 ಹೋಳಾಗುತ್ತದೆ, 3 ಭಾಗ ಭಾರತದ ಜೊತೆ ವಿಲೀನವಾಗಲಿದೆ: ಬಾಬಾ ರಾಮ್‌ದೇವ್‌!

ಬಿಹಾರದ ಸ್ಥಳೀಯ ನ್ಯಾಯಾಲಯದಲ್ಲಿ ಹಶ್ಮಿ ಅವರು ರಾಮದೇವ್ ವಿರುದ್ಧ ದೂರು ದಾಖಲಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ವಿರುದ್ಧ ರಾಮ್‌ದೇವ್ ಅವರ ಹೇಳಿಕೆ ಆಕ್ಷೇಪಾರ್ಹವಾಗಿದೆ ಮತ್ತು ಇದು ಅವರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹಶ್ಮಿ ಮುಜಾಫರ್‌ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ ನಂತರ ಮಾಧ್ಯಮಕ್ಕೆ ತಿಳಿಸಿದ್ದಾರೆ.